ಸದಾಶಿವ ಆಯೋಗದ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿ ಅನೇಕ ವರ್ಷಗಳಾಗಿವೆ. ಆದರೆ ಯಾವ ಸರ್ಕಾರವೂ ವರದಿಯನ್ನು ಕೇಂದ್ರಕ್ಕೆ ಶಿಫಾರಸು ಮಾಡಿಲ್ಲ. ಇದರಿಂದ ಪರಿಶಿಷ್ಟ ಜಾತಿಯ ಮಾದಿಗ, ಆದಿ ದ್ರಾವಿಡ, ಹರಿಜನ ಸೇರಿ ಹಲವು ಸಮಾಜದವರಿಗೆ ಅನ್ಯಾಯವಾಗುತ್ತಿದೆ. ಸೆ.21ರಿಂದ ಆರಂಭವಾಗುವ ವಿಧಾನಸಭೆಯ ಅಧಿವೇಶನದಲ್ಲಿ ವರದಿ ಮಂಡಿಸಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದರು.