<p><strong>ದಾವಣಗೆರೆ</strong>: ಇಲ್ಲಿನ ವಿನಾಯಕ ಬಡಾವಣೆಯ ವಿಎಂಜಿ ಲೇಔಟ್ನ ಮನೆಯೊಂದರಲ್ಲಿ ಈಚೆಗೆ ನಡೆದಿದ್ದ ಕಳವು ಪ್ರಕರಣವನ್ನು ಭೇದಿಸಿರುವ ವಿದ್ಯಾನಗರ ಠಾಣೆ ಪೊಲೀಸರು ಮೂವರು ಅಂತರರಾಜ್ಯ ಕಳ್ಳರನ್ನು ಬಂಧಿಸಿ, ₹ 15,37,800 ಮೌಲ್ಯದ ಸ್ವತ್ತನ್ನು ವಶಪಡಿಸಿಕೊಂಡಿದ್ದಾರೆ. </p>.<p>ರಾಜಸ್ತಾನದ ಶ್ಯಾಮ್ ಸಿಂಗ್, ಕವರ್ ಪಾಲ್, ಪ್ರತಾಪ್ ಸಿಂಗ್ ಬಂಧಿತರು. </p>.<p>ಆರೋಪಿಗಳಿಂದ 162 ಗ್ರಾಂ ತೂಕದ ಬಂಗಾರದ ಆಭರಣ, 1,350 ಗ್ರಾಂ ತೂಕದ ಬೆಳ್ಳಿ ಸಾಮಗ್ರಿ, ₹ 95,600 ನಗದು ಹಾಗೂ 6 ಮೊಬೈಲ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. </p>.<p>ಆಗಸ್ಟ್ 30ರಂದು ರಾತ್ರಿ ರಂಗನಾಥ ಎಂಬವರ ಮನೆಯ ಬೀಗ ಒಡೆದು ಒಳ ನುಗ್ಗಿದ್ದ ಖದೀಮರು ಆಭರಣ ಕದ್ದೊಯ್ದಿದ್ದರು. ಈ ಬಗ್ಗೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. </p>.<p>ನಗರ ಉಪವಿಭಾಗದ ಡಿವೈಎಸ್ಪಿ ಶರಣ ಬಸವೇಶ್ವರ ಬಿ. ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ಶಿಲ್ಪಾ ವೈ.ಎಸ್. ನೇತೃತ್ವದಲ್ಲಿ ತನಿಖಾ ತಂಡ ರಚಿಸಲಾಗಿತ್ತು. ಆರೋಪಿಗಳ ಪತ್ತೆಗೆ ತನಿಖಾ ತಂಡಕ್ಕೆ ಗುಜರಾತ್ನ ಸೂರತ್ ನಗರದ ಸಾರೋಲಿ ಠಾಣೆಯ ಪೊಲೀಸರು ಸಹಕರಿಸಿದ್ದಾರೆ. ಬಂಧಿತರ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ 6 ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. </p>.<p>ಪಿಎಸ್ಐ ರೂಪಾ ತೆಂಬದ್, ಸಿಬ್ಬಂದಿಯಾದ ಶಂಕರ ಜಾಧವ, ಆನಂದ ಎಂ., ಬೋಜಪ್ಪ, ಗೋಪಿನಾಥ ನಾಯ್ಕ, ಮಲ್ಲಿಕಾರ್ಜುನ ಚಂದ್ರಪ್ಪ, ಬಸವರಾಜ, ಸೀಮಾ ಅವರು ಕಾರ್ಯಾಚರಣೆ ನಡೆಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಇಲ್ಲಿನ ವಿನಾಯಕ ಬಡಾವಣೆಯ ವಿಎಂಜಿ ಲೇಔಟ್ನ ಮನೆಯೊಂದರಲ್ಲಿ ಈಚೆಗೆ ನಡೆದಿದ್ದ ಕಳವು ಪ್ರಕರಣವನ್ನು ಭೇದಿಸಿರುವ ವಿದ್ಯಾನಗರ ಠಾಣೆ ಪೊಲೀಸರು ಮೂವರು ಅಂತರರಾಜ್ಯ ಕಳ್ಳರನ್ನು ಬಂಧಿಸಿ, ₹ 15,37,800 ಮೌಲ್ಯದ ಸ್ವತ್ತನ್ನು ವಶಪಡಿಸಿಕೊಂಡಿದ್ದಾರೆ. </p>.<p>ರಾಜಸ್ತಾನದ ಶ್ಯಾಮ್ ಸಿಂಗ್, ಕವರ್ ಪಾಲ್, ಪ್ರತಾಪ್ ಸಿಂಗ್ ಬಂಧಿತರು. </p>.<p>ಆರೋಪಿಗಳಿಂದ 162 ಗ್ರಾಂ ತೂಕದ ಬಂಗಾರದ ಆಭರಣ, 1,350 ಗ್ರಾಂ ತೂಕದ ಬೆಳ್ಳಿ ಸಾಮಗ್ರಿ, ₹ 95,600 ನಗದು ಹಾಗೂ 6 ಮೊಬೈಲ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. </p>.<p>ಆಗಸ್ಟ್ 30ರಂದು ರಾತ್ರಿ ರಂಗನಾಥ ಎಂಬವರ ಮನೆಯ ಬೀಗ ಒಡೆದು ಒಳ ನುಗ್ಗಿದ್ದ ಖದೀಮರು ಆಭರಣ ಕದ್ದೊಯ್ದಿದ್ದರು. ಈ ಬಗ್ಗೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. </p>.<p>ನಗರ ಉಪವಿಭಾಗದ ಡಿವೈಎಸ್ಪಿ ಶರಣ ಬಸವೇಶ್ವರ ಬಿ. ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ಶಿಲ್ಪಾ ವೈ.ಎಸ್. ನೇತೃತ್ವದಲ್ಲಿ ತನಿಖಾ ತಂಡ ರಚಿಸಲಾಗಿತ್ತು. ಆರೋಪಿಗಳ ಪತ್ತೆಗೆ ತನಿಖಾ ತಂಡಕ್ಕೆ ಗುಜರಾತ್ನ ಸೂರತ್ ನಗರದ ಸಾರೋಲಿ ಠಾಣೆಯ ಪೊಲೀಸರು ಸಹಕರಿಸಿದ್ದಾರೆ. ಬಂಧಿತರ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ 6 ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. </p>.<p>ಪಿಎಸ್ಐ ರೂಪಾ ತೆಂಬದ್, ಸಿಬ್ಬಂದಿಯಾದ ಶಂಕರ ಜಾಧವ, ಆನಂದ ಎಂ., ಬೋಜಪ್ಪ, ಗೋಪಿನಾಥ ನಾಯ್ಕ, ಮಲ್ಲಿಕಾರ್ಜುನ ಚಂದ್ರಪ್ಪ, ಬಸವರಾಜ, ಸೀಮಾ ಅವರು ಕಾರ್ಯಾಚರಣೆ ನಡೆಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>