<p><strong>ದಾವಣಗೆರೆ</strong>: ಜೆಡಿಎಸ್ ಮುಖಂಡ ಟಿ.ಅಸ್ಗರ್ ಕೊಲೆಯತ್ನ ಪ್ರಕರಣದ ತನಿಖೆ ನಡೆಸುತ್ತಿರುವ ಅಜಾದ್ ನಗರ ಠಾಣೆಯ ಪೊಲೀಸರು, ಮಾಯಕೊಂಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ನಾಯಕಿ ಸವಿತಾ ಮಲ್ಲೇಶ್ ನಾಯ್ಕ ಅವರನ್ನು ಬಂಧಿಸಿದ್ದಾರೆ.</p><p>ಸವಿತಾ ಅವರನ್ನು ಶುಕ್ರವಾರ ವಶಕ್ಕೆ ಪಡೆದು ವಿಚಾರಣೆ ನಡೆಸಿದ ಪೊಲೀಸರು, ಕೊಲೆ ಯತ್ನ ಪ್ರಕರಣದಲ್ಲಿ ಭಾಗಿಯಾಗಿರುವುದು ಖಚಿತವಾದ ಹಿನ್ನೆಲೆಯಲ್ಲಿ ಬಂಧಿಸಿದ್ದಾರೆ. ನ್ಯಾಯಾಧೀಶರ ಎದುರು ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.</p><p>ಇಲ್ಲಿನ ಬಾಷಾ ನಗರದಲ್ಲಿ ನ.10ರಂದು ಆಯೋಜಿಸಿದ್ದ ಟಿಪ್ಪು ಜಯಂತಿಯಲ್ಲಿ ಪಾಲ್ಗೊಂಡಿದ್ದ ಅಸ್ಗರ್ ಮೇಲೆ ಕಾಂಗ್ರೆಸ್ ಮುಖಂಡ ಖಾಲೀದ್ ಪೈಲ್ವಾನ್ ದಾಳಿ ನಡೆಸಿ ಚಾಕುವಿನಿಂದ ಇರಿದಿದ್ದನು. ಗಂಭೀರವಾಗಿ ಗಾಯಗೊಂಡಿದ್ದ ಅಸ್ಗರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿ ಬಂಧನಕ್ಕೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.</p><p>‘ಅಸ್ಗರ್ ಕೊಲೆಗೆ ಯತ್ನಿಸಿದ ಆರೋಪಿ ಖಾಲೀದ್ ಪೈಲ್ವಾನ್ಗೆ ಸವಿತಾ ಸಹಾಯ ಮಾಡಿದ್ದು ತನಿಖೆಯಿಂದ ಗೊತ್ತಾಗಿದೆ. ಆರೋಪಿಗೆ ಆಶ್ರಯ ಕಲ್ಪಿಸಿ, ಹಣಕಾಸಿನ ನೆರವು ನೀಡಿ ತಪ್ಪಿಸಿಕೊಳ್ಳಲು ಸಹಕರಿಸಿದ್ದಾರೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಸವಿತಾ ಮಲ್ಲೇಶ್ ನಾಯ್ಕ ಅವರು ಮಾಯಕೊಂಡ ವಿಧಾನಸಭಾ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದರು. ಟಿಕೆಟ್ ಕೈತಪ್ಪಿದ್ದರಿಂದ ಅಸಮಾಧಾನಗೊಂಡು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದರು. ಆ ಬಳಿಕ ಮತ್ತೆ ಕಾಂಗ್ರೆಸ್ಗೆ ಮರಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಜೆಡಿಎಸ್ ಮುಖಂಡ ಟಿ.ಅಸ್ಗರ್ ಕೊಲೆಯತ್ನ ಪ್ರಕರಣದ ತನಿಖೆ ನಡೆಸುತ್ತಿರುವ ಅಜಾದ್ ನಗರ ಠಾಣೆಯ ಪೊಲೀಸರು, ಮಾಯಕೊಂಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ನಾಯಕಿ ಸವಿತಾ ಮಲ್ಲೇಶ್ ನಾಯ್ಕ ಅವರನ್ನು ಬಂಧಿಸಿದ್ದಾರೆ.</p><p>ಸವಿತಾ ಅವರನ್ನು ಶುಕ್ರವಾರ ವಶಕ್ಕೆ ಪಡೆದು ವಿಚಾರಣೆ ನಡೆಸಿದ ಪೊಲೀಸರು, ಕೊಲೆ ಯತ್ನ ಪ್ರಕರಣದಲ್ಲಿ ಭಾಗಿಯಾಗಿರುವುದು ಖಚಿತವಾದ ಹಿನ್ನೆಲೆಯಲ್ಲಿ ಬಂಧಿಸಿದ್ದಾರೆ. ನ್ಯಾಯಾಧೀಶರ ಎದುರು ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.</p><p>ಇಲ್ಲಿನ ಬಾಷಾ ನಗರದಲ್ಲಿ ನ.10ರಂದು ಆಯೋಜಿಸಿದ್ದ ಟಿಪ್ಪು ಜಯಂತಿಯಲ್ಲಿ ಪಾಲ್ಗೊಂಡಿದ್ದ ಅಸ್ಗರ್ ಮೇಲೆ ಕಾಂಗ್ರೆಸ್ ಮುಖಂಡ ಖಾಲೀದ್ ಪೈಲ್ವಾನ್ ದಾಳಿ ನಡೆಸಿ ಚಾಕುವಿನಿಂದ ಇರಿದಿದ್ದನು. ಗಂಭೀರವಾಗಿ ಗಾಯಗೊಂಡಿದ್ದ ಅಸ್ಗರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿ ಬಂಧನಕ್ಕೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.</p><p>‘ಅಸ್ಗರ್ ಕೊಲೆಗೆ ಯತ್ನಿಸಿದ ಆರೋಪಿ ಖಾಲೀದ್ ಪೈಲ್ವಾನ್ಗೆ ಸವಿತಾ ಸಹಾಯ ಮಾಡಿದ್ದು ತನಿಖೆಯಿಂದ ಗೊತ್ತಾಗಿದೆ. ಆರೋಪಿಗೆ ಆಶ್ರಯ ಕಲ್ಪಿಸಿ, ಹಣಕಾಸಿನ ನೆರವು ನೀಡಿ ತಪ್ಪಿಸಿಕೊಳ್ಳಲು ಸಹಕರಿಸಿದ್ದಾರೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಸವಿತಾ ಮಲ್ಲೇಶ್ ನಾಯ್ಕ ಅವರು ಮಾಯಕೊಂಡ ವಿಧಾನಸಭಾ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದರು. ಟಿಕೆಟ್ ಕೈತಪ್ಪಿದ್ದರಿಂದ ಅಸಮಾಧಾನಗೊಂಡು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದರು. ಆ ಬಳಿಕ ಮತ್ತೆ ಕಾಂಗ್ರೆಸ್ಗೆ ಮರಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>