ನೂಪುರ್ ಶರ್ಮಾ ಅವರ ಅವಹೇಳನಕಾರಿ ಹೇಳಿಕೆಯ ಬಗ್ಗೆ ಚಾಟಿ ಬೀಸಿ, ದೇಶದಲ್ಲಿ ಯಾರು ಸರ್ವಾಧಿಕಾರಿಗಳಲ್ಲ. ಯಾವುದೇ ವ್ಯಕ್ತಿ ಅಧಿಕಾರದಲ್ಲಿ ಇದ್ದ ತಕ್ಷಣ ಮನಬಂದಂತೆ ನಡೆದುಕೊಳ್ಳಲು ಪ್ರಜಾಪ್ರಭುತ್ವದಲ್ಲಿ ಸಾಧ್ಯವಿಲ್ಲ. ಎಲ್ಲರೂ ಕಾನೂನಿನ ಮುಂದೆ ಸಮಾನರು ಎಂಬ ಅಂಶವನ್ನು ಸುಪ್ರೀಂಕೋರ್ಟ್ ಎತ್ತಿ ಹಿದಿದಿದೆ. ಇದು ನ್ಯಾಯಾಂಗ ವ್ಯವಸ್ಥೆಯ ಘನತೆಯನ್ನು ಹೆಚ್ಚಿಸಿದೆ. ಆದರೆ ಇದರ ವಿರುದ್ಧ ಕೆಲವು ಬಲಪಂಥೀಯರು ‘ಭಾರತೀಯ ನ್ಯಾಯಾಂಗ ವ್ಯವಸ್ಥೆಗೆ ಕರಾಳ ದಿನ’ ಎಂದು ಹ್ಯಾಷ್ಟ್ಯಾಗನ್ನು ಟ್ರೆಂಡ್ ಮಾಡಿರುವುದು, ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಪರ್ದಿವಾಲಾರನ್ನು ‘ಷರೀಯಾ ನ್ಯಾಯಾಧೀಶರು’, ಅಸಮರ್ಥರು, ಭಯೋತ್ಪಾದಕರಿಗೆ ಬೆಂಬಲ ನೀಡುತ್ತಿದ್ದಾರೆ ಎಂದೆಲ್ಲ ಅವಹೇಳನ ಮಾಡಿರುವುದು ಖಂಡನೀಯ ಎಂದು ತಿಳಿಸಿದ್ದಾರೆ.