‘ನಟರು, ಜನಸಾಮಾನ್ಯರಿಗೆ ವಿದ್ಯಾರ್ಥಿಗಳ ಕೂಗು ಕೇಳಿಸುತ್ತಿದೆ. ಆದರೆ ಸರ್ಕಾರ ಮಾತ್ರ ಕಿವಿಗೊಡುತ್ತಿಲ್ಲ. ಶಿಷ್ಯವೇತನ ನೀಡುವವರೆಗೂ ಪ್ರತಿಭಟನೆ ಮುಂದುವರಿಸಲಾಗುವುದು. ಒಪಿಡಿ ಸೇವೆ ಬಹಿಷ್ಕಾರ ಮುಂದುವರಿದಿದ್ದು, ಸೋಮವಾರದಿಂದ ತುರ್ತು ಸೇವೆಗಳನ್ನು ಬಹಿಷ್ಕರಿಸುತ್ತೇವೆ’ ಎಂದು ವಿದ್ಯಾರ್ಥಿ ಡಾ. ಹರೀಶ್ ತಿಳಿಸಿದರು.