<p><strong>ದಾವಣಗೆರೆ:</strong> ರಾಣೆಬೆನ್ನೂರು ಕಡೆಯಿಂದ ದಾವಣಗೆರೆ ಕಡೆಗೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಲಾರಿಯನ್ನು ಗ್ರಾಮಾಂತರ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅದರಲ್ಲಿ 50 ಕೆ.ಜಿ. ತೂಕದ 200 ಚೀಲ ಅಕ್ಕಿ ಪತ್ತೆಯಾಗಿದೆ.</p>.<p>ರಾಣೆಬೆನ್ನೂರು ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಗುರಣ್ಣ ಎಂಬ ವ್ಯಕ್ತಿ ಜನರಿಂದ ಕಡಿಮೆ ಬೆಲೆಗೆ ಪಡಿತರ ಅಕ್ಕಿಯನ್ನು ಖರೀದಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಕಳುಹಿಸಿಕೊಟ್ಟಿರುವುದಾಗಿ ಲಾರಿ ಚಾಲಕ ಶಿಕಾರಿಪುರ ತಾಲ್ಲೂಕಿನ ಮಂಜನಾಯ್ಕ ವಿಚಾರಣೆ ವೇಳೆ ತಿಳಿಸಿದ್ದಾರೆ.</p>.<p>ಸಿಪಿಐ ಮಂಜುನಾಥ, ಎಎಸ್ಐ ಜೋವಿತ್ರಾಜ್ ಮತ್ತು ಸಿಬ್ಬಂದಿ ಹೈವೆ ಗಸ್ತು ವಾಹನದಲ್ಲಿ ವಾಹನ ತಪಾಸಣೆ ಮಾಡುವಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ಡಿವೈಎಸ್ಪಿ ನರಸಿಂಹ ತಾಮ್ರಧ್ವಜ ಅವರ ಮಾರ್ಗದರ್ಶನದಲ್ಲಿ ಪಿಎಸ್ಐ ಸಂಜೀವ್ ಕುಮಾರ್ ಪ್ರಕರಣ ದಾಖಲಿಸಿಕೊಂಡಿದ್ದಾರೆ. ₹ 1.5 ಲಕ್ಷ ಮೌಲ್ಯದ ಅಕ್ಕಿ, ₹ 4 ಲಕ್ಷ ಮೌಲ್ಯದ ಲಾರಿಯನ್ನು ವಶಪಡಿಸಿಕೊಳ್ಳಲಾಗಿದೆ. ಲಾರಿ ಚಾಲಕನನ್ನು ಬಂಧಿಸಲಾಗಿದೆ.</p>.<p><strong>ಮರಳು ಸಾಗಾಟ: ವಶ</strong></p>.<p><strong>ದಾವಣಗೆರೆ:</strong> ಪರವಾನಗಿ ಇಲ್ಲದೇ ಟಿಪ್ಪರ್ನಲ್ಲಿ ಮರಳು ಸಾಗಾಟ ಮಾಡುತ್ತಿರುವುದನ್ನು ಗ್ರಾಮಾಂತರ ಪೊಲೀಸರು ಪತ್ತೆ ಹಚ್ಚಿದ್ದಾರೆ.</p>.<p>ಸಿಪಿಐ ಮಂಜುನಾಥ ಅವರಿಗೆ ಈ ಬಗ್ಗೆ ಮಾಹಿತಿ ಬಂದಿದ್ದರಿಂದ ಹಳೇಬಾತಿ ಬಳಿ ಪುಣೆ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ರಾತ್ರಿ ವಾಹನ ತಪಾಸಣೆ ಮಾಡುವ ವೇಳೆ ಟಿಪ್ಪರ್ ಬಂದಿದೆ. ನಿಲ್ಲಿಸಲು ಸೂಚನೆ ನೀಡಿದಾಗ ಟಿಪ್ಪರ್ ಚಾಲನೆಯಲ್ಲಿ ಇರುವಾಗಲೇ ಚಾಲಕ ಟಿಪ್ಪರ್ ಲಾರಿಯಿಂದ ಹಾರಿ ಪರಾರಿಯಾಗಿದ್ದಾನೆ.</p>.<p>ಮರಳು ಎಂಬುದು ಗೊತ್ತಾಗಬಾರದು ಎಂದು ಯಾವುದೋ ಬಿಳಿ ಪೌಡರ್ಅನ್ನು ಮೇಲೆ ಸುರಿದಿರುವುದು ಕಂಡು ಬಂದಿದೆ. ₹ 30 ಸಾವಿರ ಮೌಲ್ಯದ ಮರಳು, ₹ 5 ಲಕ್ಷ ಮೌಲ್ಯದ ಲಾರಿ ವಶಪಡಿಸಿಕೊಳ್ಳಲಾಗಿದೆ. ಡಿವೈಎಸ್ಪಿ ನರಸಿಂಹ ತಾಮ್ರಧ್ವಜ ಅವರ ಮಾರ್ಗದರ್ಶನದಲ್ಲಿ ಪಿಎಸ್ಐ ಸಂಜೀವ್ ಕುಮಾರ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ರಾಣೆಬೆನ್ನೂರು ಕಡೆಯಿಂದ ದಾವಣಗೆರೆ ಕಡೆಗೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಲಾರಿಯನ್ನು ಗ್ರಾಮಾಂತರ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅದರಲ್ಲಿ 50 ಕೆ.