ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಕುರಿತು ಇತಿಹಾಸ ಗೊತ್ತಿಲ್ಲದೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹುಚ್ಚುಚ್ಚು ಹೇಳಿಕೆ ನೀಡುತ್ತಿದ್ದಾರೆ.ಕಾಂಗ್ರೆಸ್ ಪಕ್ಷದವರು ಬೇರೆ ಬೇರೆ ಕಾರಣಕ್ಕಾಗಿ ಜೈಲಿಗೆ ಹೋಗಿ ಬಂದಿದ್ದಾರೆ. ಕನಿಷ್ಠ ಪಕ್ಷ ಸಿದ್ದರಾಮಯ್ಯ ಅಂಡಮಾನ್ ಜೈಲನ್ನಾದರೂ ನೋಡಿಕೊಂಡು ಬರಬೇಕು. ಏಕೆಂದರೆ ಸಾವರ್ಕರ್ ಅವರನ್ನು ಬ್ರಿಟಿಷರು ಅಂಡಮಾನ್ ಜೈಲಿನಲ್ಲಿ ಬಂಧಿಸಿಟ್ಟಿದ್ದರು. ಸೋನಿಯಾ ಗಾಂಧಿಯನ್ನು ಮೆಚ್ಚಿಸಿದರೆ ಮತ್ತೆ ಏನಾದರೊಂದು ಹುದ್ದೆ ಗಿಟ್ಟಿಸಿಕೊಳ್ಳಬಹುದು ಎಂಬ ಭ್ರಮೆಯಲ್ಲಿ ಇದ್ದಂತಿದೆ’ ಎಂದು ಕುಟುಕಿದರು.