ವಲಸೆ–ಮೂಲ ಭೇದವಿಲ್ಲ: ‘ಮೂಲ ಬಿಜೆಪಿಗರು, ವಲಸೆ ಬಂದವರು ಎಂಬ ಭೇದ ಪಕ್ಷದಲ್ಲಿ ಇಲ್ಲ. ಹಾಗೆ ನೋಡಿದರೆ ಬಹುತೇಕರು ವಲಸೆ ಬಂದವರೇ. ನಾನು ಕೂಡ ಕಾಂಗ್ರೆಸ್ನಲ್ಲಿದ್ದವ. ಒಮ್ಮೆ ಬಿಜೆಪಿ ಸೇರಿದ ಮೇಲೆ ಎಲ್ಲರೂ ಒಂದೇ. ವಲಸಿಗ, ಮೂಲ ಎಂದೆಲ್ಲ ಹೇಳಿಕೊಂಡಿದ್ದರೆ ಪಕ್ಷ ಬೆಳೆಯುವುದಿಲ್ಲ. ಎಲ್ಲಾ ಶಾಸಕರಿಗೆ ಸಚಿವ ಸ್ಥಾನ ಕೇಳುವ ಹಕ್ಕಿದೆ. ಸಂಪುಟ ವಿಸ್ತರಣೆ ಆದ ಮೇಲೆ ಎಲ್ಲರೂ ಸುಮ್ಮನಾಗುವರು’ ಎಂದು ಹೇಳಿದರು.