<p><strong>ದಾವಣಗೆರೆ:</strong> ಬಡ ವಿದ್ಯಾರ್ಥಿಗಳಿಗೆ ಉಚಿತ ಪ್ರಸಾದನಿಲಯಗಳನ್ನು ಪ್ರಾರಂಭಿಸಿ ಲಕ್ಷಾಂತರ ಜನರ ಬಾಳಿಗೆ ಬೆಳಕಾದ ಚಿತ್ರದುರ್ಗ ಮುರುಘಾ ಮಠದ ಜಯದೇವ ಮುರುಘರಾಜೇಂದ್ರ ಸ್ವಾಮೀಜಿ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡಬೇಕು ಎಂದು ವಿರಕ್ತ ಮಠದ ಬಸವಪ್ರಭು ಸ್ವಾಮೀಜಿ ಹೇಳಿದರು.</p>.<p>ಇಲ್ಲಿನ ಶಿವಯೋಗಿ ಮಂದಿರದಲ್ಲಿ ಜಯದೇವ ಸ್ವಾಮೀಜಿ ಅವರ 69ನೇ ಸ್ಮರಣೋತ್ಸವದ ಅಂಗವಾಗಿ ಭಾನುವಾರ ಏರ್ಪಡಿಸಿದ್ದ ‘ಜಯದೇವ ಲೀಲೆ’ ಪ್ರವಚನ ಮಾಲಿಕೆ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಜೀವನೋಪಾಯಕ್ಕಾಗಿ ಚಲನಚಿತ್ರಗಳಲ್ಲಿ ನಟಿಸಿದವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ನೀಡಿದೆ. ಆದರೆ, ಸ್ವಾತಂತ್ರ್ಯ ಪೂರ್ವದಲ್ಲಿ ದೇಶಕ್ಕಾಗಿ ಅಪಾರ ಸೇವೆ ಸಲ್ಲಿಸಿದ ಜಯದೇವ ಸ್ವಾಮೀಜಿ ಕೂಡ ಈ ಪ್ರಶಸ್ತಿಗೆ ಅರ್ಹರು’ ಎಂದು ಅಭಿಪ್ರಾಯಪಟ್ಟರು.</p>.<p>‘ದಾವಣಗೆರೆ, ಬೆಂಗಳೂರು, ತುಮಕೂರು, ಚಿತ್ರದುರ್ಗ, ಧಾರವಾಡ ಸೇರಿ ಅನೇಕ ಸ್ಥಳಗಳಲ್ಲಿ ಪ್ರಸಾದನಿಲಯ ಸ್ಥಾಪಿಸಿದರು. ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪ, ಸಂಶೋಧಕ ಎಂ. ಚಿದಾನಂದಮೂರ್ತಿ, ಮಾಜಿ ಉಪರಾಷ್ಟ್ರಪತಿ ಬಿ.ಡಿ. ಜತ್ತಿ ಅನೇಕರು ಈ ಪ್ರಸಾದ ನಿಲಯಗಳ ಪ್ರಯೋಜನ ಪಡೆದಿದ್ದಾರೆ. ಇದು ನಿಜವಾದ ಸಾಧನೆ’ ಎಂದು ಹೇಳಿದರು.</p>.<p>‘ಸರ್ಕಾರವೊಂದು ಮಾಡುವ ಕಾರ್ಯವನ್ನು ಸ್ವಾಮೀಜಿ ಮಾಡಿದ್ದಾರೆ. 1937ರಲ್ಲಿ ಮೈಸೂರಿನಲ್ಲಿ ಚಿಕಿತ್ಸಾಲಯವೊಂದನ್ನು ತೆರೆಯಲು ₹ 40,000 ನೆರವು ನೀಡಿದ್ದರು. ಕನ್ನಡ ಭಾಷೆ, ಸಾಹಿತ್ಯದ ಮೇಲೆ ಅಪಾರ ಅಭಿಮಾನ ಹೊಂದಿದ್ದ ಶ್ರೀಗಳು ಕರ್ನಾಟಕದ ಏಕೀಕರಣಕ್ಕೆ ಶ್ರಮಿಸಿದ್ದರು. ಶ್ರೀಗಳ ಕಾರ್ಯವನ್ನು ಮಹಾತ್ಮ ಗಾಂಧೀಜಿ ಕೂಡ ಮೆಚ್ಚಿದ್ದರು’ ಎಂದರು.</p>.<p>ಸಂತೆಬೆನ್ನೂರಿನ ಮಹಾಂತೇಶ ಶಾಸ್ತ್ರಿ ಜಯದೇವ ಲೀಲೆ ಪ್ರವಚನ ನೀಡಿದರು. ಮಾಜಿ ಉಪಮೇಯರ್ ಸೋಗಿ ಶಾಂತಕುಮಾರ್, ಎಂ. ಜಯಕುಮಾರ್, ಅಂದನೂರು ಮುಪ್ಪಣ್ಣ , ಎಸ್. ಓಂಕಾರಪ್ಪ, ಕುಂಟೋಜಿ ಚನ್ನಪ್ಪ, ಲಂಬಿ ಮುರುಗೇಶ್, ಎಂ.ಸಿ.ರೇಖಾ, ಕುಸುಮಾ ಲೋಕೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಬಡ ವಿದ್ಯಾರ್ಥಿಗಳಿಗೆ ಉಚಿತ ಪ್ರಸಾದನಿಲಯಗಳನ್ನು ಪ್ರಾರಂಭಿಸಿ ಲಕ್ಷಾಂತರ ಜನರ ಬಾಳಿಗೆ ಬೆಳಕಾದ ಚಿತ್ರದುರ್ಗ ಮುರುಘಾ ಮಠದ ಜಯದೇವ ಮುರುಘರಾಜೇಂದ್ರ ಸ್ವಾಮೀಜಿ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡಬೇಕು ಎಂದು ವಿರಕ್ತ ಮಠದ ಬಸವಪ್ರಭು ಸ್ವಾಮೀಜಿ ಹೇಳಿದರು.</p>.<p>ಇಲ್ಲಿನ ಶಿವಯೋಗಿ ಮಂದಿರದಲ್ಲಿ ಜಯದೇವ ಸ್ವಾಮೀಜಿ ಅವರ 69ನೇ ಸ್ಮರಣೋತ್ಸವದ ಅಂಗವಾಗಿ ಭಾನುವಾರ ಏರ್ಪಡಿಸಿದ್ದ ‘ಜಯದೇವ ಲೀಲೆ’ ಪ್ರವಚನ ಮಾಲಿಕೆ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಜೀವನೋಪಾಯಕ್ಕಾಗಿ ಚಲನಚಿತ್ರಗಳಲ್ಲಿ ನಟಿಸಿದವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ನೀಡಿದೆ. ಆದರೆ, ಸ್ವಾತಂತ್ರ್ಯ ಪೂರ್ವದಲ್ಲಿ ದೇಶಕ್ಕಾಗಿ ಅಪಾರ ಸೇವೆ ಸಲ್ಲಿಸಿದ ಜಯದೇವ ಸ್ವಾಮೀಜಿ ಕೂಡ ಈ ಪ್ರಶಸ್ತಿಗೆ ಅರ್ಹರು’ ಎಂದು ಅಭಿಪ್ರಾಯಪಟ್ಟರು.</p>.<p>‘ದಾವಣಗೆರೆ, ಬೆಂಗಳೂರು, ತುಮಕೂರು, ಚಿತ್ರದುರ್ಗ, ಧಾರವಾಡ ಸೇರಿ ಅನೇಕ ಸ್ಥಳಗಳಲ್ಲಿ ಪ್ರಸಾದನಿಲಯ ಸ್ಥಾಪಿಸಿದರು. ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪ, ಸಂಶೋಧಕ ಎಂ. ಚಿದಾನಂದಮೂರ್ತಿ, ಮಾಜಿ ಉಪರಾಷ್ಟ್ರಪತಿ ಬಿ.ಡಿ. ಜತ್ತಿ ಅನೇಕರು ಈ ಪ್ರಸಾದ ನಿಲಯಗಳ ಪ್ರಯೋಜನ ಪಡೆದಿದ್ದಾರೆ. ಇದು ನಿಜವಾದ ಸಾಧನೆ’ ಎಂದು ಹೇಳಿದರು.</p>.<p>‘ಸರ್ಕಾರವೊಂದು ಮಾಡುವ ಕಾರ್ಯವನ್ನು ಸ್ವಾಮೀಜಿ ಮಾಡಿದ್ದಾರೆ. 1937ರಲ್ಲಿ ಮೈಸೂರಿನಲ್ಲಿ ಚಿಕಿತ್ಸಾಲಯವೊಂದನ್ನು ತೆರೆಯಲು ₹ 40,000 ನೆರವು ನೀಡಿದ್ದರು. ಕನ್ನಡ ಭಾಷೆ, ಸಾಹಿತ್ಯದ ಮೇಲೆ ಅಪಾರ ಅಭಿಮಾನ ಹೊಂದಿದ್ದ ಶ್ರೀಗಳು ಕರ್ನಾಟಕದ ಏಕೀಕರಣಕ್ಕೆ ಶ್ರಮಿಸಿದ್ದರು. ಶ್ರೀಗಳ ಕಾರ್ಯವನ್ನು ಮಹಾತ್ಮ ಗಾಂಧೀಜಿ ಕೂಡ ಮೆಚ್ಚಿದ್ದರು’ ಎಂದರು.</p>.<p>ಸಂತೆಬೆನ್ನೂರಿನ ಮಹಾಂತೇಶ ಶಾಸ್ತ್ರಿ ಜಯದೇವ ಲೀಲೆ ಪ್ರವಚನ ನೀಡಿದರು. ಮಾಜಿ ಉಪಮೇಯರ್ ಸೋಗಿ ಶಾಂತಕುಮಾರ್, ಎಂ. ಜಯಕುಮಾರ್, ಅಂದನೂರು ಮುಪ್ಪಣ್ಣ , ಎಸ್. ಓಂಕಾರಪ್ಪ, ಕುಂಟೋಜಿ ಚನ್ನಪ್ಪ, ಲಂಬಿ ಮುರುಗೇಶ್, ಎಂ.ಸಿ.ರೇಖಾ, ಕುಸುಮಾ ಲೋಕೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>