ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿ, ‘ಕುರುಬರಿಗೆ ಪರಿಶಿಷ್ಟ ಪಂಗಡದ ಮೀಸಲಾತಿಗೆ ಆಗ್ರಹಿಸಿ ಆರಂಭಿಸಿದ ಪಾದಯಾತ್ರೆ ಸಾರ್ಥಕವಾಗಿದೆ. ನಾವು ಹೊಸದಾಗಿ ಮೀಸಲಾತಿ ಕೇಳುತ್ತಿಲ್ಲ. ಈಗ ಇರುವ ಎಸ್.ಟಿ ಮೀಸಲಾತಿ ಪಟ್ಟಿಯಲ್ಲಿ ಕುರುಬ ಎಂಬ ಪದ ಬಿಟ್ಟು ಹೋಗಿದೆ. ಅದನ್ನು ಸೇರ್ಪಡೆ ಮಾಡಿ ಎಂಬುದು ನಮ್ಮ ಬೇಡಿಕೆಯಾಗಿದೆ’ ಎಂದರು.