<p>ಜಗಳೂರು: ತಾಲ್ಲೂಕಿನ ವಿವಿಧೆಡೆ ನಡೆದಿರುವ ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ತಾಲ್ಲೂಕಿನ ಕಟ್ಟಿಗೆಹಳ್ಳಿ ಗ್ರಾಮದ ಶಿವಕುಮಾರ್ ಅವರ ಪತ್ನಿ ಕಾವೇರಿ (20) ಈಚೆಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಇವರು ಹಲವು ದೈಹಿಕ ರೋಗಗಳಿಂದ ಖಿನ್ನತೆಗೆ ಒಳಗಾಗಿದ್ದರು ಎಂದು ತಿಳಿದು ಬಂದಿದೆ.</p>.<p>ಕೊಳವೆಬಾವಿ ಆಪರೇಟರ್ ಆತ್ಮಹತ್ಯೆ: ತಮಿಳುನಾಡು ಮೂಲದ ಕೊಳವೆಬಾವಿ ಆಪರೇಟರ್ ದಿಲೀಪ್ ಪೂಮಾಲರ್ (34) ತಾಲ್ಲೂಕಿನ ಬಿಸ್ತುವಳ್ಳಿ ಗ್ರಾಮದ ಬಳಿ ಈಚೆಗೆ ಮರಕ್ಕೆ ನೇಣು ಹಾಕಿಕೊಂಡಿದ್ದಾರೆ.</p>.<p>ತಮಿಳುನಾಡು ಜಿಲ್ಲೆಯ ನಾಮಕ್ಕಲ್ ಜಿಲ್ಲೆಯ ರಾಶಿಪುರಂ ತಾಲ್ಲೂಕಿನ ಈ ವ್ಯಕ್ತಿ 10 ವರ್ಷಗಳಿಂದ ಕರ್ನಾಟಕದ ವಿವಿಧೆಡೆ ಕೊಳವೆಬಾಯಿ ಕೊರೆಯುವ ಯಂತ್ರ ಸಾಗಿಸುವ ಲಾರಿಯಲ್ಲಿ ಡ್ರಿಲ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದಿಲ್ಲ.</p>.<p>ಈ ಎರಡೂ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಗಳೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260430-43-30202937</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಜಗಳೂರು: ತಾಲ್ಲೂಕಿನ ವಿವಿಧೆಡೆ ನಡೆದಿರುವ ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ತಾಲ್ಲೂಕಿನ ಕಟ್ಟಿಗೆಹಳ್ಳಿ ಗ್ರಾಮದ ಶಿವಕುಮಾರ್ ಅವರ ಪತ್ನಿ ಕಾವೇರಿ (20) ಈಚೆಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಇವರು ಹಲವು ದೈಹಿಕ ರೋಗಗಳಿಂದ ಖಿನ್ನತೆಗೆ ಒಳಗಾಗಿದ್ದರು ಎಂದು ತಿಳಿದು ಬಂದಿದೆ.</p>.<p>ಕೊಳವೆಬಾವಿ ಆಪರೇಟರ್ ಆತ್ಮಹತ್ಯೆ: ತಮಿಳುನಾಡು ಮೂಲದ ಕೊಳವೆಬಾವಿ ಆಪರೇಟರ್ ದಿಲೀಪ್ ಪೂಮಾಲರ್ (34) ತಾಲ್ಲೂಕಿನ ಬಿಸ್ತುವಳ್ಳಿ ಗ್ರಾಮದ ಬಳಿ ಈಚೆಗೆ ಮರಕ್ಕೆ ನೇಣು ಹಾಕಿಕೊಂಡಿದ್ದಾರೆ.</p>.<p>ತಮಿಳುನಾಡು ಜಿಲ್ಲೆಯ ನಾಮಕ್ಕಲ್ ಜಿಲ್ಲೆಯ ರಾಶಿಪುರಂ ತಾಲ್ಲೂಕಿನ ಈ ವ್ಯಕ್ತಿ 10 ವರ್ಷಗಳಿಂದ ಕರ್ನಾಟಕದ ವಿವಿಧೆಡೆ ಕೊಳವೆಬಾಯಿ ಕೊರೆಯುವ ಯಂತ್ರ ಸಾಗಿಸುವ ಲಾರಿಯಲ್ಲಿ ಡ್ರಿಲ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದಿಲ್ಲ.</p>.<p>ಈ ಎರಡೂ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಗಳೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260430-43-30202937</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>