ರೈತರ ಆದಾಯವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಪ್ರಧಾನಿ ಮೋದಿಯವರು ಅನೇಕ ಯೋಜನೆ
ಗಳನ್ನು ತಂದಿದ್ದು, ರಸಗೊಬ್ಬರದ ಕೊರತೆ ನೀಗಿಸಲು ಬೇವು ಲೇಪಿತ ಯೂರಿಯಾ, 18 ಸಾವಿರ ಹಳ್ಳಿಗಳಿಗೆ ವಿದ್ಯುತ್ ಸಂಪರ್ಕ, ಬಿತ್ತನೆ ಬೀಜದಿಂದ ಮಾರುಕಟ್ಟೆವರೆಗೆ ಸುಧಾರಣೆ, ಕಿಸಾನ್ ಕಾರ್ಡ್ ವಿತರಣೆ, ಸಾಯಿಲ್ ಹೆಲ್ತ್ ಕಾರ್ಡ್, ಫಸಲ್ ಬಿಮಾ ಯೋಜನೆ, ಕಿಸಾನ್ ಸಮ್ಮಾನ್ ಸೇರಿ ಹಲವು ರೈತಪರ ಯೋಜನೆಗಳನ್ನು ಜಾರಿಗೊಳಿಸಿದರೂ ಕೇಂದ್ರದ ವಿರುದ್ಧ ವಿರೋಧ ಪಕ್ಷಗಳು ಅನಗತ್ಯ ವಿಷಯಗಳನ್ನು ಹೇಳಿ ರೈತರ ದಾರಿ ತಪ್ಪಿಸುತ್ತಿವೆ’ ಎಂದು ಆರೋಪಿಸಿದರು.