ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯುತ್ ಚಿತಾಗಾರ ನಿರ್ಮಿಸಲು ಒತ್ತಾಯ

Last Updated 5 ಸೆಪ್ಟೆಂಬರ್ 2020, 14:05 IST
ಅಕ್ಷರ ಗಾತ್ರ

ದಾವಣಗೆರೆ: ನಗರದಲ್ಲಿ ಎರಡು ಕಡೆ ಸಾರ್ವಜನಿಕ ಸ್ಮಶಾನಗಳಲ್ಲಿ ಉಚಿತ ವಿದ್ಯುತ್ ಚಿತಾಗಾರ ಹಾಗೂ ಶವ ಸಾಗಿಸಲು 4 ವಾಹನಗಳ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿ ಸಿಪಿಐನಿಂದ ಶನಿವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ಅವರಿಗೆ ಮನವಿ ಸಲ್ಲಿಸಲು ಕಾರ್ಯಕರ್ತರು ಜಮಾಯಿಸಿದ್ದರು. ಆದರೆ ಸಚಿವರು ಬರಲಿಲ್ಲ. ಇದರಿಂದ ಅಸಮಾಧಾನಗೊಂಡ ಕಾರ್ಯಕರ್ತರುಸಾರ್ವಜನಿಕರ ಮನವಿ ಸ್ವೀಕರಿಸಲು ಸಚಿವರು ಸಮಯ ಗೊತ್ತು ಮಾಡಿದ್ದರೂ ಸ್ಥಳಕ್ಕೆ ಬರದಿರುವುದು ಸರಿಯಲ್ಲ ಎಂದು ಪಿ.ಬಿ. ರಸ್ತೆ ತಡೆಗೆ ಮುಂದಾದರು. ಬಳಿಕ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮನವಿ ಸ್ವೀಕರಿಸಿದರು.

ಪಕ್ಷದ ಜಿಲ್ಲಾ ಕಾರ್ಯದರ್ಶಿ ಎಚ್‌.ಕೆ. ರಾಮಚಂದ್ರಪ್ಪ, ‘ಜಿಲ್ಲೆಯ ಜನರ ಕುಂದು ಕೊರತೆಗಳನ್ನು ಕೇಳದೆ ಜಿಲ್ಲಾ ಉಸ್ತುವಾರಿ ಸಚಿವರು ಹೋಗಿರುವುದು ಸರಿಯಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿ, ‘ಉಸ್ತುವಾರಿ ಸಚಿವರ ಜೊತೆ ಎಲ್ಲಾ ಮುಖಂಡರ ಸಭೆ ನಿಗದಿಗೊಳಿಸಲಾಗುವುದು’ ಎಂದು ಭರವಸೆ ನೀಡಿದರು.

ನಗರದಲ್ಲಿ ಶವ ಸಂಸ್ಕಾರಕ್ಕೆ ತೊಂದರೆ ಇದ್ದು, ಎರಡು ಕಡೆ ಸಾರ್ವಜನಿಕ ಸ್ಮಶಾನಗಳಲ್ಲಿ ಉಚಿತ ವಿದ್ಯುತ್ ಚಿತಾಗಾರ ನಿರ್ಮಿಸಬೇಕು.ಶವಗಳನ್ನು ಹೂಳಲು ಉಚಿತವಾಗಿ ಮಹಾನಗರ ಪಾಲಿಕೆ ವತಿಯಿಂದ ಗುಂಡಿಗಳನ್ನು ತೆಗೆಸಿಕೊಡಬೇಕು. ಶವಗಳನ್ನು ಸಾಗಿಸಲು ನಾಲ್ಕು ವಾಹನಗಳ ವ್ಯವಸ್ಥೆ ಮಾಡಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದರು.

ಮುಖಂಡರಾದ ಆವರಗೆರೆ ಚಂದ್ರು, ಎಚ್.ಜಿ. ಉಮೇಶ್, ಆವರಗೆರೆ ವಾಸು, ಆನಂದರಾಜ್, ಟಿ.ಎಸ್. ನಾಗರಾಜ್, ರಮೇಶ್, ಐರಣಿ ಚಂದ್ರು, ನರೇಗಾ ರಂಗನಾಥ್, ಸರೋಜಾ, ಗದಿಗೇಶ ಪಾಳೇದ, ಎಂ.ಬಿ. ಶಾರದಮ್ಮ, ಎಸ್.ಎಸ್. ಮಲ್ಲಮ್ಮ, ವಿಶಾಲಾಕ್ಷಿ , ಎನ್.ಟಿ. ಬಸವರಾಜ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT