<p><strong>ಜಗಳೂರು</strong>: ಗ್ರಾಮೀಣ ಪ್ರದೇಶದ ಕೂಲಿ ಕಾರ್ಮಿಕರ ಜೀವನಾಧಾರವಾಗಿರುವ ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ರದ್ದು ಮಾಡಿರುವುದು ಜನವಿರೋಧಿ ನೀತಿಯಾಗಿದೆ ಎಂದು ಶಾಸಕ ಬಿ. ದೇವೇಂದ್ರಪ್ಪ ಆರೋಪಿಸಿದರು.</p>.<p>ತಾಲ್ಲೂಕಿನ ಹನುಮಂತಾಪುರ ಗೊಲ್ಲರಹಟ್ಟಿ, ತಮಲೇಹಳ್ಳಿ, ಲಕ್ಕಂಪುರ, ಕ್ಯಾಸೇನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ವಿವಿಧ ಇಲಾಖೆಗಳು, ಮುಖ್ಯಮಂತ್ರಿ ವಿಶೇಷ ಅನುದಾನದಲ್ಲಿ ಸಿ.ಸಿ. ರಸ್ತೆ, ಚರಂಡಿ, ಚೆಕ್ ಡ್ಯಾಂ ನಿರ್ಮಿಸುವ ₹15.32 ಕೋಟಿ ವೆಚ್ಚದ ಕಾಮಗಾರಿಗಳಿಗೆ ಭಾನುವಾರ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.</p>.<p>‘ಗಾಂಧೀಜಿ ಹೆಸರನ್ನು ದಾಖಲೆಗಳಲ್ಲಿ, ನಾಮಫಲಕಗಳಲ್ಲಿ ಅಳಿಸಬಹುದು. ಆದರೆ ಜನಮಾನಸದಿಂದ ಅಲ್ಲ’ ಎಂದರು. </p>.<p>ತಮಲೇಹಳ್ಳಿಯಲ್ಲಿ ₹50 ಲಕ್ಷ ವೆಚ್ಚದಲ್ಲಿ ಸಿ.ಸಿ. ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. 57 ಕೆರೆ ತುಂಬಿಸುವ ಯೋಜನೆಯಡಿ ಗ್ರಾಮದ ಕೆರೆಗೆ ನೀರು ಹರಿಸಲಾಗಿದೆ. ಕೆರೆಯನ್ನು ಸಂಪರ್ಕಿಸುವ ರಸ್ತೆ, ಜಾಲರ ಅಳವಡಿಕೆ, ಹೂಳೆತ್ತುವ ಕಾಮಗಾರಿ, ವಿದ್ಯುತ್ ದೀಪ ಅಳವಡಿಕೆ ಮಾಡಲಾಗುವುದು ಎಂದರು.</p>.<p>‘ಕ್ಯಾಸೇನಹಳ್ಳಿ ತಿಮ್ಮಿನಕಟ್ಟೆ ಬಳಿ ₹1.24 ಕೋಟಿ ವೆಚ್ಚದ ಚೆಕ್ ಡ್ಯಾಂ ನಿರ್ಮಾಣ ಮಾಡಲಾಗುತ್ತಿದ್ದು, ಇದರಿಂದ ಜನ, ಜಾನುವಾರುಗಳಿಗೆ ನೀರು ದೊರೆತು, ಅಂತರ್ಜಲ ಹೆಚ್ಚಳವಾಗಲಿದೆ. ಮೇಲ್ದಂಡೆ ಯೋಜನೆಯ ಶೇ 35ರಷ್ಟು ಕಾಮಗಾರಿ ಪ್ರಗತಿಯಲ್ಲಿದೆ. 9 ಕೆರೆಗಳು ಭರ್ತಿಯಾಗಲಿವೆ. ಹನಿ ನೀರಾವರಿ ಕಲ್ಪಿಸುವ 62 ಗ್ರಾಮಗಳಿಗೆ ಪಿವಿಸಿ ಪೈಪ್ಲೈನ್ ಕಾಮಗಾರಿ ಶೇ 50ರಷ್ಟು ಪೂರ್ಣವಾಗಿದೆ. ರೈತರು ಜಮೀನುಗಳಲ್ಲಿ ಕಾಮಗಾರಿ ನಡೆಸಲು ಸಹಕರಿಸಬೇಕು’ ಎಂದು ಭದ್ರಾ ಮೇಲ್ದಂಡೆ ಯೋಜನೆಯ ಎಇಇ ಅಫ್ರೀನ್ ಮನವಿ ಮಾಡಿದರು.</p>.<p>ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಷಂಷೀರ್ ಅಹಮ್ಮದ್, ಬಿ.ಮಹೇಶ್ವರಪ್ಪ, ಪಲ್ಲಾಗಟ್ಟೆ ಶೇಖರಪ್ಪ, ಗುರುಮೂರ್ತಿ, ಗ್ರಾ.ಪಂ ಅಧ್ಯಕ್ಷೆ ಅಶ್ವಿನಿ ಅಂಜಿನಪ್ಪ, ಸದಸ್ಯೆ ಚೌಡಮ್ಮ ತಿಮಣ್ಣ, ಅಜ್ಜಪ್ಪ, ಹನುಮಂತಾಪುರ ಚಿತ್ತಪ್ಪ, ಸೂರಲಿಂಗಪ್ಪ, ಇಇ ಶಶಿಧರ್, ಎಇಇ ಭಾರತಿ, ಎಇ ಆನಂದ, ಪಿ.ಆರ್.ಇ.ಡಿ ಎಇಇ ಶಿವಮೂರ್ತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಗಳೂರು</strong>: ಗ್ರಾಮೀಣ ಪ್ರದೇಶದ ಕೂಲಿ ಕಾರ್ಮಿಕರ ಜೀವನಾಧಾರವಾಗಿರುವ ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ರದ್ದು ಮಾಡಿರುವುದು ಜನವಿರೋಧಿ ನೀತಿಯಾಗಿದೆ ಎಂದು ಶಾಸಕ ಬಿ. ದೇವೇಂದ್ರಪ್ಪ ಆರೋಪಿಸಿದರು.</p>.<p>ತಾಲ್ಲೂಕಿನ ಹನುಮಂತಾಪುರ ಗೊಲ್ಲರಹಟ್ಟಿ, ತಮಲೇಹಳ್ಳಿ, ಲಕ್ಕಂಪುರ, ಕ್ಯಾಸೇನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ವಿವಿಧ ಇಲಾಖೆಗಳು, ಮುಖ್ಯಮಂತ್ರಿ ವಿಶೇಷ ಅನುದಾನದಲ್ಲಿ ಸಿ.ಸಿ. ರಸ್ತೆ, ಚರಂಡಿ, ಚೆಕ್ ಡ್ಯಾಂ ನಿರ್ಮಿಸುವ ₹15.32 ಕೋಟಿ ವೆಚ್ಚದ ಕಾಮಗಾರಿಗಳಿಗೆ ಭಾನುವಾರ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.</p>.<p>‘ಗಾಂಧೀಜಿ ಹೆಸರನ್ನು ದಾಖಲೆಗಳಲ್ಲಿ, ನಾಮಫಲಕಗಳಲ್ಲಿ ಅಳಿಸಬಹುದು. ಆದರೆ ಜನಮಾನಸದಿಂದ ಅಲ್ಲ’ ಎಂದರು. </p>.<p>ತಮಲೇಹಳ್ಳಿಯಲ್ಲಿ ₹50 ಲಕ್ಷ ವೆಚ್ಚದಲ್ಲಿ ಸಿ.ಸಿ. ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. 57 ಕೆರೆ ತುಂಬಿಸುವ ಯೋಜನೆಯಡಿ ಗ್ರಾಮದ ಕೆರೆಗೆ ನೀರು ಹರಿಸಲಾಗಿದೆ. ಕೆರೆಯನ್ನು ಸಂಪರ್ಕಿಸುವ ರಸ್ತೆ, ಜಾಲರ ಅಳವಡಿಕೆ, ಹೂಳೆತ್ತುವ ಕಾಮಗಾರಿ, ವಿದ್ಯುತ್ ದೀಪ ಅಳವಡಿಕೆ ಮಾಡಲಾಗುವುದು ಎಂದರು.</p>.<p>‘ಕ್ಯಾಸೇನಹಳ್ಳಿ ತಿಮ್ಮಿನಕಟ್ಟೆ ಬಳಿ ₹1.24 ಕೋಟಿ ವೆಚ್ಚದ ಚೆಕ್ ಡ್ಯಾಂ ನಿರ್ಮಾಣ ಮಾಡಲಾಗುತ್ತಿದ್ದು, ಇದರಿಂದ ಜನ, ಜಾನುವಾರುಗಳಿಗೆ ನೀರು ದೊರೆತು, ಅಂತರ್ಜಲ ಹೆಚ್ಚಳವಾಗಲಿದೆ. ಮೇಲ್ದಂಡೆ ಯೋಜನೆಯ ಶೇ 35ರಷ್ಟು ಕಾಮಗಾರಿ ಪ್ರಗತಿಯಲ್ಲಿದೆ. 9 ಕೆರೆಗಳು ಭರ್ತಿಯಾಗಲಿವೆ. ಹನಿ ನೀರಾವರಿ ಕಲ್ಪಿಸುವ 62 ಗ್ರಾಮಗಳಿಗೆ ಪಿವಿಸಿ ಪೈಪ್ಲೈನ್ ಕಾಮಗಾರಿ ಶೇ 50ರಷ್ಟು ಪೂರ್ಣವಾಗಿದೆ. ರೈತರು ಜಮೀನುಗಳಲ್ಲಿ ಕಾಮಗಾರಿ ನಡೆಸಲು ಸಹಕರಿಸಬೇಕು’ ಎಂದು ಭದ್ರಾ ಮೇಲ್ದಂಡೆ ಯೋಜನೆಯ ಎಇಇ ಅಫ್ರೀನ್ ಮನವಿ ಮಾಡಿದರು.</p>.<p>ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಷಂಷೀರ್ ಅಹಮ್ಮದ್, ಬಿ.ಮಹೇಶ್ವರಪ್ಪ, ಪಲ್ಲಾಗಟ್ಟೆ ಶೇಖರಪ್ಪ, ಗುರುಮೂರ್ತಿ, ಗ್ರಾ.ಪಂ ಅಧ್ಯಕ್ಷೆ ಅಶ್ವಿನಿ ಅಂಜಿನಪ್ಪ, ಸದಸ್ಯೆ ಚೌಡಮ್ಮ ತಿಮಣ್ಣ, ಅಜ್ಜಪ್ಪ, ಹನುಮಂತಾಪುರ ಚಿತ್ತಪ್ಪ, ಸೂರಲಿಂಗಪ್ಪ, ಇಇ ಶಶಿಧರ್, ಎಇಇ ಭಾರತಿ, ಎಇ ಆನಂದ, ಪಿ.ಆರ್.ಇ.ಡಿ ಎಇಇ ಶಿವಮೂರ್ತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>