‘ಗ್ರಾಮೀಣ ಭಾಗದಲ್ಲಿ ಮತದಾರರು ಮತದಾನದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ‘ನನ್ನ ನಡೆ ಮತಗಟ್ಟೆ ಕಡೆ’ ಅಭಿಯಾನದ ಮೂಲಕ ಮತದಾನ ಜಾಗೃತಿ ಮೂಡಿಸಲಾಗುತ್ತಿದೆ. ವಯೋವೃದ್ದರಿಗೆ, ಅಂಗವಿಕಲರಿಗೆ ವಿಶೇಷವಾಗಿ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಯುವಕರು ಜಾಗೃತರಾಗಿ ಗ್ರಾಮದಲ್ಲಿನ ಮತದಾರರಿಗೆ ಕಡ್ಡಾಯ ಮತದಾನಕ್ಕೆ ಪ್ರೋತ್ಸಾಹಿಸಬೇಕು’ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಬೀರೇಂದ್ರಕುಮಾರ್ ಸಲಹೆ ನೀಡಿದರು.