<p><strong>ಸಾಸ್ವೆಹಳ್ಳಿ</strong>: ಸಮೀಪದ ಕಮ್ಮಾರಗಟ್ಟೆ ಗ್ರಾಮದಲ್ಲಿ ಗರುಡ ಪಂಚಮಿಯಂದು ಕುಂಬಳೂರಿನ ಗಣಮಗ ದುಂಡ್ಯಪ್ಪ ಐದು ದಿನಗಳ ಕಾಲ ಉಪವಾಸ ವ್ರತ ಆಚರಿಸಿ ಸಂಪ್ರದಾಯ ನಿಯಮಗಳೊಂದಿಗೆ 'ಶಿಖರದ ತುದಿಗೆ ಘಟಸರ್ಪ ಆಡಿತ್ರಲೆ, ಭೂಲೋಕದ ಮುತ್ತು ಗಗನಕೇರಿತ್ರಲೆ, ಅದಕ್ಕೆ ನಾನಿದ್ದೀನಿ' ಎಂಬ ಭವಿಷ್ಯವಾಣಿಯನ್ನು ನುಡಿದರು.</p>.<p>ಹೆಳವನಕಟ್ಟೆ ಗಿರಿಯಮ್ಮನ ಸಾನಿಧ್ಯದಲ್ಲಿ ಕಮ್ಮಾರಗಟ್ಟೆಯ ಮತ್ತು ಕುಂಬಳೂರಿನ ಆಂಜನೇಯ ಸ್ವಾಮಿಯ ನೇತೃತ್ವದಲ್ಲಿ, ಸುತ್ತಮುತ್ತಲ ಗ್ರಾಮಗಳಾದ ಯಲೋದಹಳ್ಳಿ, ದಾಗಿನಕಟ್ಟೆ, ಸಿಂಗಟಗೆರೆ, ಕುಂಬಳೂರು, ಘಂಟ್ಯಾಪುರ, ತರಗನಹಳ್ಳಿ, ತಕ್ಕನಹಳ್ಳಿ, ಉಜ್ಜನಿಪುರ, ರೆಡ್ಡಿಹಳ್ಳಿ, ಅರಕೆರೆ ಹಾಗೂ ಸುತ್ತಮುತ್ತಲ ಗ್ರಾಮಗಳ ದೇವಾನುದೇವತೆಗಳು ಸಮ್ಮುಖದಲ್ಲಿ ಅದ್ಧೂರಿ ಜಾತ್ರೆಯು ನಡೆಯಿತು.</p>.<p>ನವದಂಪತಿಗಳು ಬುಡಮೇಲಾದ ಹುಣಸೆಮರಕ್ಕೆ ಮಂಡಕ್ಕಿ ಎರಚಿ, ಆಂಜನೇಯ ಸ್ವಾಮಿಯ ದರ್ಶನ ಪಡೆದರು. ಜಾತ್ರೆಯಲ್ಲಿ ತಮಗೆ ಇಷ್ಟವಾದ ತಿಂಡಿ, ತಿನಿಸು ಖರಿದೀಸಿದರು. ಮಳೆ ಬಿಡುವು ನೀಡಿದ್ದರಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಸೇರಿದ್ದರು.</p>.<p><strong>ಭವಿಷ್ಯವಾಣಿಯ ವಿಶ್ಲೇಷಣೆ</strong></p><p>ರಾಜಕೀಯ ಹಾಗೂ ರೈತರಿಗೆ ಸಂಬಂಧಿಸಿದಂತೆ ಈ ಭವಿಷ್ಯವಾಣಿಯನ್ನು ಜನರು ವಿಶ್ಲೇಷಿಸುತ್ತಾರೆ. ಈ ವಾಕ್ಯವು ನಾನಾ ಅರ್ಥವನ್ನು ಹೊಂದಿರುತ್ತದೆ. 'ಶಿಖರದ ತುದಿಗೆ ಘಟಸರ್ಪ ಆಡಿತ್ರಲೆ' ಎಂದರೆ ರಾಜಕೀಯ ವಿಶ್ಲೇಷಣೆಯಾಗಿದ್ದು, ರಾಜಕಾರಣದಲ್ಲಿ ಘಟಸರ್ಪದ ಪಾತ್ರ ದೊಡ್ಡದು. ಹಾಗೇಯೇ ಬೆಳೆ, ದಿನಸಿ ಸಾಮಾಗ್ರಿ ಬೆಲೆ ಹೆಚ್ಚಾಗುತ್ತೆ, ಜನರು ಭಯಪಡುವ ಅವಶ್ಯಕತೆ ಇಲ್ಲ ದೇವರು ಕಾಪಾಡುತ್ತಾನೆ ಎನ್ನುತ್ತಾರೆ ಗ್ರಾಮದ ಹನುಮಂತಪ್ಪ.</p>.<p>ಈ ಭವಿಷ್ಯವಾಣಿಗಾಗಿ ಮೈಸೂರಿನ ಅರಸರು ಕಾಯುತ್ತಿದ್ದರು. ಆದ್ದರಿಂದ ಇದು ಮಹತ್ವವನ್ನು ಪಡೆದಿದೆ ಎನ್ನುತ್ತಾರೆ ಭಕ್ತರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಸ್ವೆಹಳ್ಳಿ</strong>: ಸಮೀಪದ ಕಮ್ಮಾರಗಟ್ಟೆ ಗ್ರಾಮದಲ್ಲಿ ಗರುಡ ಪಂಚಮಿಯಂದು ಕುಂಬಳೂರಿನ ಗಣಮಗ ದುಂಡ್ಯಪ್ಪ ಐದು ದಿನಗಳ ಕಾಲ ಉಪವಾಸ ವ್ರತ ಆಚರಿಸಿ ಸಂಪ್ರದಾಯ ನಿಯಮಗಳೊಂದಿಗೆ 'ಶಿಖರದ ತುದಿಗೆ ಘಟಸರ್ಪ ಆಡಿತ್ರಲೆ, ಭೂಲೋಕದ ಮುತ್ತು ಗಗನಕೇರಿತ್ರಲೆ, ಅದಕ್ಕೆ ನಾನಿದ್ದೀನಿ' ಎಂಬ ಭವಿಷ್ಯವಾಣಿಯನ್ನು ನುಡಿದರು.</p>.<p>ಹೆಳವನಕಟ್ಟೆ ಗಿರಿಯಮ್ಮನ ಸಾನಿಧ್ಯದಲ್ಲಿ ಕಮ್ಮಾರಗಟ್ಟೆಯ ಮತ್ತು ಕುಂಬಳೂರಿನ ಆಂಜನೇಯ ಸ್ವಾಮಿಯ ನೇತೃತ್ವದಲ್ಲಿ, ಸುತ್ತಮುತ್ತಲ ಗ್ರಾಮಗಳಾದ ಯಲೋದಹಳ್ಳಿ, ದಾಗಿನಕಟ್ಟೆ, ಸಿಂಗಟಗೆರೆ, ಕುಂಬಳೂರು, ಘಂಟ್ಯಾಪುರ, ತರಗನಹಳ್ಳಿ, ತಕ್ಕನಹಳ್ಳಿ, ಉಜ್ಜನಿಪುರ, ರೆಡ್ಡಿಹಳ್ಳಿ, ಅರಕೆರೆ ಹಾಗೂ ಸುತ್ತಮುತ್ತಲ ಗ್ರಾಮಗಳ ದೇವಾನುದೇವತೆಗಳು ಸಮ್ಮುಖದಲ್ಲಿ ಅದ್ಧೂರಿ ಜಾತ್ರೆಯು ನಡೆಯಿತು.</p>.<p>ನವದಂಪತಿಗಳು ಬುಡಮೇಲಾದ ಹುಣಸೆಮರಕ್ಕೆ ಮಂಡಕ್ಕಿ ಎರಚಿ, ಆಂಜನೇಯ ಸ್ವಾಮಿಯ ದರ್ಶನ ಪಡೆದರು. ಜಾತ್ರೆಯಲ್ಲಿ ತಮಗೆ ಇಷ್ಟವಾದ ತಿಂಡಿ, ತಿನಿಸು ಖರಿದೀಸಿದರು. ಮಳೆ ಬಿಡುವು ನೀಡಿದ್ದರಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಸೇರಿದ್ದರು.</p>.<p><strong>ಭವಿಷ್ಯವಾಣಿಯ ವಿಶ್ಲೇಷಣೆ</strong></p><p>ರಾಜಕೀಯ ಹಾಗೂ ರೈತರಿಗೆ ಸಂಬಂಧಿಸಿದಂತೆ ಈ ಭವಿಷ್ಯವಾಣಿಯನ್ನು ಜನರು ವಿಶ್ಲೇಷಿಸುತ್ತಾರೆ. ಈ ವಾಕ್ಯವು ನಾನಾ ಅರ್ಥವನ್ನು ಹೊಂದಿರುತ್ತದೆ. 'ಶಿಖರದ ತುದಿಗೆ ಘಟಸರ್ಪ ಆಡಿತ್ರಲೆ' ಎಂದರೆ ರಾಜಕೀಯ ವಿಶ್ಲೇಷಣೆಯಾಗಿದ್ದು, ರಾಜಕಾರಣದಲ್ಲಿ ಘಟಸರ್ಪದ ಪಾತ್ರ ದೊಡ್ಡದು. ಹಾಗೇಯೇ ಬೆಳೆ, ದಿನಸಿ ಸಾಮಾಗ್ರಿ ಬೆಲೆ ಹೆಚ್ಚಾಗುತ್ತೆ, ಜನರು ಭಯಪಡುವ ಅವಶ್ಯಕತೆ ಇಲ್ಲ ದೇವರು ಕಾಪಾಡುತ್ತಾನೆ ಎನ್ನುತ್ತಾರೆ ಗ್ರಾಮದ ಹನುಮಂತಪ್ಪ.</p>.<p>ಈ ಭವಿಷ್ಯವಾಣಿಗಾಗಿ ಮೈಸೂರಿನ ಅರಸರು ಕಾಯುತ್ತಿದ್ದರು. ಆದ್ದರಿಂದ ಇದು ಮಹತ್ವವನ್ನು ಪಡೆದಿದೆ ಎನ್ನುತ್ತಾರೆ ಭಕ್ತರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>