ಹಿರಿಯ ಕವಿ, ಕಾರವಾರದ ಯಕ್ಷಗಾನ ಕಲಾವಿದ ನಾಗೇಶ್ ಅಣ್ವೇಕರ್ ಅಧ್ಯಕ್ಷತೆ ವಹಿಸಿದ್ದರು. ಹಾಸನ ಜಿಲ್ಲೆಯ ಹಿರಿಯ ಕವಯತ್ರಿ ಪದ್ಮಾಮೂರ್ತಿ, ವಿಜಯಪುರ ಸಿದ್ದೇಶ್ವರ ಸಾಹಿತ್ಯ ವೇದಿಕೆಯ ಸಂಸ್ಥಾಪಕರಾದ ಗಿರಿಜಾ ಮಾಲೀ ಪಾಟೀಲ್, ಸಿದ್ಧಗಂಗಾ ವಿದ್ಯಾಸಂಸ್ಥೆಯ ಮುಖ್ಯಸ್ಥೆ ಜಸ್ಟಿನ್ ಡಿಸೋಜ, ಹರಿಹರದ ಹಿರಿಯ ಕವಿ ಸುಬ್ರಮಣ್ಯ ನಾಡಿಗೇರ್, ಹಿರಿಯೂರು ವಿಶ್ವ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಸ್ಥೆಯ ಇ. ರವೀಶ, ವಿಜಯನಗರ ಜಿಲ್ಲೆಯ ಯುವ ಕವಿ ಸೋಮನಾಥ ಸಾಲೀಮಠ, ಸಾಹಿತಿ ಎನ್.ಟಿ. ಯರ್ರಿಸ್ವಾಮಿ, ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಅಧ್ಯಕ್ಷ ಕೆ.ಎಚ್. ಮಂಜುನಾಥ್ ಉಪಸ್ಥಿತರಿದ್ದರು. ಕಲಾಕುಂಚದ ಸಂಸ್ಥಾಪಕ ಸಾಲಿಗ್ರಾಮ ಗಣೇಶ್ ಶೆಣೈ ಕಾರ್ಯಕ್ರಮ ನಿರ್ವಹಿಸಿದರು. ರಾಜ್ಯದ ವಿವಿಧ ಕವಿಗಳು ಕವನ ವಾಚಿಸಿದರು.