<p><strong>ದಾವಣಗೆರೆ:</strong> ಕನ್ನಡ ಭಾಷೆಗೆ ಎರಡು ಸಾವಿರ ವರ್ಷಕ್ಕೂ ಹೆಚ್ಚು ಇತಿಹಾಸವಿದೆ. ಪಂಪ, ರನ್ನ, ಪೊನ್ನ ಸೇರಿದಂತೆ ಜೈನ ಕವಿಗಳ ಕೊಡುಗೆ ಅಪಾರವಾಗಿದೆ ಎಂದು ವಿಶ್ವ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಕೆ.ಜಿ. ಯಲ್ಲಪ್ಪ ಅಭಿಪ್ರಾಯಪಟ್ಟರು.</p>.<p>ಇಲ್ಲಿನ ಜೈನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಕರ್ನಾಟಕ ರಾಜ್ಯೋತ್ಸವದಲ್ಲಿ ಅವರು ಮಾತನಾಡಿದರು.</p>.<p>‘ಪ್ರತಿಯೊಬ್ಬರೂ ನಿತ್ಯ ಕನ್ನಡವನ್ನು ಬಳಸಬೇಕು. ಈ ಮೂಲಕ ಭಾಷೆಯ ಬೆಳವಣಿಗೆಗೆ ಕೈಜೋಡಿಸಬೇಕು’ ಎಂದು ಮನವಿ ಮಾಡಿದರು.</p>.<p>ಚಿತ್ರನಟ ಪೃಥ್ವಿ ಶಾಮನೂರು, ‘ಕನ್ನಡವನ್ನು ದಿನನಿತ್ಯದ ಬದುಕಿನಲ್ಲಿ ಬಳಕೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯ’ ಎಂದು ಹೇಳಿದರು.</p>.<p>ಪ್ರಾಂಶುಪಾಲ ಗಣೇಶ್ ಡಿ.ಬಿ., ‘ಕನ್ನಡಕ್ಕೆ ಅತ್ಯಂತ ಪುರಾತನ ಇತಿಹಾಸವಿದೆ. ವಿಶ್ವದ ಅನೇಕ ದೇಶಗಳು ಮಾತೃಭಾಷೆಗೆ ಆದ್ಯತೆ ನೀಡುತ್ತವೆ. ನಾವೂ ಕೂಡ ಕನ್ನಡವನ್ನು ಪ್ರತಿದಿನ ಬಳಸುವ ಮೂಲಕ ಭಾಷೆಯ ಸಂರಕ್ಷಣೆ ಮತ್ತು ವಿಕಸನಕ್ಕೆ ಕೊಡುಗೆ ನೀಡಬೇಕು’ ಎಂದರು.</p>.<p>ಪ್ರಾಧ್ಯಾಪಕರಾದ ಪ್ರಕಾಶ ಕೆ.ಬಿ, ಸವಿತಾ ಮಮಡಾಪುರ, ರಾಹುಲ್ ಪಾಟೀಲ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಕನ್ನಡ ಭಾಷೆಗೆ ಎರಡು ಸಾವಿರ ವರ್ಷಕ್ಕೂ ಹೆಚ್ಚು ಇತಿಹಾಸವಿದೆ. ಪಂಪ, ರನ್ನ, ಪೊನ್ನ ಸೇರಿದಂತೆ ಜೈನ ಕವಿಗಳ ಕೊಡುಗೆ ಅಪಾರವಾಗಿದೆ ಎಂದು ವಿಶ್ವ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಕೆ.ಜಿ. ಯಲ್ಲಪ್ಪ ಅಭಿಪ್ರಾಯಪಟ್ಟರು.</p>.<p>ಇಲ್ಲಿನ ಜೈನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಕರ್ನಾಟಕ ರಾಜ್ಯೋತ್ಸವದಲ್ಲಿ ಅವರು ಮಾತನಾಡಿದರು.</p>.<p>‘ಪ್ರತಿಯೊಬ್ಬರೂ ನಿತ್ಯ ಕನ್ನಡವನ್ನು ಬಳಸಬೇಕು. ಈ ಮೂಲಕ ಭಾಷೆಯ ಬೆಳವಣಿಗೆಗೆ ಕೈಜೋಡಿಸಬೇಕು’ ಎಂದು ಮನವಿ ಮಾಡಿದರು.</p>.<p>ಚಿತ್ರನಟ ಪೃಥ್ವಿ ಶಾಮನೂರು, ‘ಕನ್ನಡವನ್ನು ದಿನನಿತ್ಯದ ಬದುಕಿನಲ್ಲಿ ಬಳಕೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯ’ ಎಂದು ಹೇಳಿದರು.</p>.<p>ಪ್ರಾಂಶುಪಾಲ ಗಣೇಶ್ ಡಿ.ಬಿ., ‘ಕನ್ನಡಕ್ಕೆ ಅತ್ಯಂತ ಪುರಾತನ ಇತಿಹಾಸವಿದೆ. ವಿಶ್ವದ ಅನೇಕ ದೇಶಗಳು ಮಾತೃಭಾಷೆಗೆ ಆದ್ಯತೆ ನೀಡುತ್ತವೆ. ನಾವೂ ಕೂಡ ಕನ್ನಡವನ್ನು ಪ್ರತಿದಿನ ಬಳಸುವ ಮೂಲಕ ಭಾಷೆಯ ಸಂರಕ್ಷಣೆ ಮತ್ತು ವಿಕಸನಕ್ಕೆ ಕೊಡುಗೆ ನೀಡಬೇಕು’ ಎಂದರು.</p>.<p>ಪ್ರಾಧ್ಯಾಪಕರಾದ ಪ್ರಕಾಶ ಕೆ.ಬಿ, ಸವಿತಾ ಮಮಡಾಪುರ, ರಾಹುಲ್ ಪಾಟೀಲ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>