‘ಸವಳಂಗ ಸರ್ಕಲ್ನಲ್ಲಿ ನಾಕಾಬಂದಿ ನಡೆಸುವಾಗ ಶಿವಮೊಗ್ಗ ಕಡೆಯಿಂದ ಬಂದ ಇಬ್ಬರು ಬೈಕ್ ಸವಾರರನ್ನು ತಪಾಸಣೆ ಮಾಡುತ್ತಿದ್ದಾಗ ಅವರ ಬಳಿಎಸ್ಬಿಎಂಎಲ್ ಸಿಂಗಲ್ ಬ್ಯಾರಲ್ ನಾಡ ಬಂದೂಕು ಪತ್ತೆಯಾಯಿತು. ಅವರನ್ನು ವಶಕ್ಕೆ ಪಡೆದು 112 ವಾಹನದಲ್ಲಿ ಬಂದೂಕು ಇಡುವಾಗ ಆಕಸ್ಮಿಕವಾಗಿ ಗುಂಡು ತಗುಲಿದೆ. ಬಂದೂಕು ಲೋಡ್ ಆಗಿದ್ದ ಕಾರಣ ಗುಂಡು ಸಿಡಿದಿದೆ’ಎಂದು ಹೊನ್ನಾಳಿ ಸಿಪಿಐ ಟಿ.ವಿ. ದೇವರಾಜ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.