<p><strong>ಜಗಳೂರು:</strong> ಕೋವಿಡ್ ಲಸಿಕೆ ಸಿಗದೆ ಎಲ್ಲೆಡೆ ಪರದಾಡುತ್ತಿರುವ ಈ ಸಂದರ್ಭದಲ್ಲಿ ಪಟ್ಟಣದ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಕೋವಿಶೀಲ್ಡ್ ಲಸಿಕೆಯ 16ಕ್ಕೂ ಹೆಚ್ಚು ವಯಲ್ಗಳನ್ನು ಬೇಕಾಬಿಟ್ಟಿ ಕಸದ ತಿಪ್ಪೆಯಲ್ಲಿ ಎಸೆದಿದ್ದು, ಆಸ್ಪತ್ರೆಯ ಆಡಳಿತ ಮಂಡಳಿಯ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಆಸ್ಪತ್ರೆಗೆ ಸಮೀಪದ ಕಸದ ತಿಪ್ಪೆಯಲ್ಲಿ ಲಸಿಕೆ ತುಂಬಿರುವ 16 ಸಣ್ಣ ಸೀಸೆಗಳು (ವಯಲ್) ಪತ್ತೆಯಾಗಿವೆ. ಈ ಬಗ್ಗೆ ಮಾಹಿತಿ ಪಡೆದ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ನಾಗರಾಜ್ ಅವರು ಅವುಗಳನ್ನು ವಶಪಡಿಸಿಕೊಂಡಿದ್ದಾರೆ</p>.<p>ಲಸಿಕೆ ತುಂಬಿದ ಒಂದು ವಯಲ್ ನಲ್ಲಿ 10 ಮಂದಿಗೆ ಲಸಿಕೆ ಹಾಕಬಹುದು. ಆದರೆ ಒಂದು ವಯಲ್ನಲ್ಲಿ ಒಬ್ಬರು ಅಥವಾ ಇಬ್ಬರಿಗೆ ಮಾತ್ರ ಲಸಿಕೆ ಹಾಕಿ ಹೊರಗೆ ಎಸೆಯಲಾಗಿದೆ. 17 ವಯಲ್ಗಳಿಂದ ಕನಿಷ್ಠ 170 ಜನರಿಗೆ ಲಸಿಕೆ ಹಾಕಬಹುದಿತ್ತು. ಆದರೆ ಬೇಜವಾಬ್ದಾರಿಯಿಂದ ಅರೆಬರೆ ಬಳಸಿದ ವಯಲ್ಗಳನ್ನು ಆಸ್ಪತ್ರೆಯಿಂದ ಹೊರಗೆ ಎಸೆದಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p><a href="https://www.prajavani.net/district/bengaluru-city/power-shutdown-today-and-tomorrow-in-bangalore-areas-852942.html" itemprop="url">ಜು.30, 31ರಂದು ಬೆಂಗಳೂರಿನ ಹಲವೆಡೆ ವಿದ್ಯುತ್ ವ್ಯತ್ಯಯ: ಬೆಸ್ಕಾಂ </a></p>.<p>‘ತಾಲ್ಲೂಕಿನಲ್ಲಿ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಿದ್ದು, ಜಿಲ್ಲಾ ಕೇಂದ್ರದಿಂದ ಲಸಿಕೆ ಕೊರತೆಯಾಗದಂತೆ ತರಿಸಲಾಗುತ್ತಿದೆ. ಆದರೆ ಹೀಗೆ ಬೇಕಾಬಿಟ್ಟಿ ಲಸಿಕೆಯ ಸೀಸೆಗಳನ್ನು ಎಸೆದಿರುವುದು ಅಕ್ಷ್ಯಮ್ಯವಾಗಿದೆ. ಈ ಬಗ್ಗೆ ತನಿಖೆ ನಡೆಸಿ ಮೇಲಧಿಕಾರಿಗೆ ವರದಿ ಸಲ್ಲಿಸಲಾಗುವುದು’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ, ನಾಗರಾಜ್ ತಿಳಿಸಿದ್ದಾರೆ.</p>.<p>‘ಲಸಿಕೆಯನ್ನು ವ್ಯರ್ಥವಾಗಿ ಎಸೆದಿರುವ ಘಟನೆ ಬಗ್ಗೆ ಮಾಹಿತಿ ಇದೆ. ಡಿಎಚ್ಒ ಅವರಿಗೆ ವರದಿ ಸಲ್ಲಿಸಲು ಸೂಚಿಸಿದ್ದೇನೆ. ತಪ್ಪು ಮಾಡಿದವರು ಯಾರೇ ಆಗಲಿ ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ‘ಪ್ರಜಾವಾಣಿ’ಗೆ ಸ್ಪಷ್ಟಪಡಿಸಿದರು.</p>.<p><a href="https://www.prajavani.net/india-news/cdsco-expert-panel-recommends-nod-to-study-on-mixing-doses-of-covaxin-covishield-853013.html" itemprop="url">ಕೋವಿಶೀಲ್ಡ್, ಕೋವ್ಯಾಕ್ಸಿನ್ ಮಿಶ್ರ ಪ್ರಯೋಗಕ್ಕೆ ತಜ್ಞರ ಸಮಿತಿ ಶಿಫಾರಸು </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಗಳೂರು:</strong> ಕೋವಿಡ್ ಲಸಿಕೆ ಸಿಗದೆ ಎಲ್ಲೆಡೆ ಪರದಾಡುತ್ತಿರುವ ಈ ಸಂದರ್ಭದಲ್ಲಿ ಪಟ್ಟಣದ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಕೋವಿಶೀಲ್ಡ್ ಲಸಿಕೆಯ 16ಕ್ಕೂ ಹೆಚ್ಚು ವಯಲ್ಗಳನ್ನು ಬೇಕಾಬಿಟ್ಟಿ ಕಸದ ತಿಪ್ಪೆಯಲ್ಲಿ ಎಸೆದಿದ್ದು, ಆಸ್ಪತ್ರೆಯ ಆಡಳಿತ ಮಂಡಳಿಯ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಆಸ್ಪತ್ರೆಗೆ ಸಮೀಪದ ಕಸದ ತಿಪ್ಪೆಯಲ್ಲಿ ಲಸಿಕೆ ತುಂಬಿರುವ 16 ಸಣ್ಣ ಸೀಸೆಗಳು (ವಯಲ್) ಪತ್ತೆಯಾಗಿವೆ. ಈ ಬಗ್ಗೆ ಮಾಹಿತಿ ಪಡೆದ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ನಾಗರಾಜ್ ಅವರು ಅವುಗಳನ್ನು ವಶಪಡಿಸಿಕೊಂಡಿದ್ದಾರೆ</p>.<p>ಲಸಿಕೆ ತುಂಬಿದ ಒಂದು ವಯಲ್ ನಲ್ಲಿ 10 ಮಂದಿಗೆ ಲಸಿಕೆ ಹಾಕಬಹುದು. ಆದರೆ ಒಂದು ವಯಲ್ನಲ್ಲಿ ಒಬ್ಬರು ಅಥವಾ ಇಬ್ಬರಿಗೆ ಮಾತ್ರ ಲಸಿಕೆ ಹಾಕಿ ಹೊರಗೆ ಎಸೆಯಲಾಗಿದೆ. 17 ವಯಲ್ಗಳಿಂದ ಕನಿಷ್ಠ 170 ಜನರಿಗೆ ಲಸಿಕೆ ಹಾಕಬಹುದಿತ್ತು. ಆದರೆ ಬೇಜವಾಬ್ದಾರಿಯಿಂದ ಅರೆಬರೆ ಬಳಸಿದ ವಯಲ್ಗಳನ್ನು ಆಸ್ಪತ್ರೆಯಿಂದ ಹೊರಗೆ ಎಸೆದಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p><a href="https://www.prajavani.net/district/bengaluru-city/power-shutdown-today-and-tomorrow-in-bangalore-areas-852942.html" itemprop="url">ಜು.30, 31ರಂದು ಬೆಂಗಳೂರಿನ ಹಲವೆಡೆ ವಿದ್ಯುತ್ ವ್ಯತ್ಯಯ: ಬೆಸ್ಕಾಂ </a></p>.<p>‘ತಾಲ್ಲೂಕಿನಲ್ಲಿ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಿದ್ದು, ಜಿಲ್ಲಾ ಕೇಂದ್ರದಿಂದ ಲಸಿಕೆ ಕೊರತೆಯಾಗದಂತೆ ತರಿಸಲಾಗುತ್ತಿದೆ. ಆದರೆ ಹೀಗೆ ಬೇಕಾಬಿಟ್ಟಿ ಲಸಿಕೆಯ ಸೀಸೆಗಳನ್ನು ಎಸೆದಿರುವುದು ಅಕ್ಷ್ಯಮ್ಯವಾಗಿದೆ. ಈ ಬಗ್ಗೆ ತನಿಖೆ ನಡೆಸಿ ಮೇಲಧಿಕಾರಿಗೆ ವರದಿ ಸಲ್ಲಿಸಲಾಗುವುದು’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ, ನಾಗರಾಜ್ ತಿಳಿಸಿದ್ದಾರೆ.</p>.<p>‘ಲಸಿಕೆಯನ್ನು ವ್ಯರ್ಥವಾಗಿ ಎಸೆದಿರುವ ಘಟನೆ ಬಗ್ಗೆ ಮಾಹಿತಿ ಇದೆ. ಡಿಎಚ್ಒ ಅವರಿಗೆ ವರದಿ ಸಲ್ಲಿಸಲು ಸೂಚಿಸಿದ್ದೇನೆ. ತಪ್ಪು ಮಾಡಿದವರು ಯಾರೇ ಆಗಲಿ ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ‘ಪ್ರಜಾವಾಣಿ’ಗೆ ಸ್ಪಷ್ಟಪಡಿಸಿದರು.</p>.<p><a href="https://www.prajavani.net/india-news/cdsco-expert-panel-recommends-nod-to-study-on-mixing-doses-of-covaxin-covishield-853013.html" itemprop="url">ಕೋವಿಶೀಲ್ಡ್, ಕೋವ್ಯಾಕ್ಸಿನ್ ಮಿಶ್ರ ಪ್ರಯೋಗಕ್ಕೆ ತಜ್ಞರ ಸಮಿತಿ ಶಿಫಾರಸು </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>