<p><strong>ಜಗಳೂರು:</strong> ವಿವಿಧತೆಯಲ್ಲಿ ಏಕತೆ ಹಾಗೂ ಸಮಾನತೆಯನ್ನು ಸಾರುವ ಭಾರತದ ಸಂವಿಧಾನ ದೇಶವನ್ನು ಸಮರ್ಥವಾಗಿ ಮುನ್ನಡೆಸುವ ದಾರಿದೀಪವಾಗಿದೆ ಎಂದು ತಹಶೀಲ್ದಾರ್ ಸೈಯದ್ ಕಲೀಂ ಉಲ್ಲಾ ಅಭಿಪ್ರಾಯಪಟ್ಟರು.</p>.<p>ಪಟ್ಟಣದ ವಾಲ್ಮೀಕಿ ಭವನದಲ್ಲಿ ತಾಲ್ಲೂಕು ಆಡಳಿತದಿಂದ ಬುಧವಾರ ಹಮ್ಮಿಕೊಂಡಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಹಲವು ಜಾತಿ, ಧರ್ಮ, ಸಂಸ್ಕೃತಿ, ಆಚರಣೆಗಳಿಂದ ಕೂಡಿದ್ದ ದೇಶಕ್ಕೆ ಸಂವಿಧಾನ ರೂಪಿಸುವುದು ಸವಾಲಿನ ಕೆಲಸವಾಗಿತ್ತು. ಅಂಬೇಡ್ಕರ್ ಅದನ್ನು ಸಶಕ್ತವಾಗಿ ನಿಭಾಯಿಸಿದರು ಎಂದರು.</p>.<p>ಸಂವಿಧಾನ ಪೀಠಿಕೆಯನ್ನು ಪ್ರತೀ ಮನೆಗಳಲ್ಲಿಟ್ಟು ಓದಬೇಕಿದೆ. ಪ್ರತಿಯೊಬ್ಬರೂ ಸಂವಿಧಾನದ ಆಶಯಗಳನ್ನು ಸಾಕಾರಗೊಳಿಸಬೇಕು ಕಾಂಗ್ರೆಸ್ ಮುಖಂಡ ಪ್ಲಲಾಗಟ್ಟೆ ಶೇಖರಪ್ಪ ಹೇಳಿದರು.</p>.<p>ಹಿರಿಯ ವ್ಯಂಗಚಿತ್ರಕಾರ ಎಚ್.ಬಿ.ಮಂಜುನಾಥ್ ಉಪನ್ಯಾಸ ನೀಡಿದರು. ಕಾರ್ಯಕ್ರಮಕ್ಕೂ ಮುನ್ನ ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ವಾಲ್ಮೀಕಿ ಭವನದವರೆಗೆ ಮೆರವಣಿಗೆ ನಡೆಸಲಾಯಿತು. ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.</p>.<p>ಹಿರಿಯ ನಾಗರಿಕರ ಸಂಘದ ಅಧ್ಯಕ್ಷ ಸಿ.ತಿಪ್ಪೇಸ್ವಾಮಿ ಮಾತನಾಡಿದರು. ತಾಲ್ಲೂಕು ಪಂಚಾಯಿತಿ ಇಒ ಕೆಂಚಪ್ಪ, ಸಮಾಜಕಲ್ಯಾಣ ಇಲಾಖೆ ಅಧಿಕಾರಿ ಅಶೋಕ, ಎಸ್.ಟಿ. ಇಲಾಖೆ ಅಧಿಕಾರಿ ರಾಘವೇಂದ್ರ, ಪಿ.ಆರ್.ಇ.ಡಿ. ಎಇಇ ಶಿವಮೂರ್ತಿ, ಸಿಡಿಪಿಒ ಬೀರೇಂದ್ರಕುಮಾರ್, ಡಿಎಸ್ಎಸ್ನ ಕುಬೇಂದ್ರಪ್ಪ, ಸಿಆರ್ಪಿ ಆಂಜನೇಯ ಸೇರಿದಂತೆ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಗಳೂರು:</strong> ವಿವಿಧತೆಯಲ್ಲಿ ಏಕತೆ ಹಾಗೂ ಸಮಾನತೆಯನ್ನು ಸಾರುವ ಭಾರತದ ಸಂವಿಧಾನ ದೇಶವನ್ನು ಸಮರ್ಥವಾಗಿ ಮುನ್ನಡೆಸುವ ದಾರಿದೀಪವಾಗಿದೆ ಎಂದು ತಹಶೀಲ್ದಾರ್ ಸೈಯದ್ ಕಲೀಂ ಉಲ್ಲಾ ಅಭಿಪ್ರಾಯಪಟ್ಟರು.</p>.<p>ಪಟ್ಟಣದ ವಾಲ್ಮೀಕಿ ಭವನದಲ್ಲಿ ತಾಲ್ಲೂಕು ಆಡಳಿತದಿಂದ ಬುಧವಾರ ಹಮ್ಮಿಕೊಂಡಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಹಲವು ಜಾತಿ, ಧರ್ಮ, ಸಂಸ್ಕೃತಿ, ಆಚರಣೆಗಳಿಂದ ಕೂಡಿದ್ದ ದೇಶಕ್ಕೆ ಸಂವಿಧಾನ ರೂಪಿಸುವುದು ಸವಾಲಿನ ಕೆಲಸವಾಗಿತ್ತು. ಅಂಬೇಡ್ಕರ್ ಅದನ್ನು ಸಶಕ್ತವಾಗಿ ನಿಭಾಯಿಸಿದರು ಎಂದರು.</p>.<p>ಸಂವಿಧಾನ ಪೀಠಿಕೆಯನ್ನು ಪ್ರತೀ ಮನೆಗಳಲ್ಲಿಟ್ಟು ಓದಬೇಕಿದೆ. ಪ್ರತಿಯೊಬ್ಬರೂ ಸಂವಿಧಾನದ ಆಶಯಗಳನ್ನು ಸಾಕಾರಗೊಳಿಸಬೇಕು ಕಾಂಗ್ರೆಸ್ ಮುಖಂಡ ಪ್ಲಲಾಗಟ್ಟೆ ಶೇಖರಪ್ಪ ಹೇಳಿದರು.</p>.<p>ಹಿರಿಯ ವ್ಯಂಗಚಿತ್ರಕಾರ ಎಚ್.ಬಿ.ಮಂಜುನಾಥ್ ಉಪನ್ಯಾಸ ನೀಡಿದರು. ಕಾರ್ಯಕ್ರಮಕ್ಕೂ ಮುನ್ನ ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ವಾಲ್ಮೀಕಿ ಭವನದವರೆಗೆ ಮೆರವಣಿಗೆ ನಡೆಸಲಾಯಿತು. ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.</p>.<p>ಹಿರಿಯ ನಾಗರಿಕರ ಸಂಘದ ಅಧ್ಯಕ್ಷ ಸಿ.ತಿಪ್ಪೇಸ್ವಾಮಿ ಮಾತನಾಡಿದರು. ತಾಲ್ಲೂಕು ಪಂಚಾಯಿತಿ ಇಒ ಕೆಂಚಪ್ಪ, ಸಮಾಜಕಲ್ಯಾಣ ಇಲಾಖೆ ಅಧಿಕಾರಿ ಅಶೋಕ, ಎಸ್.ಟಿ. ಇಲಾಖೆ ಅಧಿಕಾರಿ ರಾಘವೇಂದ್ರ, ಪಿ.ಆರ್.ಇ.ಡಿ. ಎಇಇ ಶಿವಮೂರ್ತಿ, ಸಿಡಿಪಿಒ ಬೀರೇಂದ್ರಕುಮಾರ್, ಡಿಎಸ್ಎಸ್ನ ಕುಬೇಂದ್ರಪ್ಪ, ಸಿಆರ್ಪಿ ಆಂಜನೇಯ ಸೇರಿದಂತೆ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>