<p><strong>ದಾವಣಗೆರೆ</strong>: ಜಿಲ್ಲೆಯನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಅನುಷ್ಠಾನಗೊಳಿಸಿದ ‘ಸಾಗರಮಿತ್ರ’ ಅಭಿಯಾನವೂ ಸೇರಿದಂತೆ ಪರಿಸರ ಸ್ನೇಹಿ ಕಾರ್ಯಚಟುವಟಿಕೆಗಳಿಗಾಗಿ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅವರು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ‘ಇಂದಿರಾ ಪ್ರಿಯದರ್ಶಿನಿ’ ಪರಿಸರ ಪ್ರಶಸ್ತಿಗೆ ಭಾಜನರಾಗಿದ್ದಾರೆ.</p>.<p>ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ ಅಂಗವಾಗಿ ನೀಡುತ್ತಿರುವ ರಾಜ್ಯಮಟ್ಟದ ಈ ಪ್ರಶಸ್ತಿಯು ₹ 1 ಲಕ್ಷ ನಗದು ಹಾಗೂ ಪ್ರಶಸ್ತಿಪತ್ರ ಒಳಗೊಂಡಿದೆ. ಬೆಂಗಳೂರಿನಲ್ಲಿ ಬುಧವಾರ ನಡೆಯಲಿರುವ ‘ಸುವರ್ಣ ಮಹೋತ್ಸವ ಸಮಾರಂಭ’ದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.</p>.<p>ಪ್ಲಾಸ್ಟಿಕ್ ನಿರ್ಮೂಲನೆಗೆ ಮಹಾರಾಷ್ಟ್ರದ ಪುಣೆಯ ‘ಸಾಗರಮಿತ್ರ’ ಸಂಸ್ಥೆ ನಡೆಸಿದ ಪ್ರಯತ್ನದಿಂದ ಪ್ರೇರಣೆಗೊಂಡ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿಲ್ಲೆಯಲ್ಲೂ ಈ ಅಭಿಯಾನ ಆರಂಭಿಸಿದರು. 75,000 ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಗಿದ್ದು, 3 ಟನ್ಗೂ ಅಧಿಕ ಪ್ಲಾಸ್ಟಿಕ್ ಸಂಗ್ರಹಿಸಲಾಗಿದೆ. ಜಿಲ್ಲಾಡಳಿತ ಭವನ ಸೇರಿದಂತೆ ಹಲವು ಸರ್ಕಾರಿ ಕಚೇರಿಗಳು ಪ್ಲಾಸ್ಟಿಕ್ ಮುಕ್ತವಾಗಿವೆ. ಪ್ಲಾಸ್ಟಿಕ್ ಬಾಟಲಿಯನ್ನು ಪುನರ್ಬಳಕೆ ಮಾಡುವ ಯಂತ್ರಗಳನ್ನು ಹಲವೆಡೆ ಅಳವಡಿಸಲಾಗಿದೆ.</p>.<p>‘ಜಿಲ್ಲೆಯನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ನಿರಂತರವಾಗಿ ಪ್ರಯತ್ನಿಸಲಾಗುತ್ತಿದೆ. ಪ್ಲಾಸ್ಟಿಕ್ ಗೋದಾಮು, ಅಂಡಿಗಳ ಮೇಲೆ ದಾಳಿ ನಡೆಸಿ ಜಪ್ತಿ ಮಾಡಲಾಗಿದೆ. ಈವರೆಗೆ ₹ 70 ಲಕ್ಷಕ್ಕೂ ಅಧಿಕ ದಂಡ ವಿಧಿಸಲಾಗಿದೆ. ಈ ಪ್ರಕ್ರಿಯೆಯಲ್ಲಿ ಜಿಲ್ಲೆಯ ಎಲ್ಲ ಇಲಾಖೆಯ ಅಧಿಕಾರಿಗಳ ಪಾತ್ರವಿದೆ’ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಸಂತಸ ವ್ಯಕ್ತಪಡಿಸಿದರು.</p>.<p> ‘ಸಾಗರಮಿತ್ರ’ ಅಭಿಯಾನಕ್ಕೆ ಮೆಚ್ಚುಗೆ ಪ್ಲಾಸ್ಟಿಕ್ ಮುಕ್ತವಾಗಿರುವ ಜಿಲ್ಲಾಡಳಿತ ಭವನ ಬೆಂಗಳೂರಿನಲ್ಲಿ ಇಂದು ಪ್ರಶಸ್ತಿ ಪ್ರದಾನ</p>.<p> <strong>ಕಸ ವಿಲೇವಾರಿ ಕೊಳಚೆ ನೀರು ಶುದ್ಧೀಕರಣ ಸೇರಿ ಹಲವು ವಿಚಾರಗಳಲ್ಲಿ ಜಿಲ್ಲೆ ಮೆಚ್ಚುಗೆಗೆ ಪಾತ್ರವಾಗಿದೆ. ಈ ಪ್ರಶಸ್ತಿಯಿಂದ ಜವಾಬ್ದಾರಿ ಹೆಚ್ಚಾಗಿದೆ </strong></p><p><strong>-ಜಿ.ಎಂ. ಗಂಗಾಧರಸ್ವಾಮಿ ಜಿಲ್ಲಾಧಿಕಾರಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಜಿಲ್ಲೆಯನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಅನುಷ್ಠಾನಗೊಳಿಸಿದ ‘ಸಾಗರಮಿತ್ರ’ ಅಭಿಯಾನವೂ ಸೇರಿದಂತೆ ಪರಿಸರ ಸ್ನೇಹಿ ಕಾರ್ಯಚಟುವಟಿಕೆಗಳಿಗಾಗಿ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅವರು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ‘ಇಂದಿರಾ ಪ್ರಿಯದರ್ಶಿನಿ’ ಪರಿಸರ ಪ್ರಶಸ್ತಿಗೆ ಭಾಜನರಾಗಿದ್ದಾರೆ.</p>.<p>ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ ಅಂಗವಾಗಿ ನೀಡುತ್ತಿರುವ ರಾಜ್ಯಮಟ್ಟದ ಈ ಪ್ರಶಸ್ತಿಯು ₹ 1 ಲಕ್ಷ ನಗದು ಹಾಗೂ ಪ್ರಶಸ್ತಿಪತ್ರ ಒಳಗೊಂಡಿದೆ. ಬೆಂಗಳೂರಿನಲ್ಲಿ ಬುಧವಾರ ನಡೆಯಲಿರುವ ‘ಸುವರ್ಣ ಮಹೋತ್ಸವ ಸಮಾರಂಭ’ದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.</p>.<p>ಪ್ಲಾಸ್ಟಿಕ್ ನಿರ್ಮೂಲನೆಗೆ ಮಹಾರಾಷ್ಟ್ರದ ಪುಣೆಯ ‘ಸಾಗರಮಿತ್ರ’ ಸಂಸ್ಥೆ ನಡೆಸಿದ ಪ್ರಯತ್ನದಿಂದ ಪ್ರೇರಣೆಗೊಂಡ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿಲ್ಲೆಯಲ್ಲೂ ಈ ಅಭಿಯಾನ ಆರಂಭಿಸಿದರು. 75,000 ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಗಿದ್ದು, 3 ಟನ್ಗೂ ಅಧಿಕ ಪ್ಲಾಸ್ಟಿಕ್ ಸಂಗ್ರಹಿಸಲಾಗಿದೆ. ಜಿಲ್ಲಾಡಳಿತ ಭವನ ಸೇರಿದಂತೆ ಹಲವು ಸರ್ಕಾರಿ ಕಚೇರಿಗಳು ಪ್ಲಾಸ್ಟಿಕ್ ಮುಕ್ತವಾಗಿವೆ. ಪ್ಲಾಸ್ಟಿಕ್ ಬಾಟಲಿಯನ್ನು ಪುನರ್ಬಳಕೆ ಮಾಡುವ ಯಂತ್ರಗಳನ್ನು ಹಲವೆಡೆ ಅಳವಡಿಸಲಾಗಿದೆ.</p>.<p>‘ಜಿಲ್ಲೆಯನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ನಿರಂತರವಾಗಿ ಪ್ರಯತ್ನಿಸಲಾಗುತ್ತಿದೆ. ಪ್ಲಾಸ್ಟಿಕ್ ಗೋದಾಮು, ಅಂಡಿಗಳ ಮೇಲೆ ದಾಳಿ ನಡೆಸಿ ಜಪ್ತಿ ಮಾಡಲಾಗಿದೆ. ಈವರೆಗೆ ₹ 70 ಲಕ್ಷಕ್ಕೂ ಅಧಿಕ ದಂಡ ವಿಧಿಸಲಾಗಿದೆ. ಈ ಪ್ರಕ್ರಿಯೆಯಲ್ಲಿ ಜಿಲ್ಲೆಯ ಎಲ್ಲ ಇಲಾಖೆಯ ಅಧಿಕಾರಿಗಳ ಪಾತ್ರವಿದೆ’ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಸಂತಸ ವ್ಯಕ್ತಪಡಿಸಿದರು.</p>.<p> ‘ಸಾಗರಮಿತ್ರ’ ಅಭಿಯಾನಕ್ಕೆ ಮೆಚ್ಚುಗೆ ಪ್ಲಾಸ್ಟಿಕ್ ಮುಕ್ತವಾಗಿರುವ ಜಿಲ್ಲಾಡಳಿತ ಭವನ ಬೆಂಗಳೂರಿನಲ್ಲಿ ಇಂದು ಪ್ರಶಸ್ತಿ ಪ್ರದಾನ</p>.<p> <strong>ಕಸ ವಿಲೇವಾರಿ ಕೊಳಚೆ ನೀರು ಶುದ್ಧೀಕರಣ ಸೇರಿ ಹಲವು ವಿಚಾರಗಳಲ್ಲಿ ಜಿಲ್ಲೆ ಮೆಚ್ಚುಗೆಗೆ ಪಾತ್ರವಾಗಿದೆ. ಈ ಪ್ರಶಸ್ತಿಯಿಂದ ಜವಾಬ್ದಾರಿ ಹೆಚ್ಚಾಗಿದೆ </strong></p><p><strong>-ಜಿ.ಎಂ. ಗಂಗಾಧರಸ್ವಾಮಿ ಜಿಲ್ಲಾಧಿಕಾರಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>