<p><strong>ಹರಿಹರ</strong>: ತಾಲ್ಲೂಕಿನ ಬೆಳ್ಳೂಡಿ ಗ್ರಾಮ ಸಮೀಪದ ಕಾರ್ಗಿಲ್ ಕಂಪನಿ ವಿವಾದದ ಕುರಿತು ಶೀಘ್ರವೇ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರೊಂದಿಗೆ ಚರ್ಚಿಸಲಾಗುವುದು ಎಂದು ಮರಾಠ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಚ್.ಮರಿಯೋಜಿರಾವ್ ಭರವಸೆ ನೀಡಿದರು.</p>.<p>ಕಂಪನಿ ಮುಂದೆ ಕಾರ್ಮಿಕರು ಹಮ್ಮಿಕೊಂಡಿರುವ ಅಹೋರಾತ್ರಿ ಧರಣಿ ಸ್ಥಳಕ್ಕೆ ಬುಧವಾರ ಭೇಟಿ ನೀಡಿದ ಅವರು, ‘ಈ ಭಾಗದ ನೂರಾರು ಕಾರ್ಮಿಕರು ಹಾಗೂ ಮೆಕ್ಕೆಜೋಳ ಬೆಳೆಯುತ್ತಿರುವ ಸಾವಿರಾರು ರೈತರ ಜೀವನೋಪಾಯಕ್ಕೆ ಆಧಾರವಾಗಿರುವ ಈ ಕಂಪನಿ ಮುಂಚಿನಂತೆ ಕಾರ್ಯ ನಿರ್ವಹಿಸುವುದು ಮುಖ್ಯವಾಗಿದೆ’ ಎಂದರು.</p>.<p>ಲಾಭದಾಯಕವಾಗಿ ನಡೆಯುತ್ತಿದ್ದ ಕೃಷಿ ಆಧಾರಿತ ಕಂಪನಿಯನ್ನು ಮಾರಾಟ ಮಾಡುವಂತಹ ಸ್ಥಿತಿ ಏಕೆ ಬಂತು ಎಂಬ ಪ್ರಶ್ನೆ ಮೂಡಿದೆ. ಕಂಪನಿ ಮಾರಾಟ ಮಾಡುವುದಿದ್ದರೂ ಕೈಗಾರಿಕಾ ನಿಯಮಾವಳಿಗಳನ್ನು ಪಾಲನೆ ಮಾಡಬೇಕು ಎಂದು ಆಗ್ರಹಿಸಿದರು.</p>.<p>10 ವರ್ಷಗಳ ಹಿಂದೆ ಆಗ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರೇ ಕಂಪನಿಯನ್ನು ಉದ್ಘಾಟಿಸಿದ್ದರು. ಈಗ ಅವರ ಅವಧಿಯಲ್ಲೇ ಉತ್ಪಾದನೆ ನಿಲ್ಲಿಸಿ ವಿವಾದ ಸೃಷ್ಟಿಯಾಗಿರುವುದು ವಿಪರ್ಯಾಸವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಕಾರ್ಮಿಕರ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ಕಾರ್ಮಿಕ ಮುಖಂಡ ಎಚ್.ಕೆ.ಕೊಟ್ರಪ್ಪ ಹೇಳಿದರು.</p>.<p>‘ಬಲವಂತವಾಗಿ ಕೆಲಸದಿಂದ ತೆಗೆದಿರುವ ಕಾರ್ಮಿಕರನ್ನು ಮರು ನೇಮಕ ಮಾಡಬೇಕು, ಈಗಿರುವ ಕಾರ್ಮಿಕರಿಗೆ ಸೇವಾ ಭದ್ರತೆ ನೀಡಬೇಕು, ಕಡಿಮೆ ಸಂಬಳಕ್ಕೆ ದುಡಿಯುತ್ತಾರೆ ಎಂಬ ಕಾರಣಕ್ಕೆ ಉತ್ತರ ಪ್ರದೇಶ, ಬಿಹಾರದ ಕಾರ್ಮಿಕರನ್ನು ನೇಮಿಸಿಕೊಳ್ಳಬಾರದು’ ಎಂದು ಆಗ್ರಹಿಸಿದರು.</p>.<p>ಎಐಯುಟಿಯುಸಿ ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ ಕೈದಾಳೆ, ಕಾರ್ಮಿಕ ಸಂಘದ ಅಧ್ಯಕ್ಷ ಸಂಜಯ್ ಜೆ., ಸಿಐಟಿಯು ಜಿಲ್ಲಾ ಸಂಚಾಲಕ ಮುದಿಮಲ್ಲನ ಗೌಡರು, ಸಿಪಿಐ ಸದಸ್ಯ ಕುಮಾರ ನಾಯಕ ಹಾಗೂ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಿಹರ</strong>: ತಾಲ್ಲೂಕಿನ ಬೆಳ್ಳೂಡಿ ಗ್ರಾಮ ಸಮೀಪದ ಕಾರ್ಗಿಲ್ ಕಂಪನಿ ವಿವಾದದ ಕುರಿತು ಶೀಘ್ರವೇ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರೊಂದಿಗೆ ಚರ್ಚಿಸಲಾಗುವುದು ಎಂದು ಮರಾಠ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಚ್.ಮರಿಯೋಜಿರಾವ್ ಭರವಸೆ ನೀಡಿದರು.</p>.<p>ಕಂಪನಿ ಮುಂದೆ ಕಾರ್ಮಿಕರು ಹಮ್ಮಿಕೊಂಡಿರುವ ಅಹೋರಾತ್ರಿ ಧರಣಿ ಸ್ಥಳಕ್ಕೆ ಬುಧವಾರ ಭೇಟಿ ನೀಡಿದ ಅವರು, ‘ಈ ಭಾಗದ ನೂರಾರು ಕಾರ್ಮಿಕರು ಹಾಗೂ ಮೆಕ್ಕೆಜೋಳ ಬೆಳೆಯುತ್ತಿರುವ ಸಾವಿರಾರು ರೈತರ ಜೀವನೋಪಾಯಕ್ಕೆ ಆಧಾರವಾಗಿರುವ ಈ ಕಂಪನಿ ಮುಂಚಿನಂತೆ ಕಾರ್ಯ ನಿರ್ವಹಿಸುವುದು ಮುಖ್ಯವಾಗಿದೆ’ ಎಂದರು.</p>.<p>ಲಾಭದಾಯಕವಾಗಿ ನಡೆಯುತ್ತಿದ್ದ ಕೃಷಿ ಆಧಾರಿತ ಕಂಪನಿಯನ್ನು ಮಾರಾಟ ಮಾಡುವಂತಹ ಸ್ಥಿತಿ ಏಕೆ ಬಂತು ಎಂಬ ಪ್ರಶ್ನೆ ಮೂಡಿದೆ. ಕಂಪನಿ ಮಾರಾಟ ಮಾಡುವುದಿದ್ದರೂ ಕೈಗಾರಿಕಾ ನಿಯಮಾವಳಿಗಳನ್ನು ಪಾಲನೆ ಮಾಡಬೇಕು ಎಂದು ಆಗ್ರಹಿಸಿದರು.</p>.<p>10 ವರ್ಷಗಳ ಹಿಂದೆ ಆಗ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರೇ ಕಂಪನಿಯನ್ನು ಉದ್ಘಾಟಿಸಿದ್ದರು. ಈಗ ಅವರ ಅವಧಿಯಲ್ಲೇ ಉತ್ಪಾದನೆ ನಿಲ್ಲಿಸಿ ವಿವಾದ ಸೃಷ್ಟಿಯಾಗಿರುವುದು ವಿಪರ್ಯಾಸವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಕಾರ್ಮಿಕರ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ಕಾರ್ಮಿಕ ಮುಖಂಡ ಎಚ್.ಕೆ.ಕೊಟ್ರಪ್ಪ ಹೇಳಿದರು.</p>.<p>‘ಬಲವಂತವಾಗಿ ಕೆಲಸದಿಂದ ತೆಗೆದಿರುವ ಕಾರ್ಮಿಕರನ್ನು ಮರು ನೇಮಕ ಮಾಡಬೇಕು, ಈಗಿರುವ ಕಾರ್ಮಿಕರಿಗೆ ಸೇವಾ ಭದ್ರತೆ ನೀಡಬೇಕು, ಕಡಿಮೆ ಸಂಬಳಕ್ಕೆ ದುಡಿಯುತ್ತಾರೆ ಎಂಬ ಕಾರಣಕ್ಕೆ ಉತ್ತರ ಪ್ರದೇಶ, ಬಿಹಾರದ ಕಾರ್ಮಿಕರನ್ನು ನೇಮಿಸಿಕೊಳ್ಳಬಾರದು’ ಎಂದು ಆಗ್ರಹಿಸಿದರು.</p>.<p>ಎಐಯುಟಿಯುಸಿ ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ ಕೈದಾಳೆ, ಕಾರ್ಮಿಕ ಸಂಘದ ಅಧ್ಯಕ್ಷ ಸಂಜಯ್ ಜೆ., ಸಿಐಟಿಯು ಜಿಲ್ಲಾ ಸಂಚಾಲಕ ಮುದಿಮಲ್ಲನ ಗೌಡರು, ಸಿಪಿಐ ಸದಸ್ಯ ಕುಮಾರ ನಾಯಕ ಹಾಗೂ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>