ಗ್ರಾಮದ ಕೆಂಚಪ್ಪ, ನಿಜಲಿಂಗಪ್ಪ, ಕಮಲಮ್ಮ, ಮೀನಕ್ಕ ಮುಂತಾದವರು ತೀವ್ರ ಅಸ್ವಸ್ಥರಾಗಿದ್ದು, ಪಟ್ಟಣದ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ. ಸಕಾಲದಲ್ಲಿ ಚಿಕಿತ್ಸೆ ಸಿಕ್ಕಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಎಲ್ಲರನ್ನೂ ಸೂಕ್ಷ್ಮವಾಗಿ ತಪಾಸಣೆ ಮಾಡಿ, ಆರೋಗ್ಯದ ಮೇಲೆ ನಿಗಾ ಇಡಲಾಗುವುದು ಎಂದು ವೈದ್ಯಾಧಿಕಾರಿ ಸ್ಪಷ್ಟಪಡಿಸಿದ್ದಾರೆ.