<p><strong>ದಾವಣಗೆರೆ: </strong>ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆ ಕಾಯ್ದೆಯನ್ನು ಜಾರಿ ಮಾಡಿದರೆ ರೈತರಿಗೆ ನ್ಯಾಯ ಸಿಗಲಿದೆ. ಅದಕ್ಕಾಗಿ ರೈತರು ಹೋರಾಟ ಮಾಡಬೇಕು ಎಂದು ರೈತ ಸಂಘ ಮತ್ತು ಹಸಿರುಸೇನೆಯ ರಾಜ್ಯಾಧ್ಯಕ್ಷ ಹುಚ್ಚವನಹಳ್ಳಿ ಮಂಜುನಾಥ್ ಹೇಳಿದರು.</p>.<p>ತಾಲ್ಲೂಕಿನ ಚಿಕ್ಕ ತೊಗಲೇರಿ ಗ್ರಾಮದಲ್ಲಿ ರೈತ ಸಂಘ ಮತ್ತು ಹಸಿರುಸೇನೆಯ ಗ್ರಾಮ ಘಟಕವನ್ನು ಉದ್ಘಾಟಿಸಿ ಮಾತನಾಡಿದರು.</p>.<p>ಮೆಕ್ಕೆ ಜೋಳಕ್ಕೆ ₹ 1,860 ಹಾಗೂ ಭತ್ತಕ್ಕೆ ₹ 1,890 ನಿಗದಿ ಮಾಡಿದೆ. ಆದರೆ ಖರೀದಿದಾರರು ₹ 1,200 ಮೆಕ್ಕೆಜೋಳ, ₹ 1,491 ರೂ ಭತ್ತ ಖರೀದಿ ಮಾಡುತ್ತಾರೆ. ಇದರಿಂದ ರೈತ ನಷ್ಟವುಂಟಾಗುತ್ತಿದೆ ಎಂದರು.</p>.<p>ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುಮ್ಮನೂರು ಬಸವರಾಜ್ ಮಾತನಾಡಿ, ‘ಮೆಕ್ಕೆಜೋಳ ಹಾಗೂ ಭತ್ತ ಕಟಾವಿಗೆ ಬಂದಿದ್ದು, ದಿನೇ ದಿನೇ ಮಾರುಕಟ್ಟೆಯಲ್ಲಿ ದರ ಕುಸಿಯುತ್ತಿದೆ. ರೈತರು ಹೋರಾಟ ಮಾಡುವುದು ಅನಿವಾರ್ಯವಾಗಿದೆ. ಆದ್ದರಿಂದ ರೈತರು ಹಳ್ಳಿ ಹಳ್ಳಿಗಳಲ್ಲಿಯೂ ಸಂಘಟಿತರಾಗಿ ಹೋರಾಟಕ್ಕೆ ಸಜ್ಜಾಗಬೇಕು’ ಎಂದು ತಿಳಿಸಿದರು.</p>.<p>ಕಾರ್ಯಕ್ರಮದಲ್ಲಿ ರೈತ ಮುಖಂಡರಾದ ತೊಗಲೇರಿ ಕೆಂಚಪ್ಪ ನೀರ್ಥಡಿ ತಿಪ್ಪೇಶ್, ದೇವರಾಜ್ ತಳವಾರ, ಹುಚ್ಚವ್ವನಹಳ್ಳಿ ಪ್ರಕಾಶ್, ಕೆಂಚಮ್ಮನಹಳ್ಳಿ ಹನುಮಂತ್, ಸಿದ್ದಪ್ಪ ನಾಯಕ, ಕೋಲ್ಕುಂಟೆ ಹುಚ್ಚಂಗಪ್ಪ ಹಾಗೂ ಗ್ರಾಮದ ಮುಖಂಡರಾದ ತೋಟದ ಚಂದ್ರಪ್ಪ , ಮಾಯಕೊಂಡ ರಂಗಪ್ಪ ತೋಟದರ ಮಂಜಪ್ಪ ಮೊದಲಾದವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆ ಕಾಯ್ದೆಯನ್ನು ಜಾರಿ ಮಾಡಿದರೆ ರೈತರಿಗೆ ನ್ಯಾಯ ಸಿಗಲಿದೆ. ಅದಕ್ಕಾಗಿ ರೈತರು ಹೋರಾಟ ಮಾಡಬೇಕು ಎಂದು ರೈತ ಸಂಘ ಮತ್ತು ಹಸಿರುಸೇನೆಯ ರಾಜ್ಯಾಧ್ಯಕ್ಷ ಹುಚ್ಚವನಹಳ್ಳಿ ಮಂಜುನಾಥ್ ಹೇಳಿದರು.</p>.<p>ತಾಲ್ಲೂಕಿನ ಚಿಕ್ಕ ತೊಗಲೇರಿ ಗ್ರಾಮದಲ್ಲಿ ರೈತ ಸಂಘ ಮತ್ತು ಹಸಿರುಸೇನೆಯ ಗ್ರಾಮ ಘಟಕವನ್ನು ಉದ್ಘಾಟಿಸಿ ಮಾತನಾಡಿದರು.</p>.<p>ಮೆಕ್ಕೆ ಜೋಳಕ್ಕೆ ₹ 1,860 ಹಾಗೂ ಭತ್ತಕ್ಕೆ ₹ 1,890 ನಿಗದಿ ಮಾಡಿದೆ. ಆದರೆ ಖರೀದಿದಾರರು ₹ 1,200 ಮೆಕ್ಕೆಜೋಳ, ₹ 1,491 ರೂ ಭತ್ತ ಖರೀದಿ ಮಾಡುತ್ತಾರೆ. ಇದರಿಂದ ರೈತ ನಷ್ಟವುಂಟಾಗುತ್ತಿದೆ ಎಂದರು.</p>.<p>ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುಮ್ಮನೂರು ಬಸವರಾಜ್ ಮಾತನಾಡಿ, ‘ಮೆಕ್ಕೆಜೋಳ ಹಾಗೂ ಭತ್ತ ಕಟಾವಿಗೆ ಬಂದಿದ್ದು, ದಿನೇ ದಿನೇ ಮಾರುಕಟ್ಟೆಯಲ್ಲಿ ದರ ಕುಸಿಯುತ್ತಿದೆ. ರೈತರು ಹೋರಾಟ ಮಾಡುವುದು ಅನಿವಾರ್ಯವಾಗಿದೆ. ಆದ್ದರಿಂದ ರೈತರು ಹಳ್ಳಿ ಹಳ್ಳಿಗಳಲ್ಲಿಯೂ ಸಂಘಟಿತರಾಗಿ ಹೋರಾಟಕ್ಕೆ ಸಜ್ಜಾಗಬೇಕು’ ಎಂದು ತಿಳಿಸಿದರು.</p>.<p>ಕಾರ್ಯಕ್ರಮದಲ್ಲಿ ರೈತ ಮುಖಂಡರಾದ ತೊಗಲೇರಿ ಕೆಂಚಪ್ಪ ನೀರ್ಥಡಿ ತಿಪ್ಪೇಶ್, ದೇವರಾಜ್ ತಳವಾರ, ಹುಚ್ಚವ್ವನಹಳ್ಳಿ ಪ್ರಕಾಶ್, ಕೆಂಚಮ್ಮನಹಳ್ಳಿ ಹನುಮಂತ್, ಸಿದ್ದಪ್ಪ ನಾಯಕ, ಕೋಲ್ಕುಂಟೆ ಹುಚ್ಚಂಗಪ್ಪ ಹಾಗೂ ಗ್ರಾಮದ ಮುಖಂಡರಾದ ತೋಟದ ಚಂದ್ರಪ್ಪ , ಮಾಯಕೊಂಡ ರಂಗಪ್ಪ ತೋಟದರ ಮಂಜಪ್ಪ ಮೊದಲಾದವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>