<p><strong>ದಾವಣಗೆರೆ</strong>: ಬಾಲ್ಯಾವಸ್ಥೆ ಬದುಕಿನ ಪ್ರಮುಖ ಘಟ್ಟ. ಮಕ್ಕಳ ಬಾಲ್ಯ ಹಾಳಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಪಾಲಕರ ಮೇಲಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಕರೆಣ್ಣವರ್ ಅಭಿಪ್ರಾಯಪಟ್ಟರು.</p>.<p>ಇಲ್ಲಿನ ಕರೂರು ಕೈಗಾರಿಕಾ ಪ್ರದೇಶದಲ್ಲಿರುವ ಗ್ಲೋಬಲ್ ಪಬ್ಲಿಕ್ ಶಾಲೆಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಶುಕ್ರವಾರ ಆಯೋಜಿಸಿದ್ದ ‘ಮಕ್ಕಳ ಕನಸುಗಳಿಗೆ ಕಾನೂನಿನ ಕವಚ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮಕ್ಕಳು ಕನಸು ಕಾಣುವುದು ಸಹಜ. ಅವರ ಕನಸು ನನಸಾಗಿಸುವಲ್ಲಿ ಎದುರಾಗುವ ಅಡೆತಡೆಗೆಗಳನ್ನು ನಿವಾರಿಸಬೇಕು. ಕಾನೂನಿನ ಅರಿವು, ಶ್ರೀರಕ್ಷೆಯೊಂದಿಗೆ ಭವಿಷ್ಯಕ್ಕೆ ಬೆಳಕಾಗಬೇಕು’ ಎಂದು ಸಲಹೆ ನೀಡಿದರು.</p>.<p>‘ಪ್ರೌಢಾವಸ್ಥೆಯಿಂದ ಬಾಲ್ಯಕ್ಕೆ ಮರಳಲು ಸಾಧ್ಯವಿಲ್ಲ. ಬಾಲ್ಯಾವಸ್ಥೆಯ ಜೀವನ ತುಂಬಾ ಮಹತ್ವವಾದುದು. ಮಕ್ಕಳ ಪಾಲನೆಗೆ ಹೆಚ್ಚು ಒತ್ತು ನೀಡಬೇಕು. ಪೋಷಕರು ತಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ಪೂರೈಸಿದಾಗ ಮಾತ್ರ ಮಕ್ಕಳ ಭವಿಷ್ಯ ಉಜ್ವಲವಾಗುತ್ತದೆ’ ಎಂದು ಅಭಿಪ್ರಾಯಪಟ್ಟರು.</p>.<p>‘ಮಕ್ಕಳು ಹೆಚ್ಚಿನ ಸಮಯವನ್ನು ಡಿಜಿಟಲ್ ಉಪಕರಣಗಳ ಜೊತೆಗೆ ಕಳೆಯುತ್ತಿದ್ದಾರೆ. ಮೊಬೈಲ್, ಟಿವಿ, ಸಾಮಾಜಿಕ ಜಾಲತಾಣಗಳಲ್ಲಿ ಕಾಲಹರಣ ಮಾಡುತ್ತಿದ್ದಾರೆ. ಇದರಿಂದ ಮಕ್ಕಳ ಭವಿಷ್ಯ ನಾಶವಾಗುತ್ತಿದೆ. ಇವುಗಳಿಂದ ಮಕ್ಕಳನ್ನು ದೂರವಿಟ್ಟು ಗುಣಮಟ್ಟದ ಶಿಕ್ಷಣ ನೀಡಬೇಕು’ ಎಂದು ಹೇಳಿದರು.</p>.<p>ವಕೀಲರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಆರ್. ಗುರುಬಸವರಾಜ್, ದಕ್ಷಿಣ ವಲಯ ಸಂಚಾರಿ ಪೊಲೀಸ್ ಠಾಣಾಧಿಕಾರಿ ಶೈಲಜ, ಉತ್ತರ ವಲಯ ಸಂಚಾರಿ ಪೊಲೀಸ್ ಠಾಣಾಧಿಕಾರಿ ಜಯಶೀಲ, ವಕೀಲ ವೆಂಕಟೇಶ್, ಗ್ಲೋಬಲ್ ಪಬ್ಲಿಕ್ ಶಾಲೆ ಕಾರ್ಯದರ್ಶಿ ಅಸಾದ್ ಉಲ್ಲಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಬಾಲ್ಯಾವಸ್ಥೆ ಬದುಕಿನ ಪ್ರಮುಖ ಘಟ್ಟ. ಮಕ್ಕಳ ಬಾಲ್ಯ ಹಾಳಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಪಾಲಕರ ಮೇಲಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಕರೆಣ್ಣವರ್ ಅಭಿಪ್ರಾಯಪಟ್ಟರು.</p>.<p>ಇಲ್ಲಿನ ಕರೂರು ಕೈಗಾರಿಕಾ ಪ್ರದೇಶದಲ್ಲಿರುವ ಗ್ಲೋಬಲ್ ಪಬ್ಲಿಕ್ ಶಾಲೆಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಶುಕ್ರವಾರ ಆಯೋಜಿಸಿದ್ದ ‘ಮಕ್ಕಳ ಕನಸುಗಳಿಗೆ ಕಾನೂನಿನ ಕವಚ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮಕ್ಕಳು ಕನಸು ಕಾಣುವುದು ಸಹಜ. ಅವರ ಕನಸು ನನಸಾಗಿಸುವಲ್ಲಿ ಎದುರಾಗುವ ಅಡೆತಡೆಗೆಗಳನ್ನು ನಿವಾರಿಸಬೇಕು. ಕಾನೂನಿನ ಅರಿವು, ಶ್ರೀರಕ್ಷೆಯೊಂದಿಗೆ ಭವಿಷ್ಯಕ್ಕೆ ಬೆಳಕಾಗಬೇಕು’ ಎಂದು ಸಲಹೆ ನೀಡಿದರು.</p>.<p>‘ಪ್ರೌಢಾವಸ್ಥೆಯಿಂದ ಬಾಲ್ಯಕ್ಕೆ ಮರಳಲು ಸಾಧ್ಯವಿಲ್ಲ. ಬಾಲ್ಯಾವಸ್ಥೆಯ ಜೀವನ ತುಂಬಾ ಮಹತ್ವವಾದುದು. ಮಕ್ಕಳ ಪಾಲನೆಗೆ ಹೆಚ್ಚು ಒತ್ತು ನೀಡಬೇಕು. ಪೋಷಕರು ತಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ಪೂರೈಸಿದಾಗ ಮಾತ್ರ ಮಕ್ಕಳ ಭವಿಷ್ಯ ಉಜ್ವಲವಾಗುತ್ತದೆ’ ಎಂದು ಅಭಿಪ್ರಾಯಪಟ್ಟರು.</p>.<p>‘ಮಕ್ಕಳು ಹೆಚ್ಚಿನ ಸಮಯವನ್ನು ಡಿಜಿಟಲ್ ಉಪಕರಣಗಳ ಜೊತೆಗೆ ಕಳೆಯುತ್ತಿದ್ದಾರೆ. ಮೊಬೈಲ್, ಟಿವಿ, ಸಾಮಾಜಿಕ ಜಾಲತಾಣಗಳಲ್ಲಿ ಕಾಲಹರಣ ಮಾಡುತ್ತಿದ್ದಾರೆ. ಇದರಿಂದ ಮಕ್ಕಳ ಭವಿಷ್ಯ ನಾಶವಾಗುತ್ತಿದೆ. ಇವುಗಳಿಂದ ಮಕ್ಕಳನ್ನು ದೂರವಿಟ್ಟು ಗುಣಮಟ್ಟದ ಶಿಕ್ಷಣ ನೀಡಬೇಕು’ ಎಂದು ಹೇಳಿದರು.</p>.<p>ವಕೀಲರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಆರ್. ಗುರುಬಸವರಾಜ್, ದಕ್ಷಿಣ ವಲಯ ಸಂಚಾರಿ ಪೊಲೀಸ್ ಠಾಣಾಧಿಕಾರಿ ಶೈಲಜ, ಉತ್ತರ ವಲಯ ಸಂಚಾರಿ ಪೊಲೀಸ್ ಠಾಣಾಧಿಕಾರಿ ಜಯಶೀಲ, ವಕೀಲ ವೆಂಕಟೇಶ್, ಗ್ಲೋಬಲ್ ಪಬ್ಲಿಕ್ ಶಾಲೆ ಕಾರ್ಯದರ್ಶಿ ಅಸಾದ್ ಉಲ್ಲಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>