ಜಿ. ತೂಕದ 200 ಚೀಲ ಅಕ್ಕಿ ಪತ್ತೆಯಾಗಿದೆ.</p>.<p>ರಾಣೆಬೆನ್ನೂರು ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಗುರಣ್ಣ ಎಂಬ ವ್ಯಕ್ತಿ ಜನರಿಂದ ಕಡಿಮೆ ಬೆಲೆಗೆ ಪಡಿತರ ಅಕ್ಕಿಯನ್ನು ಖರೀದಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಕಳುಹಿಸಿಕೊಟ್ಟಿರುವುದಾಗಿ ಲಾರಿ ಚಾಲಕ ಶಿಕಾರಿಪುರ ತಾಲ್ಲೂಕಿನ ಮಂಜನಾಯ್ಕ ವಿಚಾರಣೆ ವೇಳೆ ತಿಳಿಸಿದ್ದಾರೆ.</p>.<p>ಸಿಪಿಐ ಮಂಜುನಾಥ, ಎಎಸ್ಐ ಜೋವಿತ್ರಾಜ್ ಮತ್ತು ಸಿಬ್ಬಂದಿ ಹೈವೆ ಗಸ್ತು ವಾಹನದಲ್ಲಿ ವಾಹನ ತಪಾಸಣೆ ಮಾಡುವಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ಡಿವೈಎಸ್ಪಿ ನರಸಿಂಹ ತಾಮ್ರಧ್ವಜ ಅವರ ಮಾರ್ಗದರ್ಶನದಲ್ಲಿ ಪಿಎಸ್ಐ ಸಂಜೀವ್ ಕುಮಾರ್ ಪ್ರಕರಣ ದಾಖಲಿಸಿಕೊಂಡಿದ್ದಾರೆ. ₹ 1.5 ಲಕ್ಷ ಮೌಲ್ಯದ ಅಕ್ಕಿ, ₹ 4 ಲಕ್ಷ ಮೌಲ್ಯದ ಲಾರಿಯನ್ನು ವಶಪಡಿಸಿಕೊಳ್ಳಲಾಗಿದೆ. ಲಾರಿ ಚಾಲಕನನ್ನು ಬಂಧಿಸಲಾಗಿದೆ.</p>.<p><strong>ಮರಳು ಸಾಗಾಟ: ವಶ</strong></p>.<p><strong>ದಾವಣಗೆರೆ:</strong> ಪರವಾನಗಿ ಇಲ್ಲದೇ ಟಿಪ್ಪರ್ನಲ್ಲಿ ಮರಳು ಸಾಗಾಟ ಮಾಡುತ್ತಿರುವುದನ್ನು ಗ್ರಾಮಾಂತರ ಪೊಲೀಸರು ಪತ್ತೆ ಹಚ್ಚಿದ್ದಾರೆ.</p>.<p>ಸಿಪಿಐ ಮಂಜುನಾಥ ಅವರಿಗೆ ಈ ಬಗ್ಗೆ ಮಾಹಿತಿ ಬಂದಿದ್ದರಿಂದ ಹಳೇಬಾತಿ ಬಳಿ ಪುಣೆ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ರಾತ್ರಿ ವಾಹನ ತಪಾಸಣೆ ಮಾಡುವ ವೇಳೆ ಟಿಪ್ಪರ್ ಬಂದಿದೆ. ನಿಲ್ಲಿಸಲು ಸೂಚನೆ ನೀಡಿದಾಗ ಟಿಪ್ಪರ್ ಚಾಲನೆಯಲ್ಲಿ ಇರುವಾಗಲೇ ಚಾಲಕ ಟಿಪ್ಪರ್ ಲಾರಿಯಿಂದ ಹಾರಿ ಪರಾರಿಯಾಗಿದ್ದಾನೆ.</p>.<p>ಮರಳು ಎಂಬುದು ಗೊತ್ತಾಗಬಾರದು ಎಂದು ಯಾವುದೋ ಬಿಳಿ ಪೌಡರ್ಅನ್ನು ಮೇಲೆ ಸುರಿದಿರುವುದು ಕಂಡು ಬಂದಿದೆ. ₹ 30 ಸಾವಿರ ಮೌಲ್ಯದ ಮರಳು, ₹ 5 ಲಕ್ಷ ಮೌಲ್ಯದ ಲಾರಿ ವಶಪಡಿಸಿಕೊಳ್ಳಲಾಗಿದೆ. ಡಿವೈಎಸ್ಪಿ ನರಸಿಂಹ ತಾಮ್ರಧ್ವಜ ಅವರ ಮಾರ್ಗದರ್ಶನದಲ್ಲಿ ಪಿಎಸ್ಐ ಸಂಜೀವ್ ಕುಮಾರ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>