<p><strong>ದಾವಣಗೆರೆ</strong>: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ಹಾಗೂ ರಾಜ್ಯದ ಮುಖ್ಯಮಂತ್ರಿ ಆಗುವ ಅರ್ಹತೆ ನನಗೂ ಇದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.</p><p>‘ಕುಟುಂಬ ರಾಜಕಾರಣ ಹಾಗೂ ಭ್ರಷ್ಟಾಚಾರದ ವಿರುದ್ಧ ಹೋರಾಟ ಮುಂದುವರಿಯಲಿದೆ. ರಾಜ್ಯವನ್ನು ಭ್ರಷ್ಟಾಚಾರ ಮುಕ್ತ ಮಾಡುವ ಅಗತ್ಯವಿದೆ. ಇದಕ್ಕೆ ನಮ್ಮ ಪ್ರಯತ್ನ ಮಾಡುತ್ತಿದ್ದೇವೆ’ ಎಂದು ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದರು.</p><p>‘ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರ ಗೃಹಪ್ರವೇಶವಿದೆ. ಅದಕ್ಕೆ ದೆಹಲಿಗೆ ಹೋಗುತ್ತಿದ್ದೇವೆ. ಪಕ್ಷದ ವರಿಷ್ಠರನ್ನು ಭೇಟಿ ಮಾಡಲಿದ್ದೇವೆ. ವರಿಷ್ಠರು ಸಿಗುತ್ತಾರೊ ಇಲ್ಲವೊ ಎಂಬುದನ್ನು ನಿಮಗೆ (ಮಾಧ್ಯಮ) ಏಕೆ ಹೇಳಲಿ’ ಎಂದು ಹರಿಹಾಯ್ದರು.</p><p>‘ಪಕ್ಷದ ಒಡೆದ ಮನಸುಗಳನ್ನು ಒಂದುಗೂಡಿಸುವ ಅಗತ್ಯ ಇದೆ. ಈ ನಿಟ್ಟಿನಲ್ಲಿ ಮಾಜಿ ಸಚಿವ ಬಿ.ಶ್ರೀರಾಮುಲು ಯಾತ್ರೆ ಕೈಗೊಳ್ಳುವ ನಿರ್ಧಾರವನ್ನು ಸ್ವಾಗತಿಸುವೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.</p>.ತಟಸ್ಥರು ಎಂದು ಹೇಳಿಕೊಳ್ಳುವ ನಾಯಕರು ಏನು ಎಂಬುದು ಗೊತ್ತು: ವಿಜಯೇಂದ್ರ ವಾಗ್ದಾಳಿ.ವಿಜಯೇಂದ್ರ ಇಳಿಸಲು ಪಟ್ಟು: ಬೊಮ್ಮಾಯಿ ಜತೆಗೆ ಯತ್ನಾಳ ಬಣ ರಣತಂತ್ರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ಹಾಗೂ ರಾಜ್ಯದ ಮುಖ್ಯಮಂತ್ರಿ ಆಗುವ ಅರ್ಹತೆ ನನಗೂ ಇದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.</p><p>‘ಕುಟುಂಬ ರಾಜಕಾರಣ ಹಾಗೂ ಭ್ರಷ್ಟಾಚಾರದ ವಿರುದ್ಧ ಹೋರಾಟ ಮುಂದುವರಿಯಲಿದೆ. ರಾಜ್ಯವನ್ನು ಭ್ರಷ್ಟಾಚಾರ ಮುಕ್ತ ಮಾಡುವ ಅಗತ್ಯವಿದೆ. ಇದಕ್ಕೆ ನಮ್ಮ ಪ್ರಯತ್ನ ಮಾಡುತ್ತಿದ್ದೇವೆ’ ಎಂದು ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದರು.</p><p>‘ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರ ಗೃಹಪ್ರವೇಶವಿದೆ. ಅದಕ್ಕೆ ದೆಹಲಿಗೆ ಹೋಗುತ್ತಿದ್ದೇವೆ. ಪಕ್ಷದ ವರಿಷ್ಠರನ್ನು ಭೇಟಿ ಮಾಡಲಿದ್ದೇವೆ. ವರಿಷ್ಠರು ಸಿಗುತ್ತಾರೊ ಇಲ್ಲವೊ ಎಂಬುದನ್ನು ನಿಮಗೆ (ಮಾಧ್ಯಮ) ಏಕೆ ಹೇಳಲಿ’ ಎಂದು ಹರಿಹಾಯ್ದರು.</p><p>‘ಪಕ್ಷದ ಒಡೆದ ಮನಸುಗಳನ್ನು ಒಂದುಗೂಡಿಸುವ ಅಗತ್ಯ ಇದೆ. ಈ ನಿಟ್ಟಿನಲ್ಲಿ ಮಾಜಿ ಸಚಿವ ಬಿ.ಶ್ರೀರಾಮುಲು ಯಾತ್ರೆ ಕೈಗೊಳ್ಳುವ ನಿರ್ಧಾರವನ್ನು ಸ್ವಾಗತಿಸುವೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.</p>.ತಟಸ್ಥರು ಎಂದು ಹೇಳಿಕೊಳ್ಳುವ ನಾಯಕರು ಏನು ಎಂಬುದು ಗೊತ್ತು: ವಿಜಯೇಂದ್ರ ವಾಗ್ದಾಳಿ.ವಿಜಯೇಂದ್ರ ಇಳಿಸಲು ಪಟ್ಟು: ಬೊಮ್ಮಾಯಿ ಜತೆಗೆ ಯತ್ನಾಳ ಬಣ ರಣತಂತ್ರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>