<p><strong>ಹರಿಹರ (ದಾವಣಗೆರೆ): ‘</strong>ಒಳಮೀಸಲಾತಿ ವಿಚಾರ ಕೋರ್ಟ್ನಲ್ಲಿ ಇತ್ಯರ್ಥವಾಗದೆ ಏನೂ ಮಾಡಲಾಗದು. ಅಲ್ಲಿಯವರೆಗೆ ಕಾಯುವುದರಲ್ಲೂ ಅರ್ಥವಿಲ್ಲ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಇಲ್ಲಿ ಅಭಿಪ್ರಾಯಪಟ್ಟರು. </p>.<p>‘ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಜಾರಿ ನಂತರವೇ 56,000 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಬೇಕೆಂಬ ಆಗ್ರಹವಿದೆ. ಆದ್ದರಿಂದ ಹಳೆ ಮೀಸಲಾತಿಯನ್ನೇ ಮುಂದುವರಿಸಲು ನಿರ್ಧರಿಸಿದ್ದೇವೆ’ ಅವರು ಹೇಳಿದರು. </p>.<p>ಇಲ್ಲಿನ ರಾಜನಹಳ್ಳಿಯ ಮಹರ್ಷಿ ವಾಲ್ಮೀಕಿ ಗುರುಪೀಠಕ್ಕೆ ಸೋಮವಾರ ಭೇಟಿ ನೀಡಿ ಪ್ರಸನ್ನಾನಂದ ಸ್ವಾಮೀಜಿಯ ಆರೋಗ್ಯ ವಿಚಾರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. </p>.<p>‘ಪ್ರತಿ ವರ್ಷ 5,000ದಿಂದ 10,000 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತದೆ. ಸದ್ಯಕ್ಕೆ ಪರಿಶಿಷ್ಟ ಜಾತಿಗೆ ಶೇ 15, ಪರಿಶಿಷ್ಟ ಪಂಗಡಕ್ಕೆ ಶೇ 3ರ ಮೀಸಲಾತಿಯನ್ನೇ ಮುಂದುವರಿಸುತ್ತೇವೆ’ ಎಂದರು.</p>.<p>‘ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಹೆಚ್ಚಿಸಿರುವ ಮೀಸಲಾತಿ ಪ್ರಮಾಣವನ್ನು ಕೇಂದ್ರ ಸರ್ಕಾರವು ಸಂವಿಧಾನದ 9ನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡಿದರೆ ಎಲ್ಲಾ ಗೊಂದಲಗಳೂ ಬಗೆಹರಿಯುತ್ತವೆ’ ಎಂದರು. </p>.<p>‘ಅಧಿಕಾರ ಹಂಚಿಕೆ ವಿಚಾರವಾಗಿ ಸೃಷ್ಟಿಯಾಗಿರುವ ಗೊಂದಲಗಳು ಬಗೆಹರಿಯಬೇಕೆಂಬುದು ಎಲ್ಲರ ಆಗ್ರಹ. ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಈ ಕುರಿತು ಸಭೆ ನಡೆಸಲಿದ್ದಾರೆ’ ಎಂದು ತಿಳಿಸಿದರು. </p>.<p>‘ಅಧಿಕಾರ ಹಂಚಿಕೆ ಗೊಂದಲ ಬಗೆಹರಿಯಬೇಕು. ಇಲ್ಲವಾದರೆ ಕಾರ್ಯಕರ್ತರು, ಶಾಸಕರು, ಅಧಿಕಾರಿಗಳಲ್ಲೂ ಗೊಂದಲ ಉಂಟಾಗಲಿದೆ. ಹೈಕಮಾಂಡ್ ಶೀಘ್ರವೇ ನಿರ್ಧಾರ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಿಹರ (ದಾವಣಗೆರೆ): ‘</strong>ಒಳಮೀಸಲಾತಿ ವಿಚಾರ ಕೋರ್ಟ್ನಲ್ಲಿ ಇತ್ಯರ್ಥವಾಗದೆ ಏನೂ ಮಾಡಲಾಗದು. ಅಲ್ಲಿಯವರೆಗೆ ಕಾಯುವುದರಲ್ಲೂ ಅರ್ಥವಿಲ್ಲ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಇಲ್ಲಿ ಅಭಿಪ್ರಾಯಪಟ್ಟರು. </p>.<p>‘ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಜಾರಿ ನಂತರವೇ 56,000 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಬೇಕೆಂಬ ಆಗ್ರಹವಿದೆ. ಆದ್ದರಿಂದ ಹಳೆ ಮೀಸಲಾತಿಯನ್ನೇ ಮುಂದುವರಿಸಲು ನಿರ್ಧರಿಸಿದ್ದೇವೆ’ ಅವರು ಹೇಳಿದರು. </p>.<p>ಇಲ್ಲಿನ ರಾಜನಹಳ್ಳಿಯ ಮಹರ್ಷಿ ವಾಲ್ಮೀಕಿ ಗುರುಪೀಠಕ್ಕೆ ಸೋಮವಾರ ಭೇಟಿ ನೀಡಿ ಪ್ರಸನ್ನಾನಂದ ಸ್ವಾಮೀಜಿಯ ಆರೋಗ್ಯ ವಿಚಾರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. </p>.<p>‘ಪ್ರತಿ ವರ್ಷ 5,000ದಿಂದ 10,000 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತದೆ. ಸದ್ಯಕ್ಕೆ ಪರಿಶಿಷ್ಟ ಜಾತಿಗೆ ಶೇ 15, ಪರಿಶಿಷ್ಟ ಪಂಗಡಕ್ಕೆ ಶೇ 3ರ ಮೀಸಲಾತಿಯನ್ನೇ ಮುಂದುವರಿಸುತ್ತೇವೆ’ ಎಂದರು.</p>.<p>‘ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಹೆಚ್ಚಿಸಿರುವ ಮೀಸಲಾತಿ ಪ್ರಮಾಣವನ್ನು ಕೇಂದ್ರ ಸರ್ಕಾರವು ಸಂವಿಧಾನದ 9ನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡಿದರೆ ಎಲ್ಲಾ ಗೊಂದಲಗಳೂ ಬಗೆಹರಿಯುತ್ತವೆ’ ಎಂದರು. </p>.<p>‘ಅಧಿಕಾರ ಹಂಚಿಕೆ ವಿಚಾರವಾಗಿ ಸೃಷ್ಟಿಯಾಗಿರುವ ಗೊಂದಲಗಳು ಬಗೆಹರಿಯಬೇಕೆಂಬುದು ಎಲ್ಲರ ಆಗ್ರಹ. ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಈ ಕುರಿತು ಸಭೆ ನಡೆಸಲಿದ್ದಾರೆ’ ಎಂದು ತಿಳಿಸಿದರು. </p>.<p>‘ಅಧಿಕಾರ ಹಂಚಿಕೆ ಗೊಂದಲ ಬಗೆಹರಿಯಬೇಕು. ಇಲ್ಲವಾದರೆ ಕಾರ್ಯಕರ್ತರು, ಶಾಸಕರು, ಅಧಿಕಾರಿಗಳಲ್ಲೂ ಗೊಂದಲ ಉಂಟಾಗಲಿದೆ. ಹೈಕಮಾಂಡ್ ಶೀಘ್ರವೇ ನಿರ್ಧಾರ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>