<p><strong>ಹೊನ್ನಾಳಿ</strong>: ಆದಿತ್ಯ ಗುರುಕುಲಂ ಶಾಲೆಯಲ್ಲಿ ಶಿಕ್ಷಣದ ಜೊತೆಗೆ ಸಂಸ್ಕಾರ ನೀಡುತ್ತಿರುವುದು ಅನುಕರಣೀಯ ಎಂದು ಜಗಳೂರು ತಾಲ್ಲೂಕಿನ ಕಣ್ವಗುಪ್ಪೆ ಗವಿಮಠದ ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕಿನ ಬಲಮುರಿ ಕ್ರಾಸ್ನಲ್ಲಿರುವ ಆದಿತ್ಯ ಗುರುಕುಲಂ ಶಾಲೆಯ ಮೊದಲನೇ ವರ್ಷದ ಶಾಲಾ ವಾರ್ಷಿಕೋತ್ಸವ, ಆದಿತ್ಯ ಕಲಾ ಉತ್ಸವ ಸಮಾರಂಭ ಉದ್ಘಾಟಿಸಿ ಶನಿವಾರ ಅವರು ಮಾತನಾಡಿದರು.</p>.<p>ಮಕ್ಕಳಿಗೆ ಜಂಕ್ ಫುಡ್ ನೀಡದಂತೆ ಸಲಹೆ ನೀಡಿದ ಅವರು, ‘ಸಾತ್ವಿಕ ಆಹಾರ ಸೇವನೆಯಿಂದಲೂ ಮಕ್ಕಳ ಬುದ್ಧಿ ಮತ್ತು ಮನಸ್ಸು ವಿಕಸಿತಗೊಳ್ಳುತ್ತದೆ. ಆರೋಗ್ಯವಂತ ಮತ್ತು ಸಂಸ್ಕಾರವಂತ ಯುವಕ, ಯುವತಿಯರು ದೇಶದ ಸಂಪತ್ತು‘ ಎಂದು ಅಭಿಪ್ರಾಯಪಟ್ಟರು.</p>.<p>‘ಆದಿತ್ಯ ಗುರುಕುಲಂ ಶಾಲೆಯನ್ನು ತೆರೆಯುವ ಮೂಲಕ ಈ ಭಾಗದಲ್ಲಿ ಐಸಿಎಸ್ಇ ಪಠ್ಯಕ್ರಮದ ಶಾಲೆಯ ಕೊರತೆ ನೀಗಿದೆ. ಪಾಲಕರ ಸಲಹೆ, ಸಹಕಾರ ನಿರಂತರವಾಗಿರಲಿ’ ಎಂದು ಆದಿತ್ಯ ಗುರುಕುಲಂ ಶಾಲೆಯ ಅಧ್ಯಕ್ಷ ಜಿ.ಮರಿಗೌಡ ಮನವಿ ಮಾಡಿದರು.</p>.<p>ಚಿತ್ರನಟ ಅರ್ಜುನ್ ಗೌಡ ಮಾತನಾಡಿ, ‘ಮಕ್ಕಳಿಗೆ ವಿದ್ಯೆ ನೀಡುವುದು ದೇವರ ಕೆಲಸವಾಗಿದ್ದು, ಶಿಕ್ಷಕರು ಪ್ರಾಮಾಣಿಕತೆಯಿಂದ ಕೆಲಸ ಮಾಡಬೇಕು’ ಎಂದರು.</p>.<p>ಶಾಲೆಯು ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದ್ದು, 130ಕ್ಕೂ ಹೆಚ್ಚು ಮಕ್ಕಳು ಶಾಲೆಯಲ್ಲಿ ಅಭ್ಯಾಸ ಮಾಡುತ್ತಿದ್ದಾರೆ ಎಂದು ಸಂಸ್ಥೆಯ ಆಡಳಿತಾಧಿಕಾರಿ ದಯಾನಂದ ಪ್ರಭು ತಿಳಿಸಿದರು. </p>.<p>ಪ್ರಾಂಶುಪಾಲ ಪರಮೇಶಿ ವಾರ್ಷಿಕ ವರದಿ ವಾಚನ ಮಾಡಿದರು. ಲಿಟ್ಲ್ ಚಾಂಪ್ಸ್ ಗುರುಕುಲಂ ಸಂಸ್ಥೆಯ ವ್ಯವಸ್ಥಾಪಕ ಪೃಥ್ವಿರಾಜ್ ಬಾದಾಮಿ, ಹನುಮಸಾಗರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೃತಿ ಮಂಜುನಾಥ್ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊನ್ನಾಳಿ</strong>: ಆದಿತ್ಯ ಗುರುಕುಲಂ ಶಾಲೆಯಲ್ಲಿ ಶಿಕ್ಷಣದ ಜೊತೆಗೆ ಸಂಸ್ಕಾರ ನೀಡುತ್ತಿರುವುದು ಅನುಕರಣೀಯ ಎಂದು ಜಗಳೂರು ತಾಲ್ಲೂಕಿನ ಕಣ್ವಗುಪ್ಪೆ ಗವಿಮಠದ ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕಿನ ಬಲಮುರಿ ಕ್ರಾಸ್ನಲ್ಲಿರುವ ಆದಿತ್ಯ ಗುರುಕುಲಂ ಶಾಲೆಯ ಮೊದಲನೇ ವರ್ಷದ ಶಾಲಾ ವಾರ್ಷಿಕೋತ್ಸವ, ಆದಿತ್ಯ ಕಲಾ ಉತ್ಸವ ಸಮಾರಂಭ ಉದ್ಘಾಟಿಸಿ ಶನಿವಾರ ಅವರು ಮಾತನಾಡಿದರು.</p>.<p>ಮಕ್ಕಳಿಗೆ ಜಂಕ್ ಫುಡ್ ನೀಡದಂತೆ ಸಲಹೆ ನೀಡಿದ ಅವರು, ‘ಸಾತ್ವಿಕ ಆಹಾರ ಸೇವನೆಯಿಂದಲೂ ಮಕ್ಕಳ ಬುದ್ಧಿ ಮತ್ತು ಮನಸ್ಸು ವಿಕಸಿತಗೊಳ್ಳುತ್ತದೆ. ಆರೋಗ್ಯವಂತ ಮತ್ತು ಸಂಸ್ಕಾರವಂತ ಯುವಕ, ಯುವತಿಯರು ದೇಶದ ಸಂಪತ್ತು‘ ಎಂದು ಅಭಿಪ್ರಾಯಪಟ್ಟರು.</p>.<p>‘ಆದಿತ್ಯ ಗುರುಕುಲಂ ಶಾಲೆಯನ್ನು ತೆರೆಯುವ ಮೂಲಕ ಈ ಭಾಗದಲ್ಲಿ ಐಸಿಎಸ್ಇ ಪಠ್ಯಕ್ರಮದ ಶಾಲೆಯ ಕೊರತೆ ನೀಗಿದೆ. ಪಾಲಕರ ಸಲಹೆ, ಸಹಕಾರ ನಿರಂತರವಾಗಿರಲಿ’ ಎಂದು ಆದಿತ್ಯ ಗುರುಕುಲಂ ಶಾಲೆಯ ಅಧ್ಯಕ್ಷ ಜಿ.ಮರಿಗೌಡ ಮನವಿ ಮಾಡಿದರು.</p>.<p>ಚಿತ್ರನಟ ಅರ್ಜುನ್ ಗೌಡ ಮಾತನಾಡಿ, ‘ಮಕ್ಕಳಿಗೆ ವಿದ್ಯೆ ನೀಡುವುದು ದೇವರ ಕೆಲಸವಾಗಿದ್ದು, ಶಿಕ್ಷಕರು ಪ್ರಾಮಾಣಿಕತೆಯಿಂದ ಕೆಲಸ ಮಾಡಬೇಕು’ ಎಂದರು.</p>.<p>ಶಾಲೆಯು ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದ್ದು, 130ಕ್ಕೂ ಹೆಚ್ಚು ಮಕ್ಕಳು ಶಾಲೆಯಲ್ಲಿ ಅಭ್ಯಾಸ ಮಾಡುತ್ತಿದ್ದಾರೆ ಎಂದು ಸಂಸ್ಥೆಯ ಆಡಳಿತಾಧಿಕಾರಿ ದಯಾನಂದ ಪ್ರಭು ತಿಳಿಸಿದರು. </p>.<p>ಪ್ರಾಂಶುಪಾಲ ಪರಮೇಶಿ ವಾರ್ಷಿಕ ವರದಿ ವಾಚನ ಮಾಡಿದರು. ಲಿಟ್ಲ್ ಚಾಂಪ್ಸ್ ಗುರುಕುಲಂ ಸಂಸ್ಥೆಯ ವ್ಯವಸ್ಥಾಪಕ ಪೃಥ್ವಿರಾಜ್ ಬಾದಾಮಿ, ಹನುಮಸಾಗರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೃತಿ ಮಂಜುನಾಥ್ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>