<p><strong>ದಾವಣಗೆರೆ</strong>: ಯಾವುದೇ ಮೂಲ ಸೌಕರ್ಯ ಕಲ್ಪಿಸದ ಕಾರಣ ಈ ಬಾರಿ ಮಹಾನಗರ ಪಾಲಿಕೆ ಚುನಾವಣೆಯನ್ನು ಬಹಿಷ್ಕರಿಸಲು 45ನೇ ವಾರ್ಡ್ ವ್ಯಾಪ್ತಿಯ ಕರೂರು ಗ್ರಾಮಸ್ಥರು ನಿರ್ಧರಿಸಿದ್ದಾರೆ. ಕರೂರು ಎಲ್ಲಿದೆ ಎಂದು ಪ್ರಶ್ನಿಸಿರುವ ಜಿಲ್ಲಾಧಿಕಾರಿ ಕರೂರಿಗೆ ಭೇಟಿ ಕೊಡಬೇಕು ಎಂದು ಕರೂರಿನಲ್ಲಿ ರಸ್ತೆಯಲ್ಲಿ ಕೂತು ಪ್ರತಿಭಟನೆ ನಡೆಸುತ್ತಿದ್ದಾರೆ.</p>.<p>ಸ್ಮಶಾನ ಜಾಗದಲ್ಲಿ ಭವನ ಕಟ್ಟಿದ್ದಾರೆ. ಸ್ಮಶಾನ ಇಲ್ಲ. ಶುದ್ಧ ಕುಡಿಯುವ ನೀರಿನ ಘಟಕ ಇಲ್ಲ. ಪಾಲಿಕೆ 15 ದಿನಕ್ಕೆ ಒಮ್ಮೆ ಮಾತ್ರ ನೀರು ಕೊಡುತ್ತಿದೆ. ಶಾಲೆ ಬೀಳುವ ಸ್ಥಿತಿಯಲ್ಲಿದೆ. ರಸ್ತೆಗಳು ಸರಿಯಿಲ್ಲ. ಬಸ್ ವ್ಯವಸ್ಥೆ ಇಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.</p>.<p>ಮನವಿ ಸ್ವೀಕರಿಸಲು ಪಾಲಿಕೆಯ ಕಾರ್ಯಪಾಲಕ ಎಂಜಿನಿಯರ್ ಭಾರತಿ ಅವರು ಬಂದರೂ ಮನವಿ ನೀಡದ ಪ್ರತಿಭಟನಕಾರರು, 'ಜಿಲ್ಲಾಧಿಕಾರಿಯೇ ಬರಬೇಕು. ವರ್ಷ ಕಳೆದರೂ ಇಲ್ಲೇ ಕೂರುತ್ತೇವೆ' ಎಂದು ಪಟ್ಟು ಹಿಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಯಾವುದೇ ಮೂಲ ಸೌಕರ್ಯ ಕಲ್ಪಿಸದ ಕಾರಣ ಈ ಬಾರಿ ಮಹಾನಗರ ಪಾಲಿಕೆ ಚುನಾವಣೆಯನ್ನು ಬಹಿಷ್ಕರಿಸಲು 45ನೇ ವಾರ್ಡ್ ವ್ಯಾಪ್ತಿಯ ಕರೂರು ಗ್ರಾಮಸ್ಥರು ನಿರ್ಧರಿಸಿದ್ದಾರೆ. ಕರೂರು ಎಲ್ಲಿದೆ ಎಂದು ಪ್ರಶ್ನಿಸಿರುವ ಜಿಲ್ಲಾಧಿಕಾರಿ ಕರೂರಿಗೆ ಭೇಟಿ ಕೊಡಬೇಕು ಎಂದು ಕರೂರಿನಲ್ಲಿ ರಸ್ತೆಯಲ್ಲಿ ಕೂತು ಪ್ರತಿಭಟನೆ ನಡೆಸುತ್ತಿದ್ದಾರೆ.</p>.<p>ಸ್ಮಶಾನ ಜಾಗದಲ್ಲಿ ಭವನ ಕಟ್ಟಿದ್ದಾರೆ. ಸ್ಮಶಾನ ಇಲ್ಲ. ಶುದ್ಧ ಕುಡಿಯುವ ನೀರಿನ ಘಟಕ ಇಲ್ಲ. ಪಾಲಿಕೆ 15 ದಿನಕ್ಕೆ ಒಮ್ಮೆ ಮಾತ್ರ ನೀರು ಕೊಡುತ್ತಿದೆ. ಶಾಲೆ ಬೀಳುವ ಸ್ಥಿತಿಯಲ್ಲಿದೆ. ರಸ್ತೆಗಳು ಸರಿಯಿಲ್ಲ. ಬಸ್ ವ್ಯವಸ್ಥೆ ಇಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.</p>.<p>ಮನವಿ ಸ್ವೀಕರಿಸಲು ಪಾಲಿಕೆಯ ಕಾರ್ಯಪಾಲಕ ಎಂಜಿನಿಯರ್ ಭಾರತಿ ಅವರು ಬಂದರೂ ಮನವಿ ನೀಡದ ಪ್ರತಿಭಟನಕಾರರು, 'ಜಿಲ್ಲಾಧಿಕಾರಿಯೇ ಬರಬೇಕು. ವರ್ಷ ಕಳೆದರೂ ಇಲ್ಲೇ ಕೂರುತ್ತೇವೆ' ಎಂದು ಪಟ್ಟು ಹಿಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>