<p><strong>ಸಂತೇಬೆನ್ನೂರು:</strong> ಜಿಲ್ಲಾ ಪಂಚಾಯಿತಿ ಸಿಇಒ ಗಿತ್ತೆ ಮಾಧವ ವಿಠಲ ರಾವ್ ಬುಧವಾರ ಭೇಟಿ ನೀಡಿ ಗ್ರಾಮ ಪಂಚಾಯಿತಿ ಸಿಬ್ಬಂದಿಯೊಂದಿಗೆ ಮೂಲಭೂತ ಸೌಕರ್ಯಗಳ ಪರಿವೀಕ್ಷಣೆ ಮಾಡಿದರು.</p>.<p>ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ಸೇವೆ ಹಾಗೂ ಸ್ವಚ್ಛತೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ರೈತರ ದೂರಿನನ್ವಯ ಸಾಸಲು ರಸ್ತೆ ಪಕ್ಕದಲ್ಲಿ ಸುರಿದ ಹಸಿ ಹಾಗೂ ಒಣ ಕಸದ ರಾಶಿ ವೀಕ್ಷಣೆ ನಡೆಸಿದರು.</p>.<p>ಕಸದ ವಿಲೇವಾರಿಗೆ ವೈಜ್ಞಾನಿಕ ಕ್ರಮ ಜರುಗಿಸಲು ಅಧಿಕಾರಿಗಳಿಗೆ ತಾಕೀತು ಮಾಡಿದರು. ಕಸ ಎಸೆಯುವವರಿಗೆ ₹ 5,000 ದಂಡ ವಿಧಿಸಲು ಸೂಚಿಸಿದರು. ಚರಂಡಿ ನೀರು ನೇರವಾಗಿ ಕೆರೆ ಸೇರುವ ಸ್ಥಳ ವೀಕ್ಷಿಸಿದರು.</p>.<p>ಉದ್ಯೋಗ ಖಾತ್ರಿ ಯೋಜನೆಯಲ್ಲಿ ತಡೆಗೋಡೆ ನಿರ್ಮಿಸಬೇಕು. ಅದಕ್ಕಾಗಿ ಪೂರ್ಣ ಪ್ರಮಾಣದ ಯೋಜನೆ ರೂಪಿಸಲು ಹೇಳಿದರು. ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ತ್ಯಾಜ್ಯ ಸಂಗ್ರಹವನ್ನು ವಿಲೇವಾರಿ ಮಾಡಲು ಸೂಚಿಸಿದರು.</p>.<p>ಗ್ರಾಮದಲ್ಲಿ ಅರ್ಧಭಾಗಕ್ಕೆ ಸೂಳೆಕೆರೆ ನೀರು ಯೋಜನೆಯಿಂದ ನೀರು ಬಿಡಲಾಗುತ್ತಿದೆ. ಗ್ರಾಮದ ವ್ಯಾಪ್ತಿಯಲ್ಲಿ ಸಂಪೂರ್ಣ ಸೂಳೆಕೆರೆ ನೀರು ಪೂರೈಸಲು, ಒಳ ಚರಂಡಿ ವ್ಯವಸ್ಥೆ ನಿರ್ಮಿಸಲು ಶಾಸಕರ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.</p>.<p>ಇಒ ಪ್ರಕಾಶ್, ಎಇಇ ಲೋಹಿತ್, ಎಇ ಗಿರೀಶ್, ಭಾನುಪ್ರಕಾಶ್, ಪಿಡಿಒ ಉಮೇಶ್, ಕಾರ್ಯದರ್ಶಿ ನಾಗರಾಜ್, ಕೆ.ಬಸವರಾಜ್, ರವಿಕುಮಾರ್, ಸದಸ್ಯರಾದ ರಹಮತ್ ಉಲ್ಲಾ, ಅಮ್ಜದ್, ಗಿರೀಶ್, ರಾಮಪ್ಪ, ಆಸೀಫ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂತೇಬೆನ್ನೂರು:</strong> ಜಿಲ್ಲಾ ಪಂಚಾಯಿತಿ ಸಿಇಒ ಗಿತ್ತೆ ಮಾಧವ ವಿಠಲ ರಾವ್ ಬುಧವಾರ ಭೇಟಿ ನೀಡಿ ಗ್ರಾಮ ಪಂಚಾಯಿತಿ ಸಿಬ್ಬಂದಿಯೊಂದಿಗೆ ಮೂಲಭೂತ ಸೌಕರ್ಯಗಳ ಪರಿವೀಕ್ಷಣೆ ಮಾಡಿದರು.</p>.<p>ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ಸೇವೆ ಹಾಗೂ ಸ್ವಚ್ಛತೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ರೈತರ ದೂರಿನನ್ವಯ ಸಾಸಲು ರಸ್ತೆ ಪಕ್ಕದಲ್ಲಿ ಸುರಿದ ಹಸಿ ಹಾಗೂ ಒಣ ಕಸದ ರಾಶಿ ವೀಕ್ಷಣೆ ನಡೆಸಿದರು.</p>.<p>ಕಸದ ವಿಲೇವಾರಿಗೆ ವೈಜ್ಞಾನಿಕ ಕ್ರಮ ಜರುಗಿಸಲು ಅಧಿಕಾರಿಗಳಿಗೆ ತಾಕೀತು ಮಾಡಿದರು. ಕಸ ಎಸೆಯುವವರಿಗೆ ₹ 5,000 ದಂಡ ವಿಧಿಸಲು ಸೂಚಿಸಿದರು. ಚರಂಡಿ ನೀರು ನೇರವಾಗಿ ಕೆರೆ ಸೇರುವ ಸ್ಥಳ ವೀಕ್ಷಿಸಿದರು.</p>.<p>ಉದ್ಯೋಗ ಖಾತ್ರಿ ಯೋಜನೆಯಲ್ಲಿ ತಡೆಗೋಡೆ ನಿರ್ಮಿಸಬೇಕು. ಅದಕ್ಕಾಗಿ ಪೂರ್ಣ ಪ್ರಮಾಣದ ಯೋಜನೆ ರೂಪಿಸಲು ಹೇಳಿದರು. ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ತ್ಯಾಜ್ಯ ಸಂಗ್ರಹವನ್ನು ವಿಲೇವಾರಿ ಮಾಡಲು ಸೂಚಿಸಿದರು.</p>.<p>ಗ್ರಾಮದಲ್ಲಿ ಅರ್ಧಭಾಗಕ್ಕೆ ಸೂಳೆಕೆರೆ ನೀರು ಯೋಜನೆಯಿಂದ ನೀರು ಬಿಡಲಾಗುತ್ತಿದೆ. ಗ್ರಾಮದ ವ್ಯಾಪ್ತಿಯಲ್ಲಿ ಸಂಪೂರ್ಣ ಸೂಳೆಕೆರೆ ನೀರು ಪೂರೈಸಲು, ಒಳ ಚರಂಡಿ ವ್ಯವಸ್ಥೆ ನಿರ್ಮಿಸಲು ಶಾಸಕರ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.</p>.<p>ಇಒ ಪ್ರಕಾಶ್, ಎಇಇ ಲೋಹಿತ್, ಎಇ ಗಿರೀಶ್, ಭಾನುಪ್ರಕಾಶ್, ಪಿಡಿಒ ಉಮೇಶ್, ಕಾರ್ಯದರ್ಶಿ ನಾಗರಾಜ್, ಕೆ.ಬಸವರಾಜ್, ರವಿಕುಮಾರ್, ಸದಸ್ಯರಾದ ರಹಮತ್ ಉಲ್ಲಾ, ಅಮ್ಜದ್, ಗಿರೀಶ್, ರಾಮಪ್ಪ, ಆಸೀಫ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>