ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಲವು ವರ್ಷ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗಿ; ಈಗ ಮತದಾರ ಪಟ್ಟಿಯಲ್ಲಿ ಹೆಸರೇ ಇಲ್ಲ!

ನೊಂದುಕೊಂಡ ನಿವೃತ್ತ ಕಂದಾಯ ಇಲಾಖೆ ಅಧಿಕಾರಿ
Last Updated 23 ಏಪ್ರಿಲ್ 2019, 9:41 IST
ಅಕ್ಷರ ಗಾತ್ರ

ದಾವಣಗೆರೆ: ‘33 ವರ್ಷ ಸರ್ಕಾರಿ ಸೇವೆಯಲ್ಲಿದ್ದುಕೊಂಡು ಚುನಾವಣಾ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದೆ. ಮಸ್ಟರಿಂಗ್‌, ಡಿಮಸ್ಟರಿಂಗ್‌ ನಡೆಸಿದ್ದೆ. ಜತೆಗೆ ಪ್ರತಿಬಾರಿಯೂ ಮತ ಚಲಾಯಿಸಿದ್ದೆ. ಈ ಬಾರಿ ನನ್ನ ಹೆಸರೇ ಪಟ್ಟಿಯಲ್ಲಿ ಇಲ್ಲ’ ಎಂದು ಕಂದಾಯ ಇಲಾಖೆಯ ನಿವೃತ್ತ ಅಧಿಕಾರಿ ಶಿವಕುಮಾರ ಬಡಾವಣೆ ನಿವಾಸಿ ಜಿ. ಚಂದ್ರಯ್ಯ ನೊಂದುಕೊಂಡರು.

ಶಿವಕುಮಾರ ಬಡಾವಣೆಯ ಸೇಂಟ್‌ ಜಾನ್ಸ್‌ ಶಾಲೆಯಲ್ಲಿ ಮತ ಚಲಾಯಿಸಲೆಂದು ಬಂದು ಹೆಸರಿಲ್ಲದೇ ವಾಪಸ್ಸಾದರು.

‘ನಮ್ಮ ಕುಟುಂಬದಲ್ಲಿ 8 ಮಂದಿ ಮತದಾರರಿದ್ದೇವೆ. ನನ್ನೊಬ್ಬನನ್ನು ಬಿಟ್ಟು ಉಳಿದ ಏಳು ಮಂದಿಯ ಹೆಸರು ಇದೆ. ನನ್ನ ಹೆಸರು ಯಾಕೆ ಡಿಲಿಟ್‌ ಮಾಡಿದರು ಎಂಬುದು ಗೊತ್ತಾಗುತ್ತಿಲ್ಲ. ಇದನ್ನು ಇಲ್ಲಿಗೆ ಬಿಡುವುದಿಲ್ಲ. ಮಾಹಿತಿ ಹಕ್ಕಿನಲ್ಲಿ ಅರ್ಜಿ ಸಲ್ಲಿಸಿ ಕೇಳುತ್ತೇನೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT