<p><strong>ದಾವಣಗೆರೆ:</strong> ‘ನಾನು ಉಸಿರು ಇರುವವರೆಗೆ ಹಿಂದುತ್ವಕ್ಕಾಗಿ ಹೋರಾಡುವವನು. ಹಿಂದುತ್ವ ಅಂದರೆ ಕುರುಬರು, ದಲಿತರು, ಬೆಸ್ತರು ಹೀಗೆ ಹಿಂದುಳಿದವರನ್ನು ಬಿಟ್ಟು ಇದೆಯೇ? ಇವರೆಲ್ಲರ ಅಭಿವೃದ್ಧಿ ಆದರೆ, ಎಸ್ಟಿ ಸ್ಥಾನಮಾನವಾದರೆ ಹಿಂದುತ್ವಕ್ಕೆ ಒಳ್ಳೆಯದೇ ಆಗುತ್ತದೆ’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಹೇಳಿದರು.</p>.<p>ಕುರುಬರ ಎಸ್ಟಿ ಹೋರಾಟಕ್ಕೆ ಪೂರ್ವಭಾವಿಯಾಗಿ ಶನಿವಾರ ದಾವಣಗೆರೆಯಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಹಿಂದುತ್ವ ಬಿಟ್ಟು ಜಾತಿ ರಾಜಕೀಯ ಮಾಡ್ತೀರಾ ಎಂದು ಕೆಲವರು ಪ್ರಶ್ನಿಸಿದರು. ನಾನು ಈ ಸಮುದಾಯದಲ್ಲಿ ಹುಟ್ಟಿದ್ದೇನೆ. ಈ ಸಮುದಾಯ ಸಂಕಷ್ಟದಲ್ಲಿ ಇರುವಾಗ ಸ್ಪಂದಿಸಬೇಕು. ಕುರುಬರಿಗೆ ಮಾತ್ರವಲ್ಲ ಬೆಸ್ತರು, ಉಪ್ಪಾರರು ಸಹಿತ ಯಾರೇ ಅರ್ಹರು ಎಸ್ಟಿ ಮೀಸಲಾತಿಗಾಗಿ ಹೋರಾಟ ಮಾಡಿದರೂ ಅವರ ಬೆಂಬಲಕ್ಕೆ ನಾನಿದ್ದೇನೆ’ ಎಂದರು.</p>.<p>ಹೋರಾಟದ ಆರಂಭದಲ್ಲಿ ಸಿದ್ದರಾಮಯ್ಯ ಅವರನ್ನೂ ಭೇಟಿ ಮಾಡಿದ್ದೆ. ಬೇರೆ ಕಾರಣಗಳಿಂದ ಬರಲಾಗುವುದಿಲ್, ಮುಂದುವರಿಸಿ ಎಂದು ಆಗ ಒಳ್ಳೆಯ ಮಾತನಾಡಿದ್ದರು ಎಂದು ತಿಳಿಸಿದರು.</p>.<p>ಆರ್ಎಸ್ಎಸ್ ಕಂಡರೆ ಎಡಪಂಥೀಯರಿಗೆ ಭಯ: ಕುರುಬರ ಎಸ್ಟಿ ಹೋರಾಟದಲ್ಲಿ ಆರ್ಎಸ್ಎಸ್ ಪಾತ್ರ ಇಲ್ಲ. ಅದರೂ ಆರ್ಎಸ್ಎಸ್ ಪಾತ್ರ ಇದೆ ಎಂದು ಎಡಪಂಥೀಯರು ಹೇಳುತ್ತಿದ್ದಾರೆ. ಅವರಿಗೆ ಆರ್ಎಸ್ಎಸ್ ಅಂದರೆ ಭಯ ಎಂದು</p>.<p>‘ನನ್ನಂಥ ಕೋಟ್ಯಂತರ ದೇಶಭಕ್ತರನ್ನು ಸೃಷ್ಟಿಸಿದ್ದು ಆರ್ಎಸ್ಎಸ್. ಕಾಮಾಲೆ ರೋಗದವರಿಗೆ ಎಲ್ಲವೂ ಹಳದಿ ಕಾಣುವಂತೆ ಇವರಿಗೆ ಎಲ್ಲದರಲ್ಲೂ ಆರ್ಎಸ್ಎಸ್ ಕಾಣುತ್ತದೆ’ ಎಂದು ಟೀಕಿಸಿದರು.</p>.<p>ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ನಡುರಾತ್ರಿ ಭೇಟಿ ಆಗುತ್ತಾರೆ ಎಂದು ಕುಮಾರಸ್ವಾಮಿ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ರಾತ್ರಿ ವ್ಯವಹಾರ ನನಗೆ ಗೊತ್ತಿಲ್ಲ. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ಗೆ ಗೊತ್ತು’ ಎಂದು ಪ್ರತಿಕ್ರಿಯಿಸಿದರು.</p>.<p class="Briefhead"><strong>ಸಿದ್ದರಾಮಯ್ಯ ಸಮ್ಮತಿ ಪಡೆಯಲಾಗಿದೆ: ಕಾಗಿನೆಲೆಶ್ರೀ</strong></p>.<p>‘ಸಿದ್ದರಾಮಯ್ಯ ಅವರ ಸಮ್ಮತಿ ಪಡೆದೇ ಹೋರಾಟಕ್ಕೆ ಇಳಿದಿದ್ದೇವೆ. ಸಿದ್ದರಾಮಯ್ಯ ಯಾವಾಗ ಬಂದರೂ ಸ್ವಾಗತಿಸುತ್ತೇವೆ’ ಎಂದು ಕಾಗಿನೆಲೆ ನಿರಂಜನಾನಂದ ಪುರಿ ಸ್ವಾಮೀಜಿ ಹೇಳಿದರು.</p>.<p>ಎಸ್ಟಿ ಹೋರಾಟ ಎಂಬ ಬಸ್ಸನ್ನು ಚಲಾಯಿಸಲು ಕಾಗಿನೆಲೆ ಮಠವು ಚಾಲಕ ಸ್ಥಾನದಲ್ಲಿ ಕುಳಿತಿದೆ. ಸಮಾಜದ ಎಲ್ಲರೂ ಪ್ರಯಾಣಿಕರಾಗಿದ್ದಾರೆ. ಬಸ್ ಚಲಾಯಿಸಲು ಡೀಸೆಲ್ ಬೇಕಲ್ಲ. ಡೀಸೆಲ್ ಹಾಕುವ ಕೆಲಸವನ್ನು ಈಶ್ವರಪ್ಪ ಮಾಡುತ್ತಿದ್ದಾರೆ. ಬಸ್ ಗುರಿಯತ್ತ ತೆರಳಲಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ‘ನಾನು ಉಸಿರು ಇರುವವರೆಗೆ ಹಿಂದುತ್ವಕ್ಕಾಗಿ ಹೋರಾಡುವವನು. ಹಿಂದುತ್ವ ಅಂದರೆ ಕುರುಬರು, ದಲಿತರು, ಬೆಸ್ತರು ಹೀಗೆ ಹಿಂದುಳಿದವರನ್ನು ಬಿಟ್ಟು ಇದೆಯೇ? ಇವರೆಲ್ಲರ ಅಭಿವೃದ್ಧಿ ಆದರೆ, ಎಸ್ಟಿ ಸ್ಥಾನಮಾನವಾದರೆ ಹಿಂದುತ್ವಕ್ಕೆ ಒಳ್ಳೆಯದೇ ಆಗುತ್ತದೆ’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಹೇಳಿದರು.</p>.<p>ಕುರುಬರ ಎಸ್ಟಿ ಹೋರಾಟಕ್ಕೆ ಪೂರ್ವಭಾವಿಯಾಗಿ ಶನಿವಾರ ದಾವಣಗೆರೆಯಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಹಿಂದುತ್ವ ಬಿಟ್ಟು ಜಾತಿ ರಾಜಕೀಯ ಮಾಡ್ತೀರಾ ಎಂದು ಕೆಲವರು ಪ್ರಶ್ನಿಸಿದರು. ನಾನು ಈ ಸಮುದಾಯದಲ್ಲಿ ಹುಟ್ಟಿದ್ದೇನೆ. ಈ ಸಮುದಾಯ ಸಂಕಷ್ಟದಲ್ಲಿ ಇರುವಾಗ ಸ್ಪಂದಿಸಬೇಕು. ಕುರುಬರಿಗೆ ಮಾತ್ರವಲ್ಲ ಬೆಸ್ತರು, ಉಪ್ಪಾರರು ಸಹಿತ ಯಾರೇ ಅರ್ಹರು ಎಸ್ಟಿ ಮೀಸಲಾತಿಗಾಗಿ ಹೋರಾಟ ಮಾಡಿದರೂ ಅವರ ಬೆಂಬಲಕ್ಕೆ ನಾನಿದ್ದೇನೆ’ ಎಂದರು.</p>.<p>ಹೋರಾಟದ ಆರಂಭದಲ್ಲಿ ಸಿದ್ದರಾಮಯ್ಯ ಅವರನ್ನೂ ಭೇಟಿ ಮಾಡಿದ್ದೆ. ಬೇರೆ ಕಾರಣಗಳಿಂದ ಬರಲಾಗುವುದಿಲ್, ಮುಂದುವರಿಸಿ ಎಂದು ಆಗ ಒಳ್ಳೆಯ ಮಾತನಾಡಿದ್ದರು ಎಂದು ತಿಳಿಸಿದರು.</p>.<p>ಆರ್ಎಸ್ಎಸ್ ಕಂಡರೆ ಎಡಪಂಥೀಯರಿಗೆ ಭಯ: ಕುರುಬರ ಎಸ್ಟಿ ಹೋರಾಟದಲ್ಲಿ ಆರ್ಎಸ್ಎಸ್ ಪಾತ್ರ ಇಲ್ಲ. ಅದರೂ ಆರ್ಎಸ್ಎಸ್ ಪಾತ್ರ ಇದೆ ಎಂದು ಎಡಪಂಥೀಯರು ಹೇಳುತ್ತಿದ್ದಾರೆ. ಅವರಿಗೆ ಆರ್ಎಸ್ಎಸ್ ಅಂದರೆ ಭಯ ಎಂದು</p>.<p>‘ನನ್ನಂಥ ಕೋಟ್ಯಂತರ ದೇಶಭಕ್ತರನ್ನು ಸೃಷ್ಟಿಸಿದ್ದು ಆರ್ಎಸ್ಎಸ್. ಕಾಮಾಲೆ ರೋಗದವರಿಗೆ ಎಲ್ಲವೂ ಹಳದಿ ಕಾಣುವಂತೆ ಇವರಿಗೆ ಎಲ್ಲದರಲ್ಲೂ ಆರ್ಎಸ್ಎಸ್ ಕಾಣುತ್ತದೆ’ ಎಂದು ಟೀಕಿಸಿದರು.</p>.<p>ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ನಡುರಾತ್ರಿ ಭೇಟಿ ಆಗುತ್ತಾರೆ ಎಂದು ಕುಮಾರಸ್ವಾಮಿ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ರಾತ್ರಿ ವ್ಯವಹಾರ ನನಗೆ ಗೊತ್ತಿಲ್ಲ. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ಗೆ ಗೊತ್ತು’ ಎಂದು ಪ್ರತಿಕ್ರಿಯಿಸಿದರು.</p>.<p class="Briefhead"><strong>ಸಿದ್ದರಾಮಯ್ಯ ಸಮ್ಮತಿ ಪಡೆಯಲಾಗಿದೆ: ಕಾಗಿನೆಲೆಶ್ರೀ</strong></p>.<p>‘ಸಿದ್ದರಾಮಯ್ಯ ಅವರ ಸಮ್ಮತಿ ಪಡೆದೇ ಹೋರಾಟಕ್ಕೆ ಇಳಿದಿದ್ದೇವೆ. ಸಿದ್ದರಾಮಯ್ಯ ಯಾವಾಗ ಬಂದರೂ ಸ್ವಾಗತಿಸುತ್ತೇವೆ’ ಎಂದು ಕಾಗಿನೆಲೆ ನಿರಂಜನಾನಂದ ಪುರಿ ಸ್ವಾಮೀಜಿ ಹೇಳಿದರು.</p>.<p>ಎಸ್ಟಿ ಹೋರಾಟ ಎಂಬ ಬಸ್ಸನ್ನು ಚಲಾಯಿಸಲು ಕಾಗಿನೆಲೆ ಮಠವು ಚಾಲಕ ಸ್ಥಾನದಲ್ಲಿ ಕುಳಿತಿದೆ. ಸಮಾಜದ ಎಲ್ಲರೂ ಪ್ರಯಾಣಿಕರಾಗಿದ್ದಾರೆ. ಬಸ್ ಚಲಾಯಿಸಲು ಡೀಸೆಲ್ ಬೇಕಲ್ಲ. ಡೀಸೆಲ್ ಹಾಕುವ ಕೆಲಸವನ್ನು ಈಶ್ವರಪ್ಪ ಮಾಡುತ್ತಿದ್ದಾರೆ. ಬಸ್ ಗುರಿಯತ್ತ ತೆರಳಲಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>