‘ರಾಜ್ಯದಲ್ಲಿರುವ ಸುಮಾರು 70 ಲಕ್ಷ ಮುಸ್ಲಿಂ ಜನಸಂಖ್ಯೆಯ ಪೈಕಿ ಪಿಂಜಾರ ನದಾಫ, ಮನ್ಸೂರಿ, ದುದೇಕುಲಾ ಸಮುದಾಯ ಸೇರಿ 35ರಿಂದ 38 ಲಕ್ಷದಷ್ಟು ಜನಸಂಖ್ಯೆ ಇದ್ದು, ಶಿಕ್ಷಣ ಹಾಗೂ ಉದ್ಯೋಗ ಸೇರಿ ಅನೇಕ ಸೌಲಭ್ಯಗಳಿಂದ ವಂಚಿತವಾಗಿದೆ. ಕಡಿಮೆ ಜನಸಂಖ್ಯೆ ಇರುವ ಜಾತಿಗಳಿಗೆ ಅಭಿವೃದ್ಧಿ ನಿಗಮಗಳನ್ನು ಸ್ಥಾಪಿಸುತ್ತಿದೆ. ಆದರೆ ನಮ್ಮನ್ನು ಕಡೆಗಣಿಸುತ್ತಿದೆ’ ಎಂದುಸಂಘದ ರಾಜ್ಯ ಘಟಕದ ಅಧ್ಯಕ್ಷ ಡಾ. ಅಬ್ಧುಲ್ ರಝಾಕ್ ನದಾಫ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.