<p><strong>ದಾವಣಗೆರೆ</strong>: ಜಾಗತಿಕ ವಿದ್ಯಮಾನಗಳ ನಡುವೆಯೂ ದೇಶದ ಭದ್ರತೆಗೆ ಧಕ್ಕೆ ಉಂಟಾಗದಿರಲು ಸಂವಿಧಾನವೇ ಕಾರಣ. ಭಾರತದಲ್ಲಿ ಸಂವಿಧಾನವೇ ಸರ್ವಶ್ರೇಷ್ಠ, ಅದೇ ಪರಮೋಚ್ಛ ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಬಿ.ಡಿ. ಕುಂಬಾರ ಅಭಿಪ್ರಾಯಪಟ್ಟರು.</p>.<p>ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಸೋಮವಾರ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.</p>.<p>‘ಗಣರಾಜ್ಯ ದಿನವು ದೇಶದಲ್ಲಿ ಸಮಾನತೆ, ಸಾಮಾಜಿಕ ನ್ಯಾಯ, ಆರ್ಥಿಕ ಸಮಾನತೆಯ ಮೂಲಕ ಎಲ್ಲ ಭಾರತೀಯರನ್ನು ಭಾವನಾತ್ಮಕವಾಗಿ ಒಗ್ಗೂಡಿಸುವ ಬೆಸುಗೆಯಾಗಿದೆ. ಭಾಷೆ, ಪ್ರದೇಶ, ಜಾತಿ - ಧರ್ಮಗಳ ಭೇದವಿಲ್ಲದೆ ಸಂವಿಧಾನವನ್ನು ಎಲ್ಲರೂ ಒಪ್ಪಿದ್ದಾರೆ’ ಎಂದರು.</p>.<p>‘ದೇಶದಲ್ಲಿ ಪ್ರತಿಯೊಬ್ಬರಿಗೂ ಸಿಕ್ಕಿರುವ ಸ್ವಾತಂತ್ರ್ಯ, ಅಭಿವ್ಯಕ್ತಿ, ಅಡಳಿತ, ನೈತಿಕತೆ, ಜೀವನ, ಉದ್ಯೋಗ, ಹಕ್ಕು ಎಲ್ಲವೂ ಸಂವಿಧಾನದ ಕೊಡುಗೆ. ಹೀಗಾಗಿ ಪ್ರತಿಯೊಬ್ಬರೂ ಸಂವಿಧಾನಿಕ ಮೌಲ್ಯಗಳನ್ನು ಅನುಸರಿಸಬೇಕು, ಗೌರವಿಸಬೇಕು’ ಎಂದು ಸಲಹೆ ನೀಡಿದರು.</p>.<p>ಪರೀಕ್ಷಾಂಗ ವಿಭಾಗದ ಕುಲಸಚಿವ ಪ್ರೊ.ಸಿ.ಕೆ. ರಮೇಶ, ಡೀನ್ಗಳಾದ ಪ್ರೊ.ವೆಂಕಟೇಶ ಕೆ., ಪ್ರೊ.ಲೋಕೇಶ ಎಂ.ಯು. ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಜಾಗತಿಕ ವಿದ್ಯಮಾನಗಳ ನಡುವೆಯೂ ದೇಶದ ಭದ್ರತೆಗೆ ಧಕ್ಕೆ ಉಂಟಾಗದಿರಲು ಸಂವಿಧಾನವೇ ಕಾರಣ. ಭಾರತದಲ್ಲಿ ಸಂವಿಧಾನವೇ ಸರ್ವಶ್ರೇಷ್ಠ, ಅದೇ ಪರಮೋಚ್ಛ ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಬಿ.ಡಿ. ಕುಂಬಾರ ಅಭಿಪ್ರಾಯಪಟ್ಟರು.</p>.<p>ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಸೋಮವಾರ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.</p>.<p>‘ಗಣರಾಜ್ಯ ದಿನವು ದೇಶದಲ್ಲಿ ಸಮಾನತೆ, ಸಾಮಾಜಿಕ ನ್ಯಾಯ, ಆರ್ಥಿಕ ಸಮಾನತೆಯ ಮೂಲಕ ಎಲ್ಲ ಭಾರತೀಯರನ್ನು ಭಾವನಾತ್ಮಕವಾಗಿ ಒಗ್ಗೂಡಿಸುವ ಬೆಸುಗೆಯಾಗಿದೆ. ಭಾಷೆ, ಪ್ರದೇಶ, ಜಾತಿ - ಧರ್ಮಗಳ ಭೇದವಿಲ್ಲದೆ ಸಂವಿಧಾನವನ್ನು ಎಲ್ಲರೂ ಒಪ್ಪಿದ್ದಾರೆ’ ಎಂದರು.</p>.<p>‘ದೇಶದಲ್ಲಿ ಪ್ರತಿಯೊಬ್ಬರಿಗೂ ಸಿಕ್ಕಿರುವ ಸ್ವಾತಂತ್ರ್ಯ, ಅಭಿವ್ಯಕ್ತಿ, ಅಡಳಿತ, ನೈತಿಕತೆ, ಜೀವನ, ಉದ್ಯೋಗ, ಹಕ್ಕು ಎಲ್ಲವೂ ಸಂವಿಧಾನದ ಕೊಡುಗೆ. ಹೀಗಾಗಿ ಪ್ರತಿಯೊಬ್ಬರೂ ಸಂವಿಧಾನಿಕ ಮೌಲ್ಯಗಳನ್ನು ಅನುಸರಿಸಬೇಕು, ಗೌರವಿಸಬೇಕು’ ಎಂದು ಸಲಹೆ ನೀಡಿದರು.</p>.<p>ಪರೀಕ್ಷಾಂಗ ವಿಭಾಗದ ಕುಲಸಚಿವ ಪ್ರೊ.ಸಿ.ಕೆ. ರಮೇಶ, ಡೀನ್ಗಳಾದ ಪ್ರೊ.ವೆಂಕಟೇಶ ಕೆ., ಪ್ರೊ.ಲೋಕೇಶ ಎಂ.ಯು. ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>