<p>ಹರಿಹರ: ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಶನಿವಾರ ಮಧ್ಯಾಹ್ನ ನವಜಾತ ಗಂಡು ಶಿಶು ಸಾವಿಗೀಡಾಗಿದ್ದು, ಇದಕ್ಕೆ ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯ ಕಾರಣ ಎಂದು ಪೋಷಕರು ಹಾಗೂ ಸಂಬಂಧಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ನಗರದ ಆಶ್ರಯ ಕಾಲೊನಿ ನಿವಾಸಿ ಕಾವ್ಯ ಹೆರಿಗೆಗಾಗಿ ವೈದ್ಯರ ಸಲಹೆ ಮೇರೆಗೆ ಶುಕ್ರವಾರ ಆಸ್ಪತ್ರೆಗೆ ದಾಖಲಾಗಿದ್ದರು. ಶನಿವಾರ ಬೆಳಿಗ್ಗೆ ವೈದ್ಯೆ ಸವಿತಾ ಅವರು ಶಸ್ತ್ರ ಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಿದ್ದರು. ಮುಂಜಾಗ್ರತಾ ಕ್ರಮವಾಗಿ ಶಿಶುವನ್ನು ಇನ್ಕ್ಯೂಬೇಟರ್ನಲ್ಲಿ ಇರಿಸುವಂತೆ ಶುಶ್ರೂಷಕಿಗೆ ಸೂಚಿಸಿದ್ದರು.</p>.<p>ವೈದ್ಯರ ಸಲಹೆಯಂತೆ ಹೆರಿಗೆ ವಿಭಾಗದ ಶುಶ್ರೂಷಕಿ ಹೇಮಾವತಿ ಮಾಡಿದ್ದರು. ತದನಂತರ ಶಿಶುವನ್ನು ಪರೀಕ್ಷಿಸಿದಾಗ ಮೃತಪಟ್ಟಿರುವುದು ತಿಳಿದು ಬಂದಿದೆ.</p>.<p class="Subhead">ಪೋಷಕರ ಆರೋಪ: ಹೆರಿಗೆ ನಂತರ ಶಿಶು ಅಳುತ್ತಿತ್ತು ಹಾಗೂ ಆರೋಗ್ಯವಾಗಿತ್ತು. ಶಿಶುವನ್ನು ಇನ್ಕ್ಯೂಬೇಟರ್ನಲ್ಲಿ ಇಟ್ಟ ನಂತರ ಶಿಶುವನ್ನು ಪರೀಕ್ಷಿಸಲು ಬಹಳ ಹೊತ್ತು ಯಾರೂ ಬರಲಿಲ್ಲ. ಸಿಬ್ಬಂದಿಯ ನಿರ್ಲಕ್ಷ್ಯದಿಂದ ಮಗು ಸಾವಿಗೀಡಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ.</p>.<p>ಆಸ್ಪತ್ರೆ ಬಳಿ ಉದ್ರಿಕ್ತ ಸ್ಥಿತಿ ನಿರ್ಮಾಣವಾಗುವ ಲಕ್ಷಣ ಗೋಚರಿಸಿದಾಗ ಪೊಲೀಸರು ಮಧ್ಯೆ ಪ್ರವೇಶಿಸಿ ವಾತಾವರಣ ತಿಳಿಗೊಳಿಸಿದರು.</p>.<p>ವೈದ್ಯರು ಹಾಗೂ ಶುಶ್ರೂಷಕಿಯರು ಪೋಷಕರಲ್ಲಿ ಕ್ಷಮೆಯಾಚಿಸಿದ ಬಳಿಕ ಪ್ರಕರಣ ಶಾಂತ ರೀತಿಯಲ್ಲಿ ಇತ್ಯರ್ಥವಾಗಿದೆ ಎಂದು ತಿಳಿದುಬಂದಿದೆ. ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಬೇಕು ಎಂದು ಪೊಲೀಸರು ಹಾಗೂ ಶಿಶವನ್ನು ಕಳೆದುಕೊಂಡ ಪೋಷಕರು ವೈದ್ಯರಿಗೆ ಹಾಗೂ ಸಿಬ್ಬಂದಿಗೆ ಎಚ್ಚರಿಕೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹರಿಹರ: ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಶನಿವಾರ ಮಧ್ಯಾಹ್ನ ನವಜಾತ ಗಂಡು ಶಿಶು ಸಾವಿಗೀಡಾಗಿದ್ದು, ಇದಕ್ಕೆ ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯ ಕಾರಣ ಎಂದು ಪೋಷಕರು ಹಾಗೂ ಸಂಬಂಧಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ನಗರದ ಆಶ್ರಯ ಕಾಲೊನಿ ನಿವಾಸಿ ಕಾವ್ಯ ಹೆರಿಗೆಗಾಗಿ ವೈದ್ಯರ ಸಲಹೆ ಮೇರೆಗೆ ಶುಕ್ರವಾರ ಆಸ್ಪತ್ರೆಗೆ ದಾಖಲಾಗಿದ್ದರು. ಶನಿವಾರ ಬೆಳಿಗ್ಗೆ ವೈದ್ಯೆ ಸವಿತಾ ಅವರು ಶಸ್ತ್ರ ಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಿದ್ದರು. ಮುಂಜಾಗ್ರತಾ ಕ್ರಮವಾಗಿ ಶಿಶುವನ್ನು ಇನ್ಕ್ಯೂಬೇಟರ್ನಲ್ಲಿ ಇರಿಸುವಂತೆ ಶುಶ್ರೂಷಕಿಗೆ ಸೂಚಿಸಿದ್ದರು.</p>.<p>ವೈದ್ಯರ ಸಲಹೆಯಂತೆ ಹೆರಿಗೆ ವಿಭಾಗದ ಶುಶ್ರೂಷಕಿ ಹೇಮಾವತಿ ಮಾಡಿದ್ದರು. ತದನಂತರ ಶಿಶುವನ್ನು ಪರೀಕ್ಷಿಸಿದಾಗ ಮೃತಪಟ್ಟಿರುವುದು ತಿಳಿದು ಬಂದಿದೆ.</p>.<p class="Subhead">ಪೋಷಕರ ಆರೋಪ: ಹೆರಿಗೆ ನಂತರ ಶಿಶು ಅಳುತ್ತಿತ್ತು ಹಾಗೂ ಆರೋಗ್ಯವಾಗಿತ್ತು. ಶಿಶುವನ್ನು ಇನ್ಕ್ಯೂಬೇಟರ್ನಲ್ಲಿ ಇಟ್ಟ ನಂತರ ಶಿಶುವನ್ನು ಪರೀಕ್ಷಿಸಲು ಬಹಳ ಹೊತ್ತು ಯಾರೂ ಬರಲಿಲ್ಲ. ಸಿಬ್ಬಂದಿಯ ನಿರ್ಲಕ್ಷ್ಯದಿಂದ ಮಗು ಸಾವಿಗೀಡಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ.</p>.<p>ಆಸ್ಪತ್ರೆ ಬಳಿ ಉದ್ರಿಕ್ತ ಸ್ಥಿತಿ ನಿರ್ಮಾಣವಾಗುವ ಲಕ್ಷಣ ಗೋಚರಿಸಿದಾಗ ಪೊಲೀಸರು ಮಧ್ಯೆ ಪ್ರವೇಶಿಸಿ ವಾತಾವರಣ ತಿಳಿಗೊಳಿಸಿದರು.</p>.<p>ವೈದ್ಯರು ಹಾಗೂ ಶುಶ್ರೂಷಕಿಯರು ಪೋಷಕರಲ್ಲಿ ಕ್ಷಮೆಯಾಚಿಸಿದ ಬಳಿಕ ಪ್ರಕರಣ ಶಾಂತ ರೀತಿಯಲ್ಲಿ ಇತ್ಯರ್ಥವಾಗಿದೆ ಎಂದು ತಿಳಿದುಬಂದಿದೆ. ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಬೇಕು ಎಂದು ಪೊಲೀಸರು ಹಾಗೂ ಶಿಶವನ್ನು ಕಳೆದುಕೊಂಡ ಪೋಷಕರು ವೈದ್ಯರಿಗೆ ಹಾಗೂ ಸಿಬ್ಬಂದಿಗೆ ಎಚ್ಚರಿಕೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>