<p><strong>ನ್ಯಾಮತಿ</strong>: ‘ಕರ್ನಾಟಕ ರಾಜ್ಯದಲ್ಲಿ ವಾಸಿಸುವ ಪ್ರತಿಯೊಬ್ಬರೂ ಕನ್ನಡ ಭಾಷೆಗೆ ಗೌರವ ಕೊಡುವುದರ ಜೊತೆಗೆ ಭಾಷೆಯನ್ನು ಕಲಿಯಬೇಕು’ ಎಂದು ಉರ್ದು ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಶಕೀಲ್ ಅಹ್ಮದ್ ತಿಳಿಸಿದರು.</p>.<p>ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಪ್ರತಿತಿಂಗಳ ಎರಡನೇ ಶನಿವಾರ ನಡೆಯುವ ಮಾಸಿಕ ಸಾಹಿತ್ಯ ಸೌರಭ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಕನ್ನಡ ಭಾಷೆಯ ಬಗ್ಗೆ ಆಸಕ್ತಿ, ಪ್ರೀತಿ ಇದ್ದುದರಿಂದ ಭಾಷೆಯನ್ನು ಕಲಿತು ಕನ್ನಡ ಶಿಕ್ಷಕನಾಗಿ ಸೇವೆ ಸಲ್ಲಿಸಿಸಿದೆ. ಈಗಲೂ ಹೊನ್ನಾಳಿ ಮತ್ತು ನ್ಯಾಮತಿ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತೇನೆ’ ಎಂದರು.</p>.<p>‘ಪ್ರಪಂಚದ ಇತರೆ ಭಾಷೆಗಳ ಜೊತೆಗೆ ಕನ್ನಡ ಭಾಷೆಗೆ ತನ್ನದೇ ಆದ ಸ್ಥಾನವಿದೆ. ಕನ್ನಡವನ್ನು ಮೊದಲು ಕನ್ನಡಿಗರು ಪ್ರೀತಿಸುವಂತೆ ಹೇಳುವ ಪರಿಸ್ಥಿತಿ ಬಂದಿರುವುದು ವಿಷಾಧನೀಯ’ ಎಂದು ರಾಜ್ಯ ನಿವೃತ್ತ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಪಿ.ಎಂ.ಷಣ್ಮುಖಯ್ಯ ಹೇಳಿದರು. </p>.<p>ಸಮಾಜ ಸೇವಕಿ ಎಸ್.ಸೌಭಾಗ್ಯಮ್ಮ, ಸದಸ್ಯ ಸೈಯದ್ ಅಪ್ಸರ್ ಪಾಷ ಮಾತನಾಡಿದರು. ಕನ್ನಡ ಸಾಹಿತ್ಯ ಪರಿಷತ್ತು ನ್ಯಾಮತಿ ತಾಲ್ಲೂಕು ಘಟಕದ ಅಧ್ಯಕ್ಷ ಡಿ.ಎಂ.ಹಾಲಾರಾಧ್ಯ ಅಧ್ಯಕ್ಷತೆ ವಹಿಸಿದ್ದರು.</p>.<p>ಬೆಳಗುತ್ತಿ ಹೋಬಳಿ ಘಟಕದ ಅಧ್ಯಕ್ಷ ಎಂ.ಜಿ.ಕವಿರಾಜ, ಕೋಶಾಧ್ಯಕ್ಷ ಎಂ.ಎಸ್.ಜಗದೀಶ, ಸಂಘಟನಾ ಕಾರ್ಯದರ್ಶಿ ಸಿ.ಕೆ.ಬೋಜರಾಜ, ಅಂಬಿಕಾ ಬಿದರಕಟ್ಟೆ, ಬಿ.ಆರ್.ಉಷಾ, ಸಂಚಾಲಕ ಚಂದನ್ ಜಂಗ್ಲೀ, ಸೊಂಡೂರು ಮಹೇಶ್ವರಪ್ಪ, ಎನ್.ಎಸ್.ಅರುಣಕುಮಾರ, ಗ್ರಂಥಪಾಲಕಿ ಈ ಸುಮಲತಾ, ರೇಖಾ ಗಜಾನನ, ಬಿದರಕಟ್ಟೆ ಸತೀಶ, ಎಂ.ಜಯದೇವಪ್ಪ, ಯೋಗಿತಾ, ಕನ್ನಡ ಉಪನ್ಯಾಸಕಿ ವಿಜಯಮಣಿ, ಬಸವದಳ ಸುಮಾ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನ್ಯಾಮತಿ</strong>: ‘ಕರ್ನಾಟಕ ರಾಜ್ಯದಲ್ಲಿ ವಾಸಿಸುವ ಪ್ರತಿಯೊಬ್ಬರೂ ಕನ್ನಡ ಭಾಷೆಗೆ ಗೌರವ ಕೊಡುವುದರ ಜೊತೆಗೆ ಭಾಷೆಯನ್ನು ಕಲಿಯಬೇಕು’ ಎಂದು ಉರ್ದು ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಶಕೀಲ್ ಅಹ್ಮದ್ ತಿಳಿಸಿದರು.</p>.<p>ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಪ್ರತಿತಿಂಗಳ ಎರಡನೇ ಶನಿವಾರ ನಡೆಯುವ ಮಾಸಿಕ ಸಾಹಿತ್ಯ ಸೌರಭ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಕನ್ನಡ ಭಾಷೆಯ ಬಗ್ಗೆ ಆಸಕ್ತಿ, ಪ್ರೀತಿ ಇದ್ದುದರಿಂದ ಭಾಷೆಯನ್ನು ಕಲಿತು ಕನ್ನಡ ಶಿಕ್ಷಕನಾಗಿ ಸೇವೆ ಸಲ್ಲಿಸಿಸಿದೆ. ಈಗಲೂ ಹೊನ್ನಾಳಿ ಮತ್ತು ನ್ಯಾಮತಿ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತೇನೆ’ ಎಂದರು.</p>.<p>‘ಪ್ರಪಂಚದ ಇತರೆ ಭಾಷೆಗಳ ಜೊತೆಗೆ ಕನ್ನಡ ಭಾಷೆಗೆ ತನ್ನದೇ ಆದ ಸ್ಥಾನವಿದೆ. ಕನ್ನಡವನ್ನು ಮೊದಲು ಕನ್ನಡಿಗರು ಪ್ರೀತಿಸುವಂತೆ ಹೇಳುವ ಪರಿಸ್ಥಿತಿ ಬಂದಿರುವುದು ವಿಷಾಧನೀಯ’ ಎಂದು ರಾಜ್ಯ ನಿವೃತ್ತ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಪಿ.ಎಂ.ಷಣ್ಮುಖಯ್ಯ ಹೇಳಿದರು. </p>.<p>ಸಮಾಜ ಸೇವಕಿ ಎಸ್.ಸೌಭಾಗ್ಯಮ್ಮ, ಸದಸ್ಯ ಸೈಯದ್ ಅಪ್ಸರ್ ಪಾಷ ಮಾತನಾಡಿದರು. ಕನ್ನಡ ಸಾಹಿತ್ಯ ಪರಿಷತ್ತು ನ್ಯಾಮತಿ ತಾಲ್ಲೂಕು ಘಟಕದ ಅಧ್ಯಕ್ಷ ಡಿ.ಎಂ.ಹಾಲಾರಾಧ್ಯ ಅಧ್ಯಕ್ಷತೆ ವಹಿಸಿದ್ದರು.</p>.<p>ಬೆಳಗುತ್ತಿ ಹೋಬಳಿ ಘಟಕದ ಅಧ್ಯಕ್ಷ ಎಂ.ಜಿ.ಕವಿರಾಜ, ಕೋಶಾಧ್ಯಕ್ಷ ಎಂ.ಎಸ್.ಜಗದೀಶ, ಸಂಘಟನಾ ಕಾರ್ಯದರ್ಶಿ ಸಿ.ಕೆ.ಬೋಜರಾಜ, ಅಂಬಿಕಾ ಬಿದರಕಟ್ಟೆ, ಬಿ.ಆರ್.ಉಷಾ, ಸಂಚಾಲಕ ಚಂದನ್ ಜಂಗ್ಲೀ, ಸೊಂಡೂರು ಮಹೇಶ್ವರಪ್ಪ, ಎನ್.ಎಸ್.ಅರುಣಕುಮಾರ, ಗ್ರಂಥಪಾಲಕಿ ಈ ಸುಮಲತಾ, ರೇಖಾ ಗಜಾನನ, ಬಿದರಕಟ್ಟೆ ಸತೀಶ, ಎಂ.ಜಯದೇವಪ್ಪ, ಯೋಗಿತಾ, ಕನ್ನಡ ಉಪನ್ಯಾಸಕಿ ವಿಜಯಮಣಿ, ಬಸವದಳ ಸುಮಾ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>