<p><strong>ದಾವಣಗೆರೆ</strong>: ‘ಮೆಕ್ಕೆಜೋಳದಲ್ಲಿ ಅಂತರ ಬೆಳೆಯಾಗಿ ತೊಗರಿ ಬೆಳೆಯುವುದರಿಂದ ಮಣ್ಣಿನ ಫಲವತ್ತತೆ ಹಾಗೂ ಇಳುವರಿಯನ್ನು ಹೆಚ್ಚಿಸಿಕೊಳ್ಳಬಹುದು’ ಎಂದು ಬೇಸಾಯ ತಜ್ಞ ಮಲ್ಲಿಕಾರ್ಜುನ್ ಬಿ.ಒ ತಿಳಿಸಿದರು. </p><p>ಜಗಳೂರು ತಾಲ್ಲೂಕಿನ ಕಲ್ಲೇದೇವರಪುರದಲ್ಲಿ ಈಚೆಗೆ ನಡೆದ ಕ್ಷೇತ್ರೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. </p><p>‘ಏಕ ಬೆಳೆಯಾಗಿ ಮೆಕ್ಕೆಜೋಳ ಬೆಳೆಯುವುದರಿಂದ ಮಳೆ ಸರಿಯಾಗಿ ಬಾರದಿದ್ದರೆ ಇಳುವರಿ ಮೇಲೆ ಪರಿಣಾಮ ಬೀರುತ್ತದೆ. ಮಣ್ಣಿನಲ್ಲಿರುವ ಪೋಷಕಾಂಶಗಳನ್ನು ಮೆಕ್ಕೆಜೋಳ ಬೆಳೆಯು ತೆಗೆದುಕೊಳ್ಳುವುದರಿಂದ ಫಲವತ್ತತೆ ಕಡಿಮೆಯಾಗುತ್ತದೆ. ಮೆಕ್ಕೆಜೋಳದಲ್ಲಿ ಅಂತರ ಬೆಳೆಯಾಗಿ ತೊಗರಿ ಬೆಳೆಯುವುದರಿಂದ ಅಧಿಕ ಇಳುವರಿ ಪಡೆಯಬಹುದು’ ಎಂದರು. </p><p>‘ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ಸರಿಯಾದ ಸಮಯಕ್ಕೆ ನವೀನ ತಾಂತ್ರಿಕತೆಗಳನ್ನು ಒದಗಿಸಿರುವುದರಿಂದ ಉತ್ತಮ ಇಳುವರಿಯ ನಿರೀಕ್ಷೆಯಲ್ಲಿದ್ದೇವೆ’ ಎಂದು ಪ್ರಗತಿಪರ ಕೃಷಿಕ ಚಿತ್ರಲಿಂಗಪ್ಪ ತಿಳಿಸಿದರು. </p><p>‘ಬಿತ್ತನೆ ಸಮಯದಲ್ಲಿ ಬೀಜೋಪಚಾರ ಹಾಗೂ ತೊಗರಿ ಹೂವಾಡುವ ಸಂದರ್ಭದಲ್ಲಿ ‘ಪಲ್ಸ್ ಮ್ಯಾಜಿಕ್’ ಔಷಧಿ ಬಳಸುವುದರಿಂದ ಹೂ ಉದುರುವುದನ್ನು ತಡೆಯಬಹುದು’ ಎಂದು ಪ್ರಗತಿಪರ ಕೃಷಿಕ ಶಶಿಧರ್ ಹೇಳಿದರು. </p><p>ತೋಟಗಾರಿಕಾ ವಿಜ್ಞಾನಿ ಬಸವನಗೌಡ ಎಂ.ಜಿ. ಮಾತನಾಡಿದರು. ಐಸಿಎಆರ್ ತರಳಬಾಳು ಕೃಷಿ ವಿಜ್ಞಾನ ಕೇಂದ್ರದಿಂದ ಪರಿಶಿಷ್ಟ ಜಾತಿ ಉಪ ಯೋಜನೆ ಕಾರ್ಯಕ್ರಮದಡಿ ಕ್ಷೇತ್ರೋತ್ಸವ ಹಮ್ಮಿಕೊಳ್ಳಲಾಗಿತ್ತು. ವಿವಿಧ ಗ್ರಾಮಗಳ ಕೃಷಿಕರು ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ‘ಮೆಕ್ಕೆಜೋಳದಲ್ಲಿ ಅಂತರ ಬೆಳೆಯಾಗಿ ತೊಗರಿ ಬೆಳೆಯುವುದರಿಂದ ಮಣ್ಣಿನ ಫಲವತ್ತತೆ ಹಾಗೂ ಇಳುವರಿಯನ್ನು ಹೆಚ್ಚಿಸಿಕೊಳ್ಳಬಹುದು’ ಎಂದು ಬೇಸಾಯ ತಜ್ಞ ಮಲ್ಲಿಕಾರ್ಜುನ್ ಬಿ.ಒ ತಿಳಿಸಿದರು. </p><p>ಜಗಳೂರು ತಾಲ್ಲೂಕಿನ ಕಲ್ಲೇದೇವರಪುರದಲ್ಲಿ ಈಚೆಗೆ ನಡೆದ ಕ್ಷೇತ್ರೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. </p><p>‘ಏಕ ಬೆಳೆಯಾಗಿ ಮೆಕ್ಕೆಜೋಳ ಬೆಳೆಯುವುದರಿಂದ ಮಳೆ ಸರಿಯಾಗಿ ಬಾರದಿದ್ದರೆ ಇಳುವರಿ ಮೇಲೆ ಪರಿಣಾಮ ಬೀರುತ್ತದೆ. ಮಣ್ಣಿನಲ್ಲಿರುವ ಪೋಷಕಾಂಶಗಳನ್ನು ಮೆಕ್ಕೆಜೋಳ ಬೆಳೆಯು ತೆಗೆದುಕೊಳ್ಳುವುದರಿಂದ ಫಲವತ್ತತೆ ಕಡಿಮೆಯಾಗುತ್ತದೆ. ಮೆಕ್ಕೆಜೋಳದಲ್ಲಿ ಅಂತರ ಬೆಳೆಯಾಗಿ ತೊಗರಿ ಬೆಳೆಯುವುದರಿಂದ ಅಧಿಕ ಇಳುವರಿ ಪಡೆಯಬಹುದು’ ಎಂದರು. </p><p>‘ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ಸರಿಯಾದ ಸಮಯಕ್ಕೆ ನವೀನ ತಾಂತ್ರಿಕತೆಗಳನ್ನು ಒದಗಿಸಿರುವುದರಿಂದ ಉತ್ತಮ ಇಳುವರಿಯ ನಿರೀಕ್ಷೆಯಲ್ಲಿದ್ದೇವೆ’ ಎಂದು ಪ್ರಗತಿಪರ ಕೃಷಿಕ ಚಿತ್ರಲಿಂಗಪ್ಪ ತಿಳಿಸಿದರು. </p><p>‘ಬಿತ್ತನೆ ಸಮಯದಲ್ಲಿ ಬೀಜೋಪಚಾರ ಹಾಗೂ ತೊಗರಿ ಹೂವಾಡುವ ಸಂದರ್ಭದಲ್ಲಿ ‘ಪಲ್ಸ್ ಮ್ಯಾಜಿಕ್’ ಔಷಧಿ ಬಳಸುವುದರಿಂದ ಹೂ ಉದುರುವುದನ್ನು ತಡೆಯಬಹುದು’ ಎಂದು ಪ್ರಗತಿಪರ ಕೃಷಿಕ ಶಶಿಧರ್ ಹೇಳಿದರು. </p><p>ತೋಟಗಾರಿಕಾ ವಿಜ್ಞಾನಿ ಬಸವನಗೌಡ ಎಂ.ಜಿ. ಮಾತನಾಡಿದರು. ಐಸಿಎಆರ್ ತರಳಬಾಳು ಕೃಷಿ ವಿಜ್ಞಾನ ಕೇಂದ್ರದಿಂದ ಪರಿಶಿಷ್ಟ ಜಾತಿ ಉಪ ಯೋಜನೆ ಕಾರ್ಯಕ್ರಮದಡಿ ಕ್ಷೇತ್ರೋತ್ಸವ ಹಮ್ಮಿಕೊಳ್ಳಲಾಗಿತ್ತು. ವಿವಿಧ ಗ್ರಾಮಗಳ ಕೃಷಿಕರು ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>