<p><strong>ನ್ಯಾಮತಿ:</strong> ತಾಲ್ಲೂಕಿನ ಕಲ್ಬಿಗಿರಿ ಬೆಟ್ಟದ ಮೇಲಿರುವ ಕಲ್ಬಿಗಿರಿ ರಂಗನಾಥ ಸ್ವಾಮಿಯ ದೀಪಾರಾಧನೆ, ಜ್ಯೋತಿದರ್ಶನ ಮತ್ತು ಬನ್ನಿ ಮತ್ತು ಅಂಬುಸೇವೆ ಜಾತ್ರಾ ಮಹೋತ್ಸವ ಭಾನುವಾರ ಭಕ್ತರ ಸಮ್ಮುಖದಲ್ಲಿ ನಡೆಯಿತು.</p>.<p>ದೇವಾಲಯ ವಿಜಯನಗರ ಸಂಸ್ಥಾನದ ಬೆಳಗುತ್ತಿ ಅರಸರ ಧರ್ಮದರ್ಶಿ ವಂಶಸ್ಥರ ಆಳ್ವಿಕೆಗೆ ಒಳಪಟ್ಟಿದೆ.</p>.<p>ಅಲಂಕರಿಸಿದ ಸ್ವಾಮಿಯ ಉತ್ಸವ ಮೂರ್ತಿಯನ್ನು ಮೆರವಣಿಗೆ ಮೂಲಕ ಬನ್ನಿ ವೃಕ್ಷದ ಕಟ್ಟೆಗೆ ತಂದು, ಅರ್ಚಕರು ಪೂಜೆ ಸಲ್ಲಿಸಿದರು. ನಂತರ ಬನ್ನಿ ವಿತರಣೆ, ವಿನಿಮಯ ಕಾರ್ಯಕ್ರಮ ನಡೆಯಿತು.</p>.<p>ಬನ್ನಿ ಮಹೋತ್ಸವದ ಅಂಗವಾಗಿ ಶುಕ್ರವಾರ, ಶನಿವಾರ ರಂಗನಾಥ ಸ್ವಾಮಿಯ ಶಿಲಾಮೂರ್ತಿಗೆ ದೀಪಾರಾಧನೆ, ವಿಶೇಷ ಅಲಂಕಾರ ಪೂಜೆ ನಡೆಯಿತು. ಭಾನುವಾರ ಬನ್ನಿಯ ನಂತರ ಭೂತಪ್ಪನ ಸೇವೆ ಕಾರ್ಯಕ್ರಮ ಧರ್ಮದರ್ಶಿ ಬಿ.ಪಿ. ಸುಬ್ರಮಣ್ಯ ರಾಜ ಮತ್ತು ಬಿ.ಪಿ. ನವೀನ್ ರಾಜ ಅರಸ್ ನೇತೃತ್ವದಲ್ಲಿ ನಡೆಯಿತು.</p>.<p>ತಹಶೀಲ್ದಾರ್ ತನುಜಾ ಟಿ. ಸವದತ್ತಿ, ಉಪ ತಹಶೀಲ್ದಾರ್ ನ್ಯಾಮತಿ ನಾಗರಾಜಪ್ಪ, ಸಬ್ ಇನ್ಸ್ಪೆಕ್ಟರ್ ಹನುಮಂತಪ್ಪ ಎಂ. ಶಿರಿಹಳ್ಳಿ, ಎಎಸ್ಐ ಬಸವರಾಜ, ಕಾನ್ಸ್ಟೆಬಲ್ ರಾಜು ದೊಡ್ಡಮನೆ, ಮಂಜಣ್ಣ ಚನ್ನೇಶ, ಆರೋಗ್ಯ ಇಲಾಖೆಯ ಜಗದೀಶ ಕೋಡಿಹಳ್ಳಿ ಮತ್ತು ಸಿಬ್ಬಂದಿ ಇದ್ದರು.</p>.<p>ಆರೋಗ್ಯ ಇಲಾಖೆ ಸಿಬ್ಬಂದಿ ಭಕ್ತರ ಆರೋಗ್ಯ ತಪಾಸಣೆ ಮಾಡುವ ಕೋವಿಡ್ ಮುಂಜಾಗ್ರತೆ ಕೈಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನ್ಯಾಮತಿ:</strong> ತಾಲ್ಲೂಕಿನ ಕಲ್ಬಿಗಿರಿ ಬೆಟ್ಟದ ಮೇಲಿರುವ ಕಲ್ಬಿಗಿರಿ ರಂಗನಾಥ ಸ್ವಾಮಿಯ ದೀಪಾರಾಧನೆ, ಜ್ಯೋತಿದರ್ಶನ ಮತ್ತು ಬನ್ನಿ ಮತ್ತು ಅಂಬುಸೇವೆ ಜಾತ್ರಾ ಮಹೋತ್ಸವ ಭಾನುವಾರ ಭಕ್ತರ ಸಮ್ಮುಖದಲ್ಲಿ ನಡೆಯಿತು.</p>.<p>ದೇವಾಲಯ ವಿಜಯನಗರ ಸಂಸ್ಥಾನದ ಬೆಳಗುತ್ತಿ ಅರಸರ ಧರ್ಮದರ್ಶಿ ವಂಶಸ್ಥರ ಆಳ್ವಿಕೆಗೆ ಒಳಪಟ್ಟಿದೆ.</p>.<p>ಅಲಂಕರಿಸಿದ ಸ್ವಾಮಿಯ ಉತ್ಸವ ಮೂರ್ತಿಯನ್ನು ಮೆರವಣಿಗೆ ಮೂಲಕ ಬನ್ನಿ ವೃಕ್ಷದ ಕಟ್ಟೆಗೆ ತಂದು, ಅರ್ಚಕರು ಪೂಜೆ ಸಲ್ಲಿಸಿದರು. ನಂತರ ಬನ್ನಿ ವಿತರಣೆ, ವಿನಿಮಯ ಕಾರ್ಯಕ್ರಮ ನಡೆಯಿತು.</p>.<p>ಬನ್ನಿ ಮಹೋತ್ಸವದ ಅಂಗವಾಗಿ ಶುಕ್ರವಾರ, ಶನಿವಾರ ರಂಗನಾಥ ಸ್ವಾಮಿಯ ಶಿಲಾಮೂರ್ತಿಗೆ ದೀಪಾರಾಧನೆ, ವಿಶೇಷ ಅಲಂಕಾರ ಪೂಜೆ ನಡೆಯಿತು. ಭಾನುವಾರ ಬನ್ನಿಯ ನಂತರ ಭೂತಪ್ಪನ ಸೇವೆ ಕಾರ್ಯಕ್ರಮ ಧರ್ಮದರ್ಶಿ ಬಿ.ಪಿ. ಸುಬ್ರಮಣ್ಯ ರಾಜ ಮತ್ತು ಬಿ.ಪಿ. ನವೀನ್ ರಾಜ ಅರಸ್ ನೇತೃತ್ವದಲ್ಲಿ ನಡೆಯಿತು.</p>.<p>ತಹಶೀಲ್ದಾರ್ ತನುಜಾ ಟಿ. ಸವದತ್ತಿ, ಉಪ ತಹಶೀಲ್ದಾರ್ ನ್ಯಾಮತಿ ನಾಗರಾಜಪ್ಪ, ಸಬ್ ಇನ್ಸ್ಪೆಕ್ಟರ್ ಹನುಮಂತಪ್ಪ ಎಂ. ಶಿರಿಹಳ್ಳಿ, ಎಎಸ್ಐ ಬಸವರಾಜ, ಕಾನ್ಸ್ಟೆಬಲ್ ರಾಜು ದೊಡ್ಡಮನೆ, ಮಂಜಣ್ಣ ಚನ್ನೇಶ, ಆರೋಗ್ಯ ಇಲಾಖೆಯ ಜಗದೀಶ ಕೋಡಿಹಳ್ಳಿ ಮತ್ತು ಸಿಬ್ಬಂದಿ ಇದ್ದರು.</p>.<p>ಆರೋಗ್ಯ ಇಲಾಖೆ ಸಿಬ್ಬಂದಿ ಭಕ್ತರ ಆರೋಗ್ಯ ತಪಾಸಣೆ ಮಾಡುವ ಕೋವಿಡ್ ಮುಂಜಾಗ್ರತೆ ಕೈಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>