<p><strong>ಜಗಳೂರು</strong>: ‘ಗ್ರಾಮ ಪಂಚಾಯಿತಿಗೆ ತೆರಿಗೆ ಪಾವತಿಸಿಲ್ಲ ಎಂಬ ಕಾರಣ ನೀಡಿ, ಮದ್ಯಪಾನ ಮಾಡಿ ಬಂದು ಹಲ್ಲೆ ನಡೆಸಿದ್ದಾರೆ’ ಎಂಬ ದೂರಿನ ಮೇರೆಗೆ ದೊಣೆಹಳ್ಳಿ ಪಿಡಿಒ ಕೊಟ್ರೇಶ್ ಸೇರಿದಂತೆ ಹಲವು ಸದಸ್ಯರ ಮೇಲೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.</p>.<p>ತಾಲ್ಲೂಕಿನ ಹಿರೇಮಲ್ಲನಹೊಳೆ ಗ್ರಾಮದ ಪವನ ವಿದ್ಯುತ್ ಕಂಪನಿ ಸಿಎಂಇಎಸ್ ಜೂಪಿಟರ್ ರಿನ್ಯೂವಬಲ್ ಸ್ಟೇಷನ್ ಉದ್ಯೋಗಿ ಉಮಾ ಮಹೇಶ್ವರ ರಾವ್ ಸುರಪನೇನಿ ಅವರು ನೀಡಿರುವ ದೂರಿನ ಹಿನ್ನೆಲೆಯಲ್ಲಿ ಕೊಟ್ರೇಶ್ ಹಾಗೂ 30 ಜನರ ಮೇಲೆ ಪ್ರಕರಣ ದಾಖಲಾಗಿದೆ.</p>.<p>ಘಟನೆ ವಿವರ: ‘ಪವನ ವಿದ್ಯುತ್ ಘಟಕಗಳಿಗೆ ಸಂಬಂಧಿಸಿದಂತೆ 2021 ರಿಂದ 2025ರವರೆಗೂ ತೆರಿಗೆ ಪಾವತಿಸಲಾಗಿದೆ. 2025–2026ನೇ ಸಾಲಿನಲ್ಲಿ ಗ್ರಾಮ ಪಂಚಾಯಿತಿ ಹೊಸ ನಿಯಮ ರೂಪಿಸಿದೆ. ಆದರೆ ಈ ಕುರಿತಂತೆ ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಕೆಯಾಗಿದೆ. ಆದರೆ ದೊಣೆಹಳ್ಳಿ, ಹನುಮಂತಾಪುರ, ಹಿರೇಮಲ್ಲನಹೊಳೆ ಪಂಚಾಯಿತಿಗಳ ಅಧಿಕಾರಿಗಳು ಹಾಗೂ ಸದಸ್ಯರು ತೆರಿಗೆ ಕಟ್ಟುವಂತೆ ಒತ್ತಾಯಿಸುತ್ತಿದ್ದಾರೆ’ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. </p>.<p>‘ಪಿಡಿಒ ಕೊಟ್ರೇಶ್ ಅವರು 25–30 ಜನರ ಗುಂಪು ಕಟ್ಟಿಕೊಂಡು ಹಿರೇಮಲ್ಲನಹೊಳೆಯ ಇಂಧನ ಘಟಕದ ಒಳಗೆ ನುಗ್ಗಿ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿದ್ದಾರೆ. ಘಟಕವನ್ನು ಸುಟ್ಟು ಹಾಕಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ’ ಎಂದು ದೂರಿನಲ್ಲಿ ಆರೋಪಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಗಳೂರು</strong>: ‘ಗ್ರಾಮ ಪಂಚಾಯಿತಿಗೆ ತೆರಿಗೆ ಪಾವತಿಸಿಲ್ಲ ಎಂಬ ಕಾರಣ ನೀಡಿ, ಮದ್ಯಪಾನ ಮಾಡಿ ಬಂದು ಹಲ್ಲೆ ನಡೆಸಿದ್ದಾರೆ’ ಎಂಬ ದೂರಿನ ಮೇರೆಗೆ ದೊಣೆಹಳ್ಳಿ ಪಿಡಿಒ ಕೊಟ್ರೇಶ್ ಸೇರಿದಂತೆ ಹಲವು ಸದಸ್ಯರ ಮೇಲೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.</p>.<p>ತಾಲ್ಲೂಕಿನ ಹಿರೇಮಲ್ಲನಹೊಳೆ ಗ್ರಾಮದ ಪವನ ವಿದ್ಯುತ್ ಕಂಪನಿ ಸಿಎಂಇಎಸ್ ಜೂಪಿಟರ್ ರಿನ್ಯೂವಬಲ್ ಸ್ಟೇಷನ್ ಉದ್ಯೋಗಿ ಉಮಾ ಮಹೇಶ್ವರ ರಾವ್ ಸುರಪನೇನಿ ಅವರು ನೀಡಿರುವ ದೂರಿನ ಹಿನ್ನೆಲೆಯಲ್ಲಿ ಕೊಟ್ರೇಶ್ ಹಾಗೂ 30 ಜನರ ಮೇಲೆ ಪ್ರಕರಣ ದಾಖಲಾಗಿದೆ.</p>.<p>ಘಟನೆ ವಿವರ: ‘ಪವನ ವಿದ್ಯುತ್ ಘಟಕಗಳಿಗೆ ಸಂಬಂಧಿಸಿದಂತೆ 2021 ರಿಂದ 2025ರವರೆಗೂ ತೆರಿಗೆ ಪಾವತಿಸಲಾಗಿದೆ. 2025–2026ನೇ ಸಾಲಿನಲ್ಲಿ ಗ್ರಾಮ ಪಂಚಾಯಿತಿ ಹೊಸ ನಿಯಮ ರೂಪಿಸಿದೆ. ಆದರೆ ಈ ಕುರಿತಂತೆ ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಕೆಯಾಗಿದೆ. ಆದರೆ ದೊಣೆಹಳ್ಳಿ, ಹನುಮಂತಾಪುರ, ಹಿರೇಮಲ್ಲನಹೊಳೆ ಪಂಚಾಯಿತಿಗಳ ಅಧಿಕಾರಿಗಳು ಹಾಗೂ ಸದಸ್ಯರು ತೆರಿಗೆ ಕಟ್ಟುವಂತೆ ಒತ್ತಾಯಿಸುತ್ತಿದ್ದಾರೆ’ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. </p>.<p>‘ಪಿಡಿಒ ಕೊಟ್ರೇಶ್ ಅವರು 25–30 ಜನರ ಗುಂಪು ಕಟ್ಟಿಕೊಂಡು ಹಿರೇಮಲ್ಲನಹೊಳೆಯ ಇಂಧನ ಘಟಕದ ಒಳಗೆ ನುಗ್ಗಿ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿದ್ದಾರೆ. ಘಟಕವನ್ನು ಸುಟ್ಟು ಹಾಕಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ’ ಎಂದು ದೂರಿನಲ್ಲಿ ಆರೋಪಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>