<p><strong>ದಾವಣಗೆರೆ</strong>: ಮತದಾನ ಪ್ರಕ್ರಿಯೆಯಲ್ಲಿನ ಅಕ್ರಮ, ಆಮಿಷಗಳನ್ನು ತಡೆಯಲು ಕಠಿಣ ಕಾಯ್ದೆ ರೂಪಿಸಿದರೂ ಚುನಾವಣಾ ವ್ಯವಸ್ಥೆಯಲ್ಲಿ ಸಂಪೂರ್ಣ ಸುಧಾರಣೆ ತರುವುದು ಸವಾಲಾಗಿ ಪರಿಣಮಿಸಿದೆ. ಹಲವು ಲೋಪದೋಷಗಳ ನಡುವೆಯೂ ದೇಶದ ಪ್ರಜಾಪ್ರಭುತ್ವ ಮಾದರಿಯಾಗಿದೆ ಎಂದು ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ ಅಭಿಪ್ರಾಯಪಟ್ಟರು.</p><p>ಇಲ್ಲಿನ ದಾವಣಗೆರೆ ವಿಶ್ವವಿದ್ಯಾಲಯದ ಎಂಬಿಎ ಸಭಾಂಗಣದಲ್ಲಿ ‘ಪ್ರಜಾಪ್ರಭುತ್ವ ಸಬಲಗೊಳಿಸುವಲ್ಲಿ ಚುನಾವಣಾ ಆಯೋಗದ ಪಾತ್ರ’ದ ಕುರಿತು ರಾಜ್ಯಶಾಸ್ತ್ರ ಅಧ್ಯಯನ ವಿಭಾಗ ಶುಕ್ರವಾರ ಏರ್ಪಡಿಸಿದ್ದ ಕಾರ್ಯಾಗಾರದಲ್ಲಿ ಅವರು ದಿಕ್ಸೂಚಿ ಭಾಷಣ ಮಾಡಿದರು.</p><p>‘ಮತದಾರರನ್ನು ಸೆಳೆಯಲು ಆಮಿಷಗಳನ್ನು ಒಡ್ಡುವುದು ತೀರಾ ಹಿಂದಿನಿಂದಲೂ ಇದೆ. ಚಿಕ್ಕ ಆಮಿಷಗಳಿಂದ ಶುರುವಾದ ಈ ಅನಿಷ್ಟ ಪದ್ಧತಿ ಚುನಾವಣಾ ವ್ಯವಸ್ಥೆಗೆ ಸವಾಲಾಗಿ ಪರಿಣಮಿಸಿದೆ. ಹಣ, ಹೆಂಡ ಮತ್ತು ಜಾತಿ ಚುನಾವಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಕುರಿತು 1972ರ ಘಟಿಕೋತ್ಸವ ಭಾಷಣದಲ್ಲಿ ಕುವೆಂಪು ಕಳವಳ ವ್ಯಕ್ತಪಡಿಸಿದ್ದರು. ಈ ಆತಂಕಗಳು ಇನ್ನೂ ದೂರವಾಗಿಲ್ಲ’ ಎಂದು ಬೇಸರ ಹೊರಹಾಕಿದರು.</p><p>‘ಚುನಾವಣೆಗೆ ಸ್ಪರ್ಧಿಸಿದ ಅಭ್ಯರ್ಥಿ ಮತದಾರರಿಗೆ ಮಂಡಕ್ಕಿ ಹಾಗೂ ಚಹಾ ವ್ಯವಸ್ಥೆ ಮಾಡುತ್ತಿದ್ದ ಕಾಲವೊಂದಿತ್ತು. ಈ ಆಮಿಷ ಕಾಲಕ್ರಮೇಣ ಬದಲಾಯಿತು. ಸೀರೆ, ಕುಕ್ಕರ್ನಂತಹ ವಸ್ತುಗಳನ್ನು ಹಂಚುವುದು ಕಷ್ಟವಾಗುತ್ತಿದ್ದಂತೆ ಹಣ ನೀಡುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಚುನಾವಣಾ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಿದರೂ ಇಂತಹ ಆಮಿಷಗಳನ್ನು ತಡೆಯಲು ಆಗುತ್ತಿಲ್ಲ. ಮತದಾರರ ಮನಸ್ಥಿತಿ ಬದಲಾಗದ ಹೊರತು ಸುಧಾರಣೆ ಸಾಧ್ಯವಿಲ್ಲ’ ಎಂದರು.</p><p>‘ಕ್ಷೇತ್ರ ಪುನರ್ ವಿಂಗಡಣೆ ಹಾಗೂ ಮಹಿಳಾ ಮೀಸಲಾತಿಗೆ ಸಂಬಂಧಿಸಿದಂತೆ ಸಂಸತ್ ಅಧಿವೇಶನದಲ್ಲಿ ಗಹನ ಚರ್ಚೆ ನಡೆಯುತ್ತಿದೆ. ಜನಸಂಖ್ಯೆ ಆಧಾರದ ಮೇಲೆ ಕ್ಷೇತ್ರ ಪುನರ್ ವಿಂಗಡಣೆ ಮಾಡಿದರೆ ಉತ್ತರಪ್ರದೇಶ ಹಾಗೂ ಬಿಹಾರಕ್ಕೆ ಹೆಚ್ಚು ಅನುಕೂಲವಾಗಲಿದೆ ಎಂಬ ಆಕ್ಷೇಪವಿದೆ. ಇದರ ಬದಲಿಗೆ ಶೇಖಡವಾರು ಪ್ರಮಾಣದಲ್ಲಿ ಕ್ಷೇತ್ರ ಪುನರ್ ವಿಂಗಡಣೆ ಮಾಡಲಾಗುತ್ತಿದೆ’ ಎಂದು ಸಂವಾದದಲ್ಲಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.</p><p>‘ಚುನಾವಣೆಗೆ ಸ್ಪರ್ಧಿಸುವ ಉಮೇದುವಾರರು ಘೋಷಣೆ ಮಾಡಿಕೊಳ್ಳುವ ಆಸ್ತಿಯ ಕುರಿತು ಅನುಮಾನಗಳಿದ್ದರೆ ದೂರು ನೀಡುವ ಅವಕಾಶ ಮತದಾರರಿಗೆ ಇದೆ. ಈ ಆಸ್ತಿಯ ಕುರಿತು ತನಿಖೆ ಮಾಡುವ ಅಧಿಕಾರ ಲೋಕಾಯುಕ್ತಕ್ಕಿದೆ. ಘೋಷಣೆಗಿಂತ ಹೆಚ್ಚು ಆಸ್ತಿ ಹೊಂದಿದ್ದು ಸಾಭೀತಾದರೆ ಸದಸ್ಯತ್ವ ಅನರ್ಹಗೊಳ್ಳುತ್ತದೆ. ಚಿತ್ರದುರ್ಗ ಜಿಲ್ಲೆಯ ಗ್ರಾಮ ಪಂಚಾಯಿತಿ ಸದಸ್ಯರನ್ನು ಹೀಗೆ ಅನರ್ಹಗೊಳಿಸಲಾಗಿದೆ’ ಎಂದು ವಿವರಿಸಿದರು.</p><p>‘ಗುಜರಾತ್, ಮಧ್ಯಪ್ರದೇಶ, ಉತ್ತರಪ್ರದೇಶ ಸೇರಿದಂತೆ ದೇಶದ ಹಲವು ರಾಜ್ಯಗಳ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಈಗಲೂ ಮತಪತ್ರ (ಬ್ಯಾಲೆಟ್ ಪೇಪರ್) ವ್ಯವಸ್ಥೆ ಜಾರಿಯಲ್ಲಿದೆ. ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಬದಲಿಗೆ ಮತಪತ್ರ ಬಳಸುವ ಉದ್ದೇಶದಿಂದ ರಾಜ್ಯ ಸರ್ಕಾರ ಕಾನೂನು ರೂಪಿಸಿದೆ. ಯಾವುದು ಸೂಕ್ತ ಎಂಬ ಅಭಿಪ್ರಾಯ ನೀಡುವ ಅಧಿಕಾರ ಆಯೋಗಕ್ಕೆ ಇಲ್ಲ. ಸರ್ಕಾರ ರೂಪಿಸಿದ ಕಾಯ್ದೆಗೆ ಅನುಗುಣವಾಗಿ ಚುನಾವಣೆ ನಡೆಸುವ ಜವಾಬ್ದಾರಿಯನ್ನು ಆಯೋಗ ನಿರ್ವಹಿಸುತ್ತದೆ’ ಎಂದರು.</p><p>ಕುಲಸಚಿವ ಎಸ್.ಬಿ. ಗಂಟಿ, ತುಮಕೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಕೆ.ಸಿ. ಸುರೇಶ, ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ಅಧ್ಯಕ್ಷ ಪ್ರೊ.ಅಶೋಕಕುಮಾರ ಪಾಳೇದ, ಶ್ರೀಧರ ಬಾರ್ಕಿ ಹಾಜರಿದ್ದರು.</p>.<h2>‘ದ್ವೇಷ ಭಾಷಣ: ಕಟ್ಟುನಿಟ್ಟಿನ ಕ್ರಮ’</h2><p>ಚುನಾವಣೆಯಲ್ಲಿ ದ್ವೇಷ ಭಾಷಣ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ರಾಜ್ಯ ಚುನಾವಣಾ ಆಯೋಗ ನಿರ್ಧರಿಸಿದೆ ಎಂದು ಆಯುಕ್ತ ಜಿ.ಎಸ್. ಸಂಗ್ರೇಶಿ ಹೇಳಿದರು.</p><p>‘ದ್ವೇಷ ಭಾಷಣ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇಂಥವರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗುವುದು. ಸಮಾಜದ ಸ್ವಾಸ್ಥ್ಯ ಕದಡುವ ಪ್ರಯತ್ನಕ್ಕೆ ಕಡಿವಾಣ ಹಾಕಲಾಗುವುದು’ ಎಂದು ಸಂವಾದದಲ್ಲಿ ಪ್ರತಿಕ್ರಿಯೆ ನೀಡಿದರು.</p>.<h2>‘ಕೆಲವೇ ತಿಂಗಳಲ್ಲಿ ಚುನಾವಣೆ’</h2><p>‘ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆ ಕೆಲವೇ ತಿಂಗಳಲ್ಲಿ ಎದುರಾಗುವ ಸಾಧ್ಯತೆ ಇದೆ. ಈ ಜವಾಬ್ದಾರಿ ನಿಭಾಯಿಸಲು ರಾಜ್ಯ ಚುನಾವಣಾ ಆಯೋಗದ ಸಿದ್ಧವಿದೆ’ ಎಂದು ಆಯುಕ್ತ ಜಿ.ಎಸ್. ಸಂಗ್ರೇಶಿ ಹೇಳಿದರು.</p><p>‘ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿಗಳಿಗೆ ಚುನಾವಣೆ ನಡೆಸಬೇಕಿದೆ. ದಾವಣಗೆರೆ ಮಹಾನಗರ ಪಾಲಿಕೆ ಸೇರಿದಂತೆ 200ಕ್ಕೂ ಅಧಿಕ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಬೇಕಿದೆ. ವಿಳಂಬ ಪ್ರಕ್ರಿಯೆ ಕುರಿತು ಸರ್ಕಾರದ ವಿರುದ್ಧ ಆಯೋಗವು ಹೈಕೋರ್ಟ್ ಮೆಟ್ಟಿಲೇರಿದೆ’ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಮತದಾನ ಪ್ರಕ್ರಿಯೆಯಲ್ಲಿನ ಅಕ್ರಮ, ಆಮಿಷಗಳನ್ನು ತಡೆಯಲು ಕಠಿಣ ಕಾಯ್ದೆ ರೂಪಿಸಿದರೂ ಚುನಾವಣಾ ವ್ಯವಸ್ಥೆಯಲ್ಲಿ ಸಂಪೂರ್ಣ ಸುಧಾರಣೆ ತರುವುದು ಸವಾಲಾಗಿ ಪರಿಣಮಿಸಿದೆ. ಹಲವು ಲೋಪದೋಷಗಳ ನಡುವೆಯೂ ದೇಶದ ಪ್ರಜಾಪ್ರಭುತ್ವ ಮಾದರಿಯಾಗಿದೆ ಎಂದು ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ ಅಭಿಪ್ರಾಯಪಟ್ಟರು.</p><p>ಇಲ್ಲಿನ ದಾವಣಗೆರೆ ವಿಶ್ವವಿದ್ಯಾಲಯದ ಎಂಬಿಎ ಸಭಾಂಗಣದಲ್ಲಿ ‘ಪ್ರಜಾಪ್ರಭುತ್ವ ಸಬಲಗೊಳಿಸುವಲ್ಲಿ ಚುನಾವಣಾ ಆಯೋಗದ ಪಾತ್ರ’ದ ಕುರಿತು ರಾಜ್ಯಶಾಸ್ತ್ರ ಅಧ್ಯಯನ ವಿಭಾಗ ಶುಕ್ರವಾರ ಏರ್ಪಡಿಸಿದ್ದ ಕಾರ್ಯಾಗಾರದಲ್ಲಿ ಅವರು ದಿಕ್ಸೂಚಿ ಭಾಷಣ ಮಾಡಿದರು.</p><p>‘ಮತದಾರರನ್ನು ಸೆಳೆಯಲು ಆಮಿಷಗಳನ್ನು ಒಡ್ಡುವುದು ತೀರಾ ಹಿಂದಿನಿಂದಲೂ ಇದೆ. ಚಿಕ್ಕ ಆಮಿಷಗಳಿಂದ ಶುರುವಾದ ಈ ಅನಿಷ್ಟ ಪದ್ಧತಿ ಚುನಾವಣಾ ವ್ಯವಸ್ಥೆಗೆ ಸವಾಲಾಗಿ ಪರಿಣಮಿಸಿದೆ. ಹಣ, ಹೆಂಡ ಮತ್ತು ಜಾತಿ ಚುನಾವಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಕುರಿತು 1972ರ ಘಟಿಕೋತ್ಸವ ಭಾಷಣದಲ್ಲಿ ಕುವೆಂಪು ಕಳವಳ ವ್ಯಕ್ತಪಡಿಸಿದ್ದರು. ಈ ಆತಂಕಗಳು ಇನ್ನೂ ದೂರವಾಗಿಲ್ಲ’ ಎಂದು ಬೇಸರ ಹೊರಹಾಕಿದರು.</p><p>‘ಚುನಾವಣೆಗೆ ಸ್ಪರ್ಧಿಸಿದ ಅಭ್ಯರ್ಥಿ ಮತದಾರರಿಗೆ ಮಂಡಕ್ಕಿ ಹಾಗೂ ಚಹಾ ವ್ಯವಸ್ಥೆ ಮಾಡುತ್ತಿದ್ದ ಕಾಲವೊಂದಿತ್ತು. ಈ ಆಮಿಷ ಕಾಲಕ್ರಮೇಣ ಬದಲಾಯಿತು. ಸೀರೆ, ಕುಕ್ಕರ್ನಂತಹ ವಸ್ತುಗಳನ್ನು ಹಂಚುವುದು ಕಷ್ಟವಾಗುತ್ತಿದ್ದಂತೆ ಹಣ ನೀಡುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಚುನಾವಣಾ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಿದರೂ ಇಂತಹ ಆಮಿಷಗಳನ್ನು ತಡೆಯಲು ಆಗುತ್ತಿಲ್ಲ. ಮತದಾರರ ಮನಸ್ಥಿತಿ ಬದಲಾಗದ ಹೊರತು ಸುಧಾರಣೆ ಸಾಧ್ಯವಿಲ್ಲ’ ಎಂದರು.</p><p>‘ಕ್ಷೇತ್ರ ಪುನರ್ ವಿಂಗಡಣೆ ಹಾಗೂ ಮಹಿಳಾ ಮೀಸಲಾತಿಗೆ ಸಂಬಂಧಿಸಿದಂತೆ ಸಂಸತ್ ಅಧಿವೇಶನದಲ್ಲಿ ಗಹನ ಚರ್ಚೆ ನಡೆಯುತ್ತಿದೆ. ಜನಸಂಖ್ಯೆ ಆಧಾರದ ಮೇಲೆ ಕ್ಷೇತ್ರ ಪುನರ್ ವಿಂಗಡಣೆ ಮಾಡಿದರೆ ಉತ್ತರಪ್ರದೇಶ ಹಾಗೂ ಬಿಹಾರಕ್ಕೆ ಹೆಚ್ಚು ಅನುಕೂಲವಾಗಲಿದೆ ಎಂಬ ಆಕ್ಷೇಪವಿದೆ. ಇದರ ಬದಲಿಗೆ ಶೇಖಡವಾರು ಪ್ರಮಾಣದಲ್ಲಿ ಕ್ಷೇತ್ರ ಪುನರ್ ವಿಂಗಡಣೆ ಮಾಡಲಾಗುತ್ತಿದೆ’ ಎಂದು ಸಂವಾದದಲ್ಲಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.</p><p>‘ಚುನಾವಣೆಗೆ ಸ್ಪರ್ಧಿಸುವ ಉಮೇದುವಾರರು ಘೋಷಣೆ ಮಾಡಿಕೊಳ್ಳುವ ಆಸ್ತಿಯ ಕುರಿತು ಅನುಮಾನಗಳಿದ್ದರೆ ದೂರು ನೀಡುವ ಅವಕಾಶ ಮತದಾರರಿಗೆ ಇದೆ. ಈ ಆಸ್ತಿಯ ಕುರಿತು ತನಿಖೆ ಮಾಡುವ ಅಧಿಕಾರ ಲೋಕಾಯುಕ್ತಕ್ಕಿದೆ. ಘೋಷಣೆಗಿಂತ ಹೆಚ್ಚು ಆಸ್ತಿ ಹೊಂದಿದ್ದು ಸಾಭೀತಾದರೆ ಸದಸ್ಯತ್ವ ಅನರ್ಹಗೊಳ್ಳುತ್ತದೆ. ಚಿತ್ರದುರ್ಗ ಜಿಲ್ಲೆಯ ಗ್ರಾಮ ಪಂಚಾಯಿತಿ ಸದಸ್ಯರನ್ನು ಹೀಗೆ ಅನರ್ಹಗೊಳಿಸಲಾಗಿದೆ’ ಎಂದು ವಿವರಿಸಿದರು.</p><p>‘ಗುಜರಾತ್, ಮಧ್ಯಪ್ರದೇಶ, ಉತ್ತರಪ್ರದೇಶ ಸೇರಿದಂತೆ ದೇಶದ ಹಲವು ರಾಜ್ಯಗಳ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಈಗಲೂ ಮತಪತ್ರ (ಬ್ಯಾಲೆಟ್ ಪೇಪರ್) ವ್ಯವಸ್ಥೆ ಜಾರಿಯಲ್ಲಿದೆ. ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಬದಲಿಗೆ ಮತಪತ್ರ ಬಳಸುವ ಉದ್ದೇಶದಿಂದ ರಾಜ್ಯ ಸರ್ಕಾರ ಕಾನೂನು ರೂಪಿಸಿದೆ. ಯಾವುದು ಸೂಕ್ತ ಎಂಬ ಅಭಿಪ್ರಾಯ ನೀಡುವ ಅಧಿಕಾರ ಆಯೋಗಕ್ಕೆ ಇಲ್ಲ. ಸರ್ಕಾರ ರೂಪಿಸಿದ ಕಾಯ್ದೆಗೆ ಅನುಗುಣವಾಗಿ ಚುನಾವಣೆ ನಡೆಸುವ ಜವಾಬ್ದಾರಿಯನ್ನು ಆಯೋಗ ನಿರ್ವಹಿಸುತ್ತದೆ’ ಎಂದರು.</p><p>ಕುಲಸಚಿವ ಎಸ್.ಬಿ. ಗಂಟಿ, ತುಮಕೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಕೆ.ಸಿ. ಸುರೇಶ, ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ಅಧ್ಯಕ್ಷ ಪ್ರೊ.ಅಶೋಕಕುಮಾರ ಪಾಳೇದ, ಶ್ರೀಧರ ಬಾರ್ಕಿ ಹಾಜರಿದ್ದರು.</p>.<h2>‘ದ್ವೇಷ ಭಾಷಣ: ಕಟ್ಟುನಿಟ್ಟಿನ ಕ್ರಮ’</h2><p>ಚುನಾವಣೆಯಲ್ಲಿ ದ್ವೇಷ ಭಾಷಣ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ರಾಜ್ಯ ಚುನಾವಣಾ ಆಯೋಗ ನಿರ್ಧರಿಸಿದೆ ಎಂದು ಆಯುಕ್ತ ಜಿ.ಎಸ್. ಸಂಗ್ರೇಶಿ ಹೇಳಿದರು.</p><p>‘ದ್ವೇಷ ಭಾಷಣ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇಂಥವರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗುವುದು. ಸಮಾಜದ ಸ್ವಾಸ್ಥ್ಯ ಕದಡುವ ಪ್ರಯತ್ನಕ್ಕೆ ಕಡಿವಾಣ ಹಾಕಲಾಗುವುದು’ ಎಂದು ಸಂವಾದದಲ್ಲಿ ಪ್ರತಿಕ್ರಿಯೆ ನೀಡಿದರು.</p>.<h2>‘ಕೆಲವೇ ತಿಂಗಳಲ್ಲಿ ಚುನಾವಣೆ’</h2><p>‘ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆ ಕೆಲವೇ ತಿಂಗಳಲ್ಲಿ ಎದುರಾಗುವ ಸಾಧ್ಯತೆ ಇದೆ. ಈ ಜವಾಬ್ದಾರಿ ನಿಭಾಯಿಸಲು ರಾಜ್ಯ ಚುನಾವಣಾ ಆಯೋಗದ ಸಿದ್ಧವಿದೆ’ ಎಂದು ಆಯುಕ್ತ ಜಿ.ಎಸ್. ಸಂಗ್ರೇಶಿ ಹೇಳಿದರು.</p><p>‘ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿಗಳಿಗೆ ಚುನಾವಣೆ ನಡೆಸಬೇಕಿದೆ. ದಾವಣಗೆರೆ ಮಹಾನಗರ ಪಾಲಿಕೆ ಸೇರಿದಂತೆ 200ಕ್ಕೂ ಅಧಿಕ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಬೇಕಿದೆ. ವಿಳಂಬ ಪ್ರಕ್ರಿಯೆ ಕುರಿತು ಸರ್ಕಾರದ ವಿರುದ್ಧ ಆಯೋಗವು ಹೈಕೋರ್ಟ್ ಮೆಟ್ಟಿಲೇರಿದೆ’ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>