ಶುಕ್ರವಾರಸುದ್ದಿಗೋಷ್ಠಿಯಲ್ಲಿ ಮಾತನಾಡಿದಅವರು, ‘ನಗರದ ಅಶೋಕ ರಸ್ತೆಯಪಂಪಾಪತಿ ಭವನದಲ್ಲಿ ಕಾರ್ಯಕ್ರಮ ನಡೆಯಲಿದೆ. ಚಲೇಜಾವ್ ಚಳವಳಿಯ ಸ್ಮರಣೆ ದಿನದ ಅಂಗವಾಗಿ ಜನಾಂದೋಲನ ಹಮ್ಮಿಕೊಳ್ಳಲಾಗಿದೆ. ದೇಶದಲ್ಲಿ ಬಡತನ, ಹಸಿವು, ನಿರುದ್ಯೋಗ, ಅಸಮಾನತೆ ತಾಂಡವವಾಡುತ್ತಿದೆ. ಕೇಂದ್ರ ಸರ್ಕಾರ ಯಾವ ಸಮಸ್ಯೆಗೂ ಪರಿಹಾರ ನೀಡದೆ ಜನವಿರೋಧಿ ನೀತಿ ಅನುಸರಿಸುತ್ತಿದೆ. ಇದನ್ನು ಖಂಡಿಸಿಜನಾಂದೋಲನ ನಡೆಸಲಾಗುತ್ತದೆ. ದಾವಣಗೆರೆ ಜಿಲ್ಲೆ ಸೇರಿ ಬೆಂಗಳೂರು, ಮಂಗಳೂರು, ಕಲಬುರ್ಗಿ, ಮೈಸೂರು ಜಿಲ್ಲೆಗಳಲ್ಲಿ ಜಾಗೃತಿ ಸಭೆಹಮ್ಮಿಕೊಳ್ಳಲಾಗಿದೆ’ ಎಂದು ತಿಳಿಸಿದರು.