<p><strong>ದಾವಣಗೆರೆ: </strong>ಜಿಲ್ಲಾ ಚೆಸ್ ಕ್ಲಬ್ ವತಿಯಿಂದ ನಗರದ ನಿಜಲಿಂಗಪ್ಪ ಬಡಾವಣೆಯಲ್ಲಿ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕನ್ನಡ ರಾಜ್ಯೋತ್ಸವ ಕಪ್ ಚೆಸ್ ಸ್ಪರ್ಧೆ ನಡೆಯಿತು.</p>.<p>ಸ್ಪರ್ಧೆ ಉದ್ಘಾಟಿಸಿದ ಪಾಲಿಕೆ ಸದಸ್ಯ ದೇವರಮನಿ ಶಿವಕುಮಾರ್ ಮಾತನಾಡಿ, ಮಕ್ಕಳ ಬುದ್ಧಿಮತ್ತೆ ಹೆಚ್ಚಿಸಲು ಚೆಸ್ ಸಹಕಾರಿ. ಮಕ್ಕಳ ವಿದ್ಯಾಭ್ಯಾಸಕ್ಕೂ ಅನುಕೂಲ’ ಎಂದು ಹೇಳಿದರು.</p>.<p>ಸಂಘದ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ಮಾತನಾಡಿ, ‘ಬದುಕಿನ ಏಳುಬೀಳುಗಳನ್ನು ಎದುರಿಸುವ ಸ್ಥೈರ್ಯವನ್ನು ಚೆಸ್ ಆಟ ನೀಡುತ್ತದೆ. ಬುದ್ಧಿಶಕ್ತಿ ಹೆಚ್ಚಿಸುವ ಈ ಆಟದಲ್ಲಿ ಮಕ್ಕಳು ತೊಡಗಿಸಿಕೊಳ್ಳಲು ಹೆತ್ತವರು ಪ್ರೋತ್ಸಾಹ ನೀಡಬೇಕು’ ಎಂದರು.</p>.<p>ಪಂದ್ಯಾವಳಿಯಲ್ಲಿ ಹನ್ನೆರಡು ವರ್ಷದ ಒಳಗಿನ ಮತ್ತು ಹದಿನೆಂಟು ವರ್ಷದ ಒಳಗಿನ ಎರಡು ವಿಭಾಗಗಳಲ್ಲಿ ಎಂಬತ್ತಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಿದ್ದರು. ಆರು ಸುತ್ತುಗಳಲ್ಲಿ ಸ್ಪರ್ಧೆ ನಡೆಯಿತು.</p>.<p><strong>ಫಲಿತಾಂಶ: </strong>ಹನ್ನೆರಡು ವರ್ಷದ ಒಳಗಿನ ವಿಭಾಗದಲ್ಲಿ ದಿಗಂತ್ ಎಂಎಸ್ ಪ್ರಥಮ ಸ್ಥಾನಿಯಾಗಿ ರಾಜ್ಯೋತ್ಸವ ಕಪ್ ಪಡೆದನು. ನಿಶ್ಚಲ್ ಜಿ.ಎಸ್. ದ್ವಿತೀಯ ಸ್ಥಾನಿಯಾದನು. ತನ್ನೈಜ, ಅಭಿನವ್, ಜೀವನ್ ಎಂ.ಎಸ್. ಕ್ರಮವಾಗಿ ಮೂರರಿಂದ ಐದನೇ ಸ್ಥಾನದವರೆಗೆ ಪಡೆದರು.</p>.<p>ಹದಿನೆಂಟು ವರ್ಷದ ಒಳಗಿನ ವಿಭಾಗದಲ್ಲಿ ಧನುಷ್ ಎಂ.ಎಸ್. ಕನ್ನಡ ರಾಜ್ಯೋತ್ಸವ ಕಪ್ ಪಡೆದನು. ಮಿಥುನ್ ಎಂ., ಭಾನುತೇಜಾ ಸಿ.ಎಂ., ವರದ್ ಎಂ. ಕುಬ್ಸದ್, ಗೌರೀಶ್ ಎಚ್.ಜಿ. ಎರಡರಿಂದ ಐದರವರೆಗೆ ಸ್ಥಾನಗಳನ್ನು ಪಡೆದರು.</p>.<p>ಸಂಘದ ಕಾರ್ಯದರ್ಶಿ ಯುವರಾಜ್, ಪದಾಧಿಕಾರಿ ಮಂಜುಳಾ ಯುವರಾಜ, ಗಂಗಾಧರ್, ತೀರ್ಪುಗಾರರಾದ ಚಿತ್ರದುರ್ಗದ ನವೀನ್ ಕುಮಾರ್ ಅವರೂ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ಜಿಲ್ಲಾ ಚೆಸ್ ಕ್ಲಬ್ ವತಿಯಿಂದ ನಗರದ ನಿಜಲಿಂಗಪ್ಪ ಬಡಾವಣೆಯಲ್ಲಿ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕನ್ನಡ ರಾಜ್ಯೋತ್ಸವ ಕಪ್ ಚೆಸ್ ಸ್ಪರ್ಧೆ ನಡೆಯಿತು.</p>.<p>ಸ್ಪರ್ಧೆ ಉದ್ಘಾಟಿಸಿದ ಪಾಲಿಕೆ ಸದಸ್ಯ ದೇವರಮನಿ ಶಿವಕುಮಾರ್ ಮಾತನಾಡಿ, ಮಕ್ಕಳ ಬುದ್ಧಿಮತ್ತೆ ಹೆಚ್ಚಿಸಲು ಚೆಸ್ ಸಹಕಾರಿ. ಮಕ್ಕಳ ವಿದ್ಯಾಭ್ಯಾಸಕ್ಕೂ ಅನುಕೂಲ’ ಎಂದು ಹೇಳಿದರು.</p>.<p>ಸಂಘದ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ಮಾತನಾಡಿ, ‘ಬದುಕಿನ ಏಳುಬೀಳುಗಳನ್ನು ಎದುರಿಸುವ ಸ್ಥೈರ್ಯವನ್ನು ಚೆಸ್ ಆಟ ನೀಡುತ್ತದೆ. ಬುದ್ಧಿಶಕ್ತಿ ಹೆಚ್ಚಿಸುವ ಈ ಆಟದಲ್ಲಿ ಮಕ್ಕಳು ತೊಡಗಿಸಿಕೊಳ್ಳಲು ಹೆತ್ತವರು ಪ್ರೋತ್ಸಾಹ ನೀಡಬೇಕು’ ಎಂದರು.</p>.<p>ಪಂದ್ಯಾವಳಿಯಲ್ಲಿ ಹನ್ನೆರಡು ವರ್ಷದ ಒಳಗಿನ ಮತ್ತು ಹದಿನೆಂಟು ವರ್ಷದ ಒಳಗಿನ ಎರಡು ವಿಭಾಗಗಳಲ್ಲಿ ಎಂಬತ್ತಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಿದ್ದರು. ಆರು ಸುತ್ತುಗಳಲ್ಲಿ ಸ್ಪರ್ಧೆ ನಡೆಯಿತು.</p>.<p><strong>ಫಲಿತಾಂಶ: </strong>ಹನ್ನೆರಡು ವರ್ಷದ ಒಳಗಿನ ವಿಭಾಗದಲ್ಲಿ ದಿಗಂತ್ ಎಂಎಸ್ ಪ್ರಥಮ ಸ್ಥಾನಿಯಾಗಿ ರಾಜ್ಯೋತ್ಸವ ಕಪ್ ಪಡೆದನು. ನಿಶ್ಚಲ್ ಜಿ.ಎಸ್. ದ್ವಿತೀಯ ಸ್ಥಾನಿಯಾದನು. ತನ್ನೈಜ, ಅಭಿನವ್, ಜೀವನ್ ಎಂ.ಎಸ್. ಕ್ರಮವಾಗಿ ಮೂರರಿಂದ ಐದನೇ ಸ್ಥಾನದವರೆಗೆ ಪಡೆದರು.</p>.<p>ಹದಿನೆಂಟು ವರ್ಷದ ಒಳಗಿನ ವಿಭಾಗದಲ್ಲಿ ಧನುಷ್ ಎಂ.ಎಸ್. ಕನ್ನಡ ರಾಜ್ಯೋತ್ಸವ ಕಪ್ ಪಡೆದನು. ಮಿಥುನ್ ಎಂ., ಭಾನುತೇಜಾ ಸಿ.ಎಂ., ವರದ್ ಎಂ. ಕುಬ್ಸದ್, ಗೌರೀಶ್ ಎಚ್.ಜಿ. ಎರಡರಿಂದ ಐದರವರೆಗೆ ಸ್ಥಾನಗಳನ್ನು ಪಡೆದರು.</p>.<p>ಸಂಘದ ಕಾರ್ಯದರ್ಶಿ ಯುವರಾಜ್, ಪದಾಧಿಕಾರಿ ಮಂಜುಳಾ ಯುವರಾಜ, ಗಂಗಾಧರ್, ತೀರ್ಪುಗಾರರಾದ ಚಿತ್ರದುರ್ಗದ ನವೀನ್ ಕುಮಾರ್ ಅವರೂ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>