ಓಂಕಾರಪ್ಪ ಮಾತನಾಡಿ, ‘ವೈದ್ಯಕೀಯ, ಶಿಕ್ಷಣ, ಸಾಮಾಜಿಕ, ಹಿಂದುಳಿದ ವರ್ಗಗಳ ವಿಭಾಗದ ಸದಸ್ಯತ್ವ ಸ್ಥಾನ ಖಾಲಿಯಾಗಿದೆ. ಶಿಕ್ಷಣ ಹಾಗೂ ಪರಿಶಿಷ್ಟ ಜಾತಿಯ ವಿಭಾಗದಿಂದ ನನ್ನನ್ನು ನೇಮಕ ಮಾಡಲು ಅವಕಾಶವಿದೆ. ಪವಾರ್ ಅವರನ್ನು ಹಿಂದುಳಿದ ವಿಭಾಗದಿಂದ ನೇಮಿಸಬಹುದಾಗಿದೆ. ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕರಾದ ಎಸ್.ಎ. ರವೀಂದ್ರನಾಥ, ಎಂ.ಪಿ. ರೇಣುಕಾಚಾರ್ಯ ಅವರು ನಮ್ಮನ್ನು ನೇಮಕ ಮಾಡುವಂತೆ ಮುಖ್ಯಮಂತ್ರಿಗೆ ಹಾಗೂ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ’ ಎಂದು ತಿಳಿಸಿದರು.