ಬೆಳಗಾವಿಯಲ್ಲಿ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಪ್ರಚಾರ ಮಾಡಲು ಖಾದರ್ ತೆರಳುತ್ತಿದ್ದರು. ಆಪ್ತ ಕಾರ್ಯದರ್ಶಿ ಲಿಫ್ಜತ್ ಕಾರು ಚಲಾಯಿಸುತ್ತಿದ್ದರು. ಆನಗೋಡು ಬಳಿ ರಸ್ತೆ ಕಾಮಗಾರಿ ನಡೆಯುತ್ತಿತ್ತು. ಮುಂದೆ ಹೋಗುತ್ತಿದ್ದ ಲಾರಿ ಏಕಾಏಕಿ ಬ್ರೇಕ್ ಹಾಕಿದ್ದರಿಂದ ಕಾರು ಹಿಂದಿನಿಂದ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಯು.ಟಿ. ಖಾದರ್, ಲಿಫ್ಜತ್ ಮತ್ತು ಮಂಜನಾಡಿ ಗ್ರಾಮ ಪಂಚಾಯಿತಿ ಸದಸ್ಯ ಇಸ್ಮಾಯಿಲ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಾರಿನ ಮುಂಭಾಗ ಜಖಂಗೊಂಡಿದೆ. ಯಾವುದೇ ಅಪಾಯ ಆಗದಿರುವುದರಿಂದ ಪ್ರಕರಣ ದಾಖಲಿಸದೇ ಲಾರಿಯನ್ನು ಮುಂದೆ ಹೋಗಲು ಬಿಡಲಾಗಿದೆ.