<p><strong>ಆಗರಬನ್ನಿಹಟ್ಟಿ(ಚನ್ನಗಿರಿ):</strong> ‘ಹೈನುಗಾರಿಕೆ ಸಾವಿರಾರು ವರ್ಷಗಳಿಂದಲೂ ಕೃಷಿಯ ಒಂದು ಭಾಗವಾಗಿದೆ. ಕೇವಲ ಕೃಷಿಯನ್ನೇ ನಂಬಿಕೊಳ್ಳುವ ಬದಲು ಹೈನುಗಾರಿಕೆಯಲ್ಲಿ ತೊಡಗಿ ಹೆಚ್ಚಿನ ಆದಾಯವನ್ನು ಗಳಿಸಲು ಮಹಿಳೆಯರು ಮುಂದಾಗಬೇಕು’ ಎಂದು ಶಿಮುಲ್ ನಿರ್ದೇಶಕ ಎಚ್.ಕೆ. ಬಸಪ್ಪ ತಿಳಿಸಿದರು.</p>.<p>ತಾಲ್ಲೂಕಿನ ಅಗರಬನ್ನಿಹಟ್ಟಿ ಗ್ರಾಮದಲ್ಲಿ ಶನಿವಾರ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದಲ್ಲಿ ಶನಿವಾರ ಕ್ಷೀರ ಸಂಜೀವಿನಿ ಯೋಜನೆ ಅಡಿ ಬಡ್ಡಿ ರಹಿತ ಸಾಲದ ಚೆಕ್ಗಳನ್ನು ವಿತರಿಸಿ ಮಾತನಾಡಿದರು.</p>.<p>ಹೈನುಗಾರಿಕೆಯಿಂದ ಕೇವಲ ಹಾಲು ಉತ್ಪಾದನೆ ಅಷ್ಟೇ ಅಲ್ಲದೆ ಮೊಸರು, ಮಜ್ಜಿಗೆ, ಬೆಣ್ಣೆ ಹಾಗೂ ತುಪ್ಪವನ್ನು ಕೂಡಾ ಉತ್ಪಾದನೆ ಮಾಡಬಹುದಾಗಿದೆ. ಹಸುಗಳ ಸಗಣಿ, ಗಂಜಲ ನಿಮ್ಮ ಜಮೀನುಗಳಿಗೆ ಫಲವತ್ತಾದ ಗೊಬ್ಬರವನ್ನು ಪೂರೈಸಿ, ಜಮೀನಿನ ಫಲವತ್ತತೆಯನ್ನು ಹೆಚ್ಚಿಸಿ ಅಧಿಕ ಇಳುವರಿ ಪಡೆಯಲು ಸಹಕಾರಿಯಾಗುತ್ತದೆ ಎಂದರು.</p>.<p>ಯಾವುದೇ ಕಾರ್ಯಗಳಿರಲಿ ಅಲ್ಲಿ ಮಹಿಳೆಯರ ಪಾತ್ರ ತುಂಬಾ ಅವಶ್ಯವಿರುತ್ತದೆ. ಹೈನುಗಾರಿಕೆಯಲ್ಲೂ ಮಹಿಳೆಯರ ಪಾತ್ರ ಇದ್ದು, ಹೈನುಗಾರಿಕೆಗೆ ಪ್ರೋತ್ಸಾಹ ನೀಡುವ ಸಲುವಾಗಿ ಶಿಮುಲ್ನಿಂದ ಮಹಿಳಾ ಹಾಲು ಉತ್ಪಾದಕರ ಸಂಘಗಳಿಗೆ ಇಂದು ₹ 6.64 ಲಕ್ಷದ ಬಡ್ಡಿ ರಹಿತ ಸಾಲದ ಚೆಕ್ಗಳನ್ನು ವಿತರಿಸಲಾಗಿದೆ. ಮಹಿಳೆಯರು ಈ ಯೋಜನೆಯ ಸದುಪಯೋಗವನ್ನು ಪಡೆದುಕೊಂಡು ಹೆಚ್ಚಿನ ಹಾಲನ್ನು ಉತ್ಪಾದಿಸಿ, ಅಧಿಕ ಆದಾಯವನ್ನು ಪಡೆದುಕೊಂಡು ಕುಟುಂಬಗಳ ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ಶಿಮುಲ್ ಉಪ ವ್ಯವಸ್ಥಾಪಕ ಸಂಜಯ್, ವಿಸ್ತರಣಾಧಿಕಾರಿ ಕರಿಯಮ್ಮ, ಯೊಜನಾಧಿಕಾರಿ ಗಾಯತ್ರಿ, ಮಹಿಳಾ ಹಾಲು ಉತ್ಪಾದಕರ ಸಂಘದ ಅಧ್ಯಕ್ಷೆ ಸಾಕಮ್ಮ, ರಾಕೇಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆಗರಬನ್ನಿಹಟ್ಟಿ(ಚನ್ನಗಿರಿ):</strong> ‘ಹೈನುಗಾರಿಕೆ ಸಾವಿರಾರು ವರ್ಷಗಳಿಂದಲೂ ಕೃಷಿಯ ಒಂದು ಭಾಗವಾಗಿದೆ. ಕೇವಲ ಕೃಷಿಯನ್ನೇ ನಂಬಿಕೊಳ್ಳುವ ಬದಲು ಹೈನುಗಾರಿಕೆಯಲ್ಲಿ ತೊಡಗಿ ಹೆಚ್ಚಿನ ಆದಾಯವನ್ನು ಗಳಿಸಲು ಮಹಿಳೆಯರು ಮುಂದಾಗಬೇಕು’ ಎಂದು ಶಿಮುಲ್ ನಿರ್ದೇಶಕ ಎಚ್.ಕೆ. ಬಸಪ್ಪ ತಿಳಿಸಿದರು.</p>.<p>ತಾಲ್ಲೂಕಿನ ಅಗರಬನ್ನಿಹಟ್ಟಿ ಗ್ರಾಮದಲ್ಲಿ ಶನಿವಾರ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದಲ್ಲಿ ಶನಿವಾರ ಕ್ಷೀರ ಸಂಜೀವಿನಿ ಯೋಜನೆ ಅಡಿ ಬಡ್ಡಿ ರಹಿತ ಸಾಲದ ಚೆಕ್ಗಳನ್ನು ವಿತರಿಸಿ ಮಾತನಾಡಿದರು.</p>.<p>ಹೈನುಗಾರಿಕೆಯಿಂದ ಕೇವಲ ಹಾಲು ಉತ್ಪಾದನೆ ಅಷ್ಟೇ ಅಲ್ಲದೆ ಮೊಸರು, ಮಜ್ಜಿಗೆ, ಬೆಣ್ಣೆ ಹಾಗೂ ತುಪ್ಪವನ್ನು ಕೂಡಾ ಉತ್ಪಾದನೆ ಮಾಡಬಹುದಾಗಿದೆ. ಹಸುಗಳ ಸಗಣಿ, ಗಂಜಲ ನಿಮ್ಮ ಜಮೀನುಗಳಿಗೆ ಫಲವತ್ತಾದ ಗೊಬ್ಬರವನ್ನು ಪೂರೈಸಿ, ಜಮೀನಿನ ಫಲವತ್ತತೆಯನ್ನು ಹೆಚ್ಚಿಸಿ ಅಧಿಕ ಇಳುವರಿ ಪಡೆಯಲು ಸಹಕಾರಿಯಾಗುತ್ತದೆ ಎಂದರು.</p>.<p>ಯಾವುದೇ ಕಾರ್ಯಗಳಿರಲಿ ಅಲ್ಲಿ ಮಹಿಳೆಯರ ಪಾತ್ರ ತುಂಬಾ ಅವಶ್ಯವಿರುತ್ತದೆ. ಹೈನುಗಾರಿಕೆಯಲ್ಲೂ ಮಹಿಳೆಯರ ಪಾತ್ರ ಇದ್ದು, ಹೈನುಗಾರಿಕೆಗೆ ಪ್ರೋತ್ಸಾಹ ನೀಡುವ ಸಲುವಾಗಿ ಶಿಮುಲ್ನಿಂದ ಮಹಿಳಾ ಹಾಲು ಉತ್ಪಾದಕರ ಸಂಘಗಳಿಗೆ ಇಂದು ₹ 6.64 ಲಕ್ಷದ ಬಡ್ಡಿ ರಹಿತ ಸಾಲದ ಚೆಕ್ಗಳನ್ನು ವಿತರಿಸಲಾಗಿದೆ. ಮಹಿಳೆಯರು ಈ ಯೋಜನೆಯ ಸದುಪಯೋಗವನ್ನು ಪಡೆದುಕೊಂಡು ಹೆಚ್ಚಿನ ಹಾಲನ್ನು ಉತ್ಪಾದಿಸಿ, ಅಧಿಕ ಆದಾಯವನ್ನು ಪಡೆದುಕೊಂಡು ಕುಟುಂಬಗಳ ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ಶಿಮುಲ್ ಉಪ ವ್ಯವಸ್ಥಾಪಕ ಸಂಜಯ್, ವಿಸ್ತರಣಾಧಿಕಾರಿ ಕರಿಯಮ್ಮ, ಯೊಜನಾಧಿಕಾರಿ ಗಾಯತ್ರಿ, ಮಹಿಳಾ ಹಾಲು ಉತ್ಪಾದಕರ ಸಂಘದ ಅಧ್ಯಕ್ಷೆ ಸಾಕಮ್ಮ, ರಾಕೇಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>