<p>ಜಗಳೂರು: ‘ತಾಲ್ಲೂಕಿನಲ್ಲಿ 57 ಕೆರೆಗಳನ್ನು ತುಂಬಿಸುವ ಮಹತ್ವದ ಯೋಜನೆಯ ಪರಿಣಾಮ ನೀರಾವರಿ ಪ್ರದೇಶ ವಿಸ್ತರಣೆಯಾಗಿದ್ದು, ರೈತರಿಗೆ ಗುಣಮಟ್ಟದ ವಿದ್ಯುತ್ ಸರಬರಾಜು ಮಾಡುವ ಸಲುವಾಗಿ ಗೌರೀಪುರ ಗ್ರಾಮದ ಸಮೀಪ ₹ 198 ಕೋಟಿ ವೆಚ್ಚದಲ್ಲಿ ಬೃಹತ್ ವಿದ್ಯುತ್ ಪ್ರಸರಣಾ ಕೇಂದ್ರ ನಿರ್ಮಾಣ ಮಾಡಲಾಗುತ್ತಿದೆ’ ಎಂದು ಶಾಸಕ ಬಿ. ದೇವೇಂದ್ರಪ್ಪ ಹೇಳಿದರು.</p>.<p>ಬಿದರಕೆರೆ, ಚಿಕ್ಕ ಉಜ್ಜಿನಿ, ಸೇರಿ ತಾಲ್ಲೂಕಿನ ಹಲವೆಡೆ ಬುಧವಾರ ₹ 17.50 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.</p>.<p>‘ಗ್ಯಾರಂಟಿ ಯೋಜನೆಗಳ ಮಧ್ಯೆಯೂ ಕ್ಷೇತ್ರಕ್ಕೆ ಸಾವಿರಾರು ಕೋಟಿ ಅನುದಾನ ಹರಿದು ಬರುತ್ತಿದೆ. ಚಿಕ್ಕ ಉಜ್ಜಿನಿ ಗ್ರಾಮದ ಕೆರೆಗೆ 57 ಕೆರೆ ತುಂಬಿಸುವ ಯೋಜನೆಯಡಿ ನೀರು ಹರಿಸಲಾಗುವುದು. ತಾಲ್ಲೂಕಿನಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಗುಣಮಟ್ಟ ಕಾಯ್ದುಗೊಳ್ಳಬೇಕು. ಕಾಮಗಾರಿ ವಿಳಂಬವಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳು, ಗುತ್ತಿಗೆದಾರರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು.</p>.<p>ಬಿದರಕೆರೆ ಗ್ರಾಮದಲ್ಲಿ ಮೆರವಣಿಗೆ ಮೂಲಕ ತೆರಳಿ ಕಂಪಳಮಾರಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಚಿಕ್ಕ ಉಜ್ಜಿನಿ ಗ್ರಾಮದಲ್ಲಿ ಶಾಸಕರಿಗೆ ಕರಿಕಂಬಳಿ ಹಾಕಿ ಸ್ವಾಗತಿಸಲಾಯಿತು.</p>.<p>ಲೋಕೋಪಯೋಗಿ ಇಲಾಖೆ ಎಇಇ ನಾಗರಾಜ್, ಜಿ.ಪಂ ಎಇಇ ಶಿವಮೂರ್ತಿ, ಪ.ಪಂ ಮುಖ್ಯಾಧಿಕಾರಿ ಲೋಕ್ಯಾನಾಯ್ಕ, ಮುಖಂಡರಾದ ಬಿದರಕೆರೆ ಬಾಬಣ್ಣ, ಓಬಣ್ಣ, ನಾಗರಾಜ್, ಬಿ. ಮಹೇಶ್ವರಪ್ಪ, ಪಲ್ಲಾಗಟ್ಟೆ ಶೇಖರಪ್ಪ, ಗೌಸ್ ಅಹಮ್ಮದ್, ಚಿಕ್ಕ ಉಜ್ಜಿನಿ ಸಿದ್ಲಿಂಗಪ್ಪ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260417-43-1630063423</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಜಗಳೂರು: ‘ತಾಲ್ಲೂಕಿನಲ್ಲಿ 57 ಕೆರೆಗಳನ್ನು ತುಂಬಿಸುವ ಮಹತ್ವದ ಯೋಜನೆಯ ಪರಿಣಾಮ ನೀರಾವರಿ ಪ್ರದೇಶ ವಿಸ್ತರಣೆಯಾಗಿದ್ದು, ರೈತರಿಗೆ ಗುಣಮಟ್ಟದ ವಿದ್ಯುತ್ ಸರಬರಾಜು ಮಾಡುವ ಸಲುವಾಗಿ ಗೌರೀಪುರ ಗ್ರಾಮದ ಸಮೀಪ ₹ 198 ಕೋಟಿ ವೆಚ್ಚದಲ್ಲಿ ಬೃಹತ್ ವಿದ್ಯುತ್ ಪ್ರಸರಣಾ ಕೇಂದ್ರ ನಿರ್ಮಾಣ ಮಾಡಲಾಗುತ್ತಿದೆ’ ಎಂದು ಶಾಸಕ ಬಿ. ದೇವೇಂದ್ರಪ್ಪ ಹೇಳಿದರು.</p>.<p>ಬಿದರಕೆರೆ, ಚಿಕ್ಕ ಉಜ್ಜಿನಿ, ಸೇರಿ ತಾಲ್ಲೂಕಿನ ಹಲವೆಡೆ ಬುಧವಾರ ₹ 17.50 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.</p>.<p>‘ಗ್ಯಾರಂಟಿ ಯೋಜನೆಗಳ ಮಧ್ಯೆಯೂ ಕ್ಷೇತ್ರಕ್ಕೆ ಸಾವಿರಾರು ಕೋಟಿ ಅನುದಾನ ಹರಿದು ಬರುತ್ತಿದೆ. ಚಿಕ್ಕ ಉಜ್ಜಿನಿ ಗ್ರಾಮದ ಕೆರೆಗೆ 57 ಕೆರೆ ತುಂಬಿಸುವ ಯೋಜನೆಯಡಿ ನೀರು ಹರಿಸಲಾಗುವುದು. ತಾಲ್ಲೂಕಿನಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಗುಣಮಟ್ಟ ಕಾಯ್ದುಗೊಳ್ಳಬೇಕು. ಕಾಮಗಾರಿ ವಿಳಂಬವಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳು, ಗುತ್ತಿಗೆದಾರರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು.</p>.<p>ಬಿದರಕೆರೆ ಗ್ರಾಮದಲ್ಲಿ ಮೆರವಣಿಗೆ ಮೂಲಕ ತೆರಳಿ ಕಂಪಳಮಾರಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಚಿಕ್ಕ ಉಜ್ಜಿನಿ ಗ್ರಾಮದಲ್ಲಿ ಶಾಸಕರಿಗೆ ಕರಿಕಂಬಳಿ ಹಾಕಿ ಸ್ವಾಗತಿಸಲಾಯಿತು.</p>.<p>ಲೋಕೋಪಯೋಗಿ ಇಲಾಖೆ ಎಇಇ ನಾಗರಾಜ್, ಜಿ.ಪಂ ಎಇಇ ಶಿವಮೂರ್ತಿ, ಪ.ಪಂ ಮುಖ್ಯಾಧಿಕಾರಿ ಲೋಕ್ಯಾನಾಯ್ಕ, ಮುಖಂಡರಾದ ಬಿದರಕೆರೆ ಬಾಬಣ್ಣ, ಓಬಣ್ಣ, ನಾಗರಾಜ್, ಬಿ. ಮಹೇಶ್ವರಪ್ಪ, ಪಲ್ಲಾಗಟ್ಟೆ ಶೇಖರಪ್ಪ, ಗೌಸ್ ಅಹಮ್ಮದ್, ಚಿಕ್ಕ ಉಜ್ಜಿನಿ ಸಿದ್ಲಿಂಗಪ್ಪ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260417-43-1630063423</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>