‘ಅಮೆರಿಕ, ಯುರೋಪ್ ದೇಶಗಳಿಗೆ ಹೋಗಿ ಭಾರತದ ಪ್ರಜಾಪ್ರಭುತ್ವವನ್ನು ಉಳಿಸುವಂತೆ ಕೋರಿದ ರಾಹುಲ್ ಗಾಂಧಿಯವರನ್ನು ದೇಶದ ಜನ ಎಂದಿಗೂ ಕ್ಷಮಿಸುವುದಿಲ್ಲ. ಭಾರತ್ ಜೋಡೊ ಯಾತ್ರೆ ಮಾಡಿದ್ದ ರಾಹುಲ್ ಗಾಂಧಿ ಇದೀಗ ವಿದೇಶಗಳಿಗೆ ಹೋಗಿ ಭಾರತದ ಮಾನ ಕಳೆಯುವ ಕೆಲಸ ಮಾಡುತ್ತಿದ್ದಾರೆ. ಇಂತಹ ಕೆಲಸಗಳಿಂದಲೇ ಕಾಂಗ್ರೆಸ್ ಪಕ್ಷ ದೇಶದಾದ್ಯಂತ ಕುಸಿಯುತ್ತಿದೆ. ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲೂ ಜನ ಕಾಂಗ್ರೆಸ್ ಅನ್ನು ತಿರಸ್ಕರಿಸಲಿದ್ದಾರೆ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.