ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಎಸ್‌ಪಿ ಕಾಯ್ದೆ ಬಂದರೆ ರೈತರಿಗೆ ನ್ಯಾಯ: ಹುಚ್ಚವನಹಳ್ಳಿ ಮಂಜುನಾಥ್

Last Updated 3 ನವೆಂಬರ್ 2021, 5:38 IST
ಅಕ್ಷರ ಗಾತ್ರ

ದಾವಣಗೆರೆ: ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆ ಕಾಯ್ದೆಯನ್ನು ಜಾರಿ ಮಾಡಿದರೆ ರೈತರಿಗೆ ನ್ಯಾಯ ಸಿಗಲಿದೆ. ಅದಕ್ಕಾಗಿ ರೈತರು ಹೋರಾಟ ಮಾಡಬೇಕು ಎಂದು ರೈತ ಸಂಘ ಮತ್ತು ಹಸಿರುಸೇನೆಯ ರಾಜ್ಯಾಧ್ಯಕ್ಷ ಹುಚ್ಚವನಹಳ್ಳಿ ಮಂಜುನಾಥ್ ಹೇಳಿದರು.

ತಾಲ್ಲೂಕಿನ ಚಿಕ್ಕ ತೊಗಲೇರಿ ಗ್ರಾಮದಲ್ಲಿ ರೈತ ಸಂಘ ಮತ್ತು ಹಸಿರುಸೇನೆಯ ಗ್ರಾಮ ಘಟಕವನ್ನು ಉದ್ಘಾಟಿಸಿ ಮಾತನಾಡಿದರು.

ಮೆಕ್ಕೆ ಜೋಳಕ್ಕೆ ₹ 1,860 ಹಾಗೂ ಭತ್ತಕ್ಕೆ ₹ 1,890 ನಿಗದಿ ಮಾಡಿದೆ. ಆದರೆ ಖರೀದಿದಾರರು ₹ 1,200 ಮೆಕ್ಕೆಜೋಳ, ₹ 1,491 ರೂ ಭತ್ತ ಖರೀದಿ ಮಾಡುತ್ತಾರೆ. ಇದರಿಂದ ರೈತ ನಷ್ಟವುಂಟಾಗುತ್ತಿದೆ ಎಂದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುಮ್ಮನೂರು ಬಸವರಾಜ್ ಮಾತನಾಡಿ, ‘ಮೆಕ್ಕೆಜೋಳ ಹಾಗೂ ಭತ್ತ ಕಟಾವಿಗೆ ಬಂದಿದ್ದು, ದಿನೇ ದಿನೇ ಮಾರುಕಟ್ಟೆಯಲ್ಲಿ ದರ ಕುಸಿಯುತ್ತಿದೆ. ರೈತರು ಹೋರಾಟ ಮಾಡುವುದು ಅನಿವಾರ್ಯವಾಗಿದೆ. ಆದ್ದರಿಂದ ರೈತರು ಹಳ್ಳಿ ಹಳ್ಳಿಗಳಲ್ಲಿಯೂ ಸಂಘಟಿತರಾಗಿ ಹೋರಾಟಕ್ಕೆ ಸಜ್ಜಾಗಬೇಕು’ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ರೈತ ಮುಖಂಡರಾದ ತೊಗಲೇರಿ ಕೆಂಚಪ್ಪ ನೀರ್ಥಡಿ ತಿಪ್ಪೇಶ್, ದೇವರಾಜ್ ತಳವಾರ, ಹುಚ್ಚವ್ವನಹಳ್ಳಿ ಪ್ರಕಾಶ್, ಕೆಂಚಮ್ಮನಹಳ್ಳಿ ಹನುಮಂತ್, ಸಿದ್ದಪ್ಪ ನಾಯಕ, ಕೋಲ್ಕುಂಟೆ ಹುಚ್ಚಂಗಪ್ಪ ಹಾಗೂ ಗ್ರಾಮದ ಮುಖಂಡರಾದ ತೋಟದ ಚಂದ್ರಪ್ಪ , ಮಾಯಕೊಂಡ ರಂಗಪ್ಪ ತೋಟದರ ಮಂಜಪ್ಪ ಮೊದಲಾದವರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT