<p><strong>ದಾವಣಗೆರೆ:</strong> ಜಾತಿ, ಧರ್ಮ, ಲಿಂಗ ಬೇಧವಿಲ್ಲದೇ ಸರ್ವರಿಗೂ ಅನ್ವಯವಾಗುವಂತಹ ಸಂವಿಧಾನವು ದೇಶದ ಪವಿತ್ರ ಗ್ರಂಥ ಎಂದು ಶಾಸಕ ಕೆ.ಎಸ್. ಬಸವಂತಪ್ಪ ಅಭಿಪ್ರಾಯಪಟ್ಟರು.</p>.<p>ಇಲ್ಲಿನ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಬುಧವಾರ ಏರ್ಪಡಿಸಿದ್ದ ಸಂವಿಧಾನ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸಂವಿಧಾನವು ಮಹಿಳೆಯರಿಗೆ ಸಮಾನತೆ ಕಲ್ಪಿಸಿತು. ಪುರುಷರಷ್ಟೇ ಸಮಾನವಾಗಿ ಏಳಿಗೆ ಹೊಂದಲು ಅವಕಾಶ ಮಾಡಿಕೊಟ್ಟಿತು. ಸಂವಿಧಾನ ರಚನೆಯಲ್ಲಿಯೂ ಅನೇಕ ಮಹಿಳೆಯರ ಶ್ರಮವಿದೆ’ ಎಂದು ಅವರು ಹೇಳಿದರು.</p>.<p>‘ನ.26ನ್ನು ಸಂವಿಧಾನ ದಿನವನ್ನಾಗಿ 2015ರಲ್ಲಿ ಘೋಷಣೆ ಮಾಡಲಾಯಿತು. ಅಂದಿನಿಂದ ಸಂವಿಧಾನ ಸಮಾರ್ಪಣೆಯ ಈ ದಿನವನ್ನು ಆಚರಿಸಲಾಗುತ್ತಿದೆ. ಸಂವಿಧಾನಕ್ಕೆ ದೇಶದಲ್ಲಿ ಸರ್ವೋಚ್ಛ ಸ್ಥಾನವಿದೆ’ ಎಂದರು.</p>.<p>‘ರಾಷ್ಟ್ರದ ಏಕತೆ, ಸಮಗ್ರತೆ, ವ್ಯಕ್ತಿ ಗೌರವ ಹಾಗೂ ಸಾಮಾಜಿಕ ಶಾಂತಿಯನ್ನು ಸಂವಿಧಾನ ಕಾಪಾಡುತ್ತಿದೆ. ಆರ್ಥಿಕ, ರಾಜಕೀಯ, ಸಾಮಾಜಿಕ ಸಮಾನತೆಯನ್ನು ಪ್ರತಿಯೊಬ್ಬರಿಗೂ ಕಲ್ಪಿಸಿದೆ. ಹಕ್ಕುಗಳ ಜೊತೆಗೆ ಕರ್ತವ್ಯಗಳನ್ನು ಅರಿತುಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>‘ಸಂವಿಧಾನದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಸಂವಿಧಾನ ದಿನಾಚರಣೆಯ ಮುಖ್ಯ ಉದ್ದೇಶ. ಅಂಬೇಡ್ಕರ್ ಕೊಡುಗೆ, ಜೀವನವನ್ನು ಪ್ರತಿಯೊಬ್ಬರೂ ಅರಿಯಬೇಕಿದೆ. ಸಂವಿಧಾನವನ್ನು ಸಂಪೂರ್ಣವಾಗಿ ಕೈಬರಹದಲ್ಲಿ ರಚಿಸಲಾಗಿದೆ. ಇದನ್ನು ಈಗಲೂ ಸಂರಕ್ಷಿಸಿ ಇಡಲಾಗಿದೆ’ ಎಂದು ಎವಿಕೆ ಕಾಲೇಜು ಉಪನ್ಯಾಸಕ ರಣಧೀರ್ ಹೇಳಿದರು.</p>.<p>‘ಭಾರತದ ಸಂವಿಧಾನ ವಿಶ್ವದಲ್ಲಿಯೇ ಅತಿದೊಡ್ಡದು. ಜಗತ್ತಿನ ಹಲವು ಸಂವಿಧಾನದ ಅಂಶಗಳನ್ನು ಎರವಲು ಪಡೆದು ಭಾರತದ ನೆಲಕ್ಕೆ ಅನ್ವಯವಾಗುವಂತೆ ರಚಿಸಲಾಗಿದೆ. ಸಂವಿಧಾನ ಕಾದಂಬರಿ ಅಥವಾ ಕವಿತೆಯಲ್ಲ. ದೇಶದ ಹಲವು ಸಮಸ್ಯೆಗಳಿಗೆ ಈ ಗ್ರಂಥ ಪರಿಹಾರ ನೀಡಿದೆ’ ಎಂದರು.</p>.<p>ಸಂವಿಧಾನ ದಿನಾಚರಣೆ ಅಂಗವಾಗಿ ನಗರದಲ್ಲಿ ಜಾಗೃತಿ ಜಾಥ ನಡೆಯಿತು. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಆರಂಭವಾದ ಮೆರವಣಿಗೆ ಹೈಸ್ಕೂಲ್ ಮೈದಾನದಲ್ಲಿ ಮುಕ್ತಾಯಗೊಂಡಿತು. ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ ಸಂವಿಧಾನ ಪೀಠಿಕೆಯನ್ನು ಓದಿದರು.</p>.<p>ಪಾಲಿಕೆ ಆಯುಕ್ತೆ ರೇಣುಕಾ, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕಿ ರೇಷ್ಮಾ ಕೌಸರ್, ಆಹಾರ ಇಲಾಖೆಯ ಜಂಟಿ ನಿರ್ದೇಶಕರಾದ ಮಧುಸೂದನ್, ಡಿಡಿಪಿಐ ಜಿ.ಕೊಟ್ರೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಜಾತಿ, ಧರ್ಮ, ಲಿಂಗ ಬೇಧವಿಲ್ಲದೇ ಸರ್ವರಿಗೂ ಅನ್ವಯವಾಗುವಂತಹ ಸಂವಿಧಾನವು ದೇಶದ ಪವಿತ್ರ ಗ್ರಂಥ ಎಂದು ಶಾಸಕ ಕೆ.ಎಸ್. ಬಸವಂತಪ್ಪ ಅಭಿಪ್ರಾಯಪಟ್ಟರು.</p>.<p>ಇಲ್ಲಿನ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಬುಧವಾರ ಏರ್ಪಡಿಸಿದ್ದ ಸಂವಿಧಾನ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸಂವಿಧಾನವು ಮಹಿಳೆಯರಿಗೆ ಸಮಾನತೆ ಕಲ್ಪಿಸಿತು. ಪುರುಷರಷ್ಟೇ ಸಮಾನವಾಗಿ ಏಳಿಗೆ ಹೊಂದಲು ಅವಕಾಶ ಮಾಡಿಕೊಟ್ಟಿತು. ಸಂವಿಧಾನ ರಚನೆಯಲ್ಲಿಯೂ ಅನೇಕ ಮಹಿಳೆಯರ ಶ್ರಮವಿದೆ’ ಎಂದು ಅವರು ಹೇಳಿದರು.</p>.<p>‘ನ.26ನ್ನು ಸಂವಿಧಾನ ದಿನವನ್ನಾಗಿ 2015ರಲ್ಲಿ ಘೋಷಣೆ ಮಾಡಲಾಯಿತು. ಅಂದಿನಿಂದ ಸಂವಿಧಾನ ಸಮಾರ್ಪಣೆಯ ಈ ದಿನವನ್ನು ಆಚರಿಸಲಾಗುತ್ತಿದೆ. ಸಂವಿಧಾನಕ್ಕೆ ದೇಶದಲ್ಲಿ ಸರ್ವೋಚ್ಛ ಸ್ಥಾನವಿದೆ’ ಎಂದರು.</p>.<p>‘ರಾಷ್ಟ್ರದ ಏಕತೆ, ಸಮಗ್ರತೆ, ವ್ಯಕ್ತಿ ಗೌರವ ಹಾಗೂ ಸಾಮಾಜಿಕ ಶಾಂತಿಯನ್ನು ಸಂವಿಧಾನ ಕಾಪಾಡುತ್ತಿದೆ. ಆರ್ಥಿಕ, ರಾಜಕೀಯ, ಸಾಮಾಜಿಕ ಸಮಾನತೆಯನ್ನು ಪ್ರತಿಯೊಬ್ಬರಿಗೂ ಕಲ್ಪಿಸಿದೆ. ಹಕ್ಕುಗಳ ಜೊತೆಗೆ ಕರ್ತವ್ಯಗಳನ್ನು ಅರಿತುಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>‘ಸಂವಿಧಾನದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಸಂವಿಧಾನ ದಿನಾಚರಣೆಯ ಮುಖ್ಯ ಉದ್ದೇಶ. ಅಂಬೇಡ್ಕರ್ ಕೊಡುಗೆ, ಜೀವನವನ್ನು ಪ್ರತಿಯೊಬ್ಬರೂ ಅರಿಯಬೇಕಿದೆ. ಸಂವಿಧಾನವನ್ನು ಸಂಪೂರ್ಣವಾಗಿ ಕೈಬರಹದಲ್ಲಿ ರಚಿಸಲಾಗಿದೆ. ಇದನ್ನು ಈಗಲೂ ಸಂರಕ್ಷಿಸಿ ಇಡಲಾಗಿದೆ’ ಎಂದು ಎವಿಕೆ ಕಾಲೇಜು ಉಪನ್ಯಾಸಕ ರಣಧೀರ್ ಹೇಳಿದರು.</p>.<p>‘ಭಾರತದ ಸಂವಿಧಾನ ವಿಶ್ವದಲ್ಲಿಯೇ ಅತಿದೊಡ್ಡದು. ಜಗತ್ತಿನ ಹಲವು ಸಂವಿಧಾನದ ಅಂಶಗಳನ್ನು ಎರವಲು ಪಡೆದು ಭಾರತದ ನೆಲಕ್ಕೆ ಅನ್ವಯವಾಗುವಂತೆ ರಚಿಸಲಾಗಿದೆ. ಸಂವಿಧಾನ ಕಾದಂಬರಿ ಅಥವಾ ಕವಿತೆಯಲ್ಲ. ದೇಶದ ಹಲವು ಸಮಸ್ಯೆಗಳಿಗೆ ಈ ಗ್ರಂಥ ಪರಿಹಾರ ನೀಡಿದೆ’ ಎಂದರು.</p>.<p>ಸಂವಿಧಾನ ದಿನಾಚರಣೆ ಅಂಗವಾಗಿ ನಗರದಲ್ಲಿ ಜಾಗೃತಿ ಜಾಥ ನಡೆಯಿತು. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಆರಂಭವಾದ ಮೆರವಣಿಗೆ ಹೈಸ್ಕೂಲ್ ಮೈದಾನದಲ್ಲಿ ಮುಕ್ತಾಯಗೊಂಡಿತು. ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ ಸಂವಿಧಾನ ಪೀಠಿಕೆಯನ್ನು ಓದಿದರು.</p>.<p>ಪಾಲಿಕೆ ಆಯುಕ್ತೆ ರೇಣುಕಾ, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕಿ ರೇಷ್ಮಾ ಕೌಸರ್, ಆಹಾರ ಇಲಾಖೆಯ ಜಂಟಿ ನಿರ್ದೇಶಕರಾದ ಮಧುಸೂದನ್, ಡಿಡಿಪಿಐ ಜಿ.ಕೊಟ್ರೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